ಧರ್ಮಸ್ಥಳ ಬುರುಡೆ ಕೇಸ್‌: ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ ಮಾಡವಂತೆ ಎಸ್​ಐಟಿಗೆ ಗಿರೀಶ್ ಮಟ್ಟಣ್ಣನವರ್​​ ದೂರು

ಧರ್ಮಸ್ಥಳದ ಪಾವಿತ್ರ್ಯತೆಗೆ ಮಸಿ ಬಳಿಯಲು ಯತ್ನಿಸಿದ ತಲೆ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 200 ಕೋಟಿ ಫಂಡ್, ಅಷ್ಟೇ ಅಲ್ಲದೆ ಬಹುಭಾಷಾ ನಟರ ಹೆಸರೂ ತಳುಕು ಹಾಕಿಕೊಂಡಿದೆ. ಸದ್ಯ ಈ ವಿಚಾರವಾಗಿ ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ SIT ಕಚೇರಿಗೆ ಭೇಟಿ ನೀಡಿ ಚಿನ್ನಯ್ಯ ವಿರುದ್ಧ ದೂರು ನೀಡಿದ್ದಾರೆ. ಜೊತೆಗೆ ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್, 200 ಕೋಟಿ ಹಣ ತನಿಖೆ ಹಾಗೂ ಜಾಮೀನು ರದ್ದತಿಗೆ ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಬುರುಡೆ ಕೇಸ್‌: ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ ಮಾಡವಂತೆ ಎಸ್​ಐಟಿಗೆ ಗಿರೀಶ್ ಮಟ್ಟಣ್ಣನವರ್​​ ದೂರು
ಗಿರೀಶ್ ಮಟ್ಟಣ್ಣನವರ್, ಚಿನ್ನಯ್ಯ
Image Credit source: tv9 kannada
Edited By:

Updated on: Jun 13, 2026 | 3:45 PM

ಮಂಗಳೂರು, ಜೂನ್​​ 13: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ (Dharmasthala Mass Burial Case) ಸಂಬಂಧಿಸಿದಂತೆ ಮಾಸ್ಕ್​ಮ್ಯಾನ್ ಚಿನ್ನಯ್ಯ, ತಮ್ಮದೇ ಬುರುಡೆ ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದಾನೆ. 200 ಕೋಟಿ ರೂ ಫಂಡಿಂಗ್ ಮತ್ತು ನಟ ಪ್ರಕಾಶ್ ರಾಜ್ ಹೆಸರನ್ನು ಉಲ್ಲೇಖಿಸಿ ನ್ಯಾಯಾಲಯಕ್ಕೆ ರಿಟ್ ಅರ್ಜಿ  ಕೂಡ ಸಲ್ಲಿದ್ದಾನೆ. ಇದೀಗ ಗಿರೀಶ್ ಮಟ್ಟಣ್ಣನವರ್​​ (Girish Mattannavar), ಚಿನ್ನಯ್ಯ ಬ್ರೈನ್ ಮ್ಯಾಪಿಂಗ್​​ ಮತ್ತು ಆತ ಸಲ್ಲಿರುವ ರಿಟ್ ಅರ್ಜಿ ಮೇಲೆ ತನಿಖೆ ಮಾಡುವಂತೆ ಎಸ್​​ಐಟಿಗೆ ದೂರು ನೀಡಿದ್ದಾರೆ.

ಮುಖ್ಯಾಂಶಗಳು

  • ಚಿನ್ನಯ್ಯ ವಿರುದ್ಧ ಮಟ್ಟಣ್ಣನವರಿಂದ SITಗೆ ದೂರು
  • ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್​​​ಗೆ ಒತ್ತಾಯ
  • ಚಿನ್ನಯ್ಯನ ಬಳಿ ಕೈ-ಕಾಲು ಒತ್ತಿಸಿಕೊಂಡಿದ್ದು ನಿಜ ಎಂದ ಮಟ್ಟಣ್ಣನವರ್

ಧರ್ಮಸ್ಥಳ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಸ್​​ಐಟಿ ಕಚೇರಿಗೆ ದಿಢೀರ್ ಭೇಟಿ ನೀಡಿದ ಗಿರೀಶ್ ಮಟ್ಟಣ್ಣನವರ್, ಟಿ.ಜಯಂತ್ ಮತ್ತು ಯೂಟ್ಯೂಬರ್ ಅಭಿಷೇಕ್ ಚಿನ್ನಯ್ಯ ವಿರುದ್ಧ ದೂರು ನೀಡಿದ್ದಾರೆ.

ಚಿನ್ನಯ್ಯನ ಮೇಲೆ ದೂರು ನೀಡಿದ ಗಿರೀಶ್ ಮಟ್ಟಣ್ಣನವರ್

ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ ಮಾಡವಂತೆ ಎಸ್​​ಐಟಿಗೆ ದೂರು ನೀಡಿರುವ ಗಿರೀಶ್ ಮಟ್ಟಣ್ಣನವರ್​​, ಚಿನ್ನಯ್ಯನ ಹೇಳಿಕೆ ಪ್ರಕಾರ ನಮ್ಮೆಲ್ಲರನ್ನು ತನಿಖೆಗೆ ಒಳಪಡಿಸಬೇಕು. ನನ್ನ ಬ್ರೈನ್ ಮ್ಯಾಪಿಂಗ್​​ನ್ನು ಲೈವ್​ನಲ್ಲಿ ಮಾಡಲಿ ಎಂದು ಹೇಳಿದ್ದಾರೆ. 200 ಕೋಟಿ ರೂ ಹಣದ ತನಿಖೆ ಸೇರಿದಂತೆ ಆತ ಸಲ್ಲಿಸಿರುವ ರಿಟ್ ಅರ್ಜಿ ಮೇಲೆ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಆತನ ಜಾಮೀನು ಅರ್ಜಿ ರದ್ದು ಮಾಡಲು ನ್ಯಾಯಾಲಯಕ್ಕೆ ಎಸ್​ಐಟಿ ಅರ್ಜಿ ಹಾಕಬೇಕು ಮತ್ತು ಚಿನ್ನಯ್ಯನಿಗೆ ಪೊಲೀಸ್ ಭದ್ರತೆ ನೀಡಬೇಕು ಎಂದು ಗಿರೀಶ್ ಮಟ್ಟಣ್ಣನವರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗಿರೀಶ್ ಮಟ್ಟಣ್ಣನವರ್​ ಹೇಳಿದ್ದಿಷ್ಟು 

ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣನವರ್, ಚಿನ್ನಯ್ಯನ ಬೇಡಿಕೆಯಂತೆ ಚಂದ್ರಶೇಖರ್ ಸ್ವಾಮೀಜಿ ಬಳಿ ನಾವು ಹೋಗಿದ್ದು ನಿಜ. ಪಾಯಿಂಟ್ ತೋರಿಸುವಾಗ ಎಲ್ಲೆಲ್ಲೋ ಹೋಗುತ್ತಿದ್ದೇನೆ.‌ ಕಣ್ಣು ಮಂಜು ಮಂಜಾಗುತ್ತಿದೆ ಅಂತಾ ಚಿನ್ನಯ್ಯ ಹೇಳಿದ್ದ. ಹೀಗಾಗಿ ಮಾಟ, ಮಂತ್ರ ಸಂಬಂಧ ಚಂದ್ರಶೇಖರ ಸ್ವಾಮೀಜಿ ಬಳಿ ಹೋಗಿದ್ವಿ. ಅವರು ಯಾವ ಪೊಲೀಸರಿಗೂ ಶಿಫಾರಸ್ಸು ಮಾಡಿಲ್ಲ ಎಂದಿದ್ದಾರೆ.

ಪ್ರಕಾಶ್ ರಾಜ್ ಅವರೇ ಅದನ್ನು ಹೇಳುತ್ತಾರೆ‌

ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಬೆಂಬಲ ವಿಚಾರವಾಗಿ ಮಾತನಾಡಿದ ಅವರು,
ಪ್ರಕಾಶ್ ರಾಜ್ ಕರೆ ಮಾಡಿದ್ದ ವಿಚಾರ ನಾನು ಹೇಳಲ್ಲ. ಪ್ರಕಾಶ್ ರಾಜ್ ಅವರೇ ಅದನ್ನು ಹೇಳುತ್ತಾರೆ‌. ನೈತಿಕವಾಗಿ ಸಾಕಷ್ಟು ಜನ ಬೆಂಬಲ ಕೊಟ್ಟಿದ್ದಾರೆ ಎಂದರು.

ಚಿನ್ನಯ್ಯನ ಬಳಿ ಕೈ-ಕಾಲು ಒತ್ತಿಸಿಕೊಂಡಿದ್ದು ನಿಜ ಎಂದ ಮಟ್ಟಣ್ಣನವರ್

ಇನ್ನು ಚಿನ್ನಯ್ಯನಿಗೆ ಹಿಂಸೆ ಕೊಟ್ಟು ಕೈ-ಕಾಲು ಒತ್ತಿಸಿಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚಿನ್ನಯ್ಯನ ಬಳಿ ಕೈ-ಕಾಲು ಒತ್ತಿಸಿಕೊಂಡಿದ್ದು ನಿಜ. ಆತ ನಮ್ಮ ಜೊತೆ ಬಹಳ ಪ್ರೀತಿಯಿಂದ ಇದ್ದ. ನಾವು ಬೇಡ ಅಂದ್ರು ಕಾಲು ಒತ್ತುತ್ತಿದ್ದ. ನನಗೆ ಕಾಲು ನೋವಿದ್ದು ನನ್ನ ಪತ್ನಿ ಒಂದು ತೈಲ ಕೊಟ್ಟಿದ್ದರು. ಅದು ಚಿನ್ನಯ್ಯನಿಗೆ ಗೊತ್ತಿತ್ತು. ಆದ್ರಿಂದ ಆತನೇ ಹಿಂದೆ ಬಿದ್ದು ನನ್ನ ಕಾಲನ್ನು ಒತ್ತುತ್ತಿದ್ದ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:25 pm, Sat, 13 June 26

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us