ಧರ್ಮಸ್ಥಳ ಪ್ರಕರಣ: ಅಂತಿಮ ಹಂತ ತಲುಪಿದ ಬುರುಡೆ ಚಿನ್ನಯ್ಯ ಕೇಸ್, ಎಸ್​ಐಟಿ ಚಾರ್ಜ್​​ಶೀಟ್​ ಬಹುತೇಕ ಸಿದ್ಧ

ಧರ್ಮಸ್ಥಳ ಪ್ರಕರಣ ಸಂಬಂಧ ಬುರುಡೆ ಚಿನ್ನಯ್ಯನ ವಿರುದ್ಧ ತನಿಖೆ ಹಾಗೂ ವಿಚಾರಣೆಯನ್ನು ಬಹುತೇಕ ಮುಕ್ತಾಯಗೊಳಿಸಿರುವ ಎಸ್​ಐಟಿ ಚಾರ್ಜ್​ಶೀಟ್ ಸಿದ್ಧಪಡಿಸುತ್ತಿದೆ. ಈ ತಿಂಗಳ ಕೊನೆಯಲ್ಲೇ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸುವ ಸಾಧ್ಯತೆ ಇದೆ. ಇದರೊಂದಿಗೆ, ಪ್ರಕರಣದ ಒಂದು ಆಯಾಮದ ತನಿಖೆ ಮಹತ್ವದ ಘಟ್ಟಕ್ಕೆ ಬಂದಂತಾಗಿದೆ.

ಧರ್ಮಸ್ಥಳ ಪ್ರಕರಣ: ಅಂತಿಮ ಹಂತ ತಲುಪಿದ ಬುರುಡೆ ಚಿನ್ನಯ್ಯ ಕೇಸ್, ಎಸ್​ಐಟಿ ಚಾರ್ಜ್​​ಶೀಟ್​ ಬಹುತೇಕ ಸಿದ್ಧ
ಚಿನ್ನಯ್ಯ
Edited By:

Updated on: Oct 08, 2025 | 9:25 AM

ಮಂಗಳೂರು, ಅಕ್ಟೋಬರ್ 8: ಧರ್ಮಸ್ಥಳದಲ್ಲಿ (Dharmasthala Case) ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ಬುರುಡೆ ಹೊತ್ತುತಂಬಿದ್ದ. ಆದರೆ, ಚಿನ್ನಯ್ಯನ ಈ ಕಥೆಗಳೆಲ್ಲ ಸುಳ್ಳು ಎಂದು ಪೊಲೀಸರಿಗೆ ಗೊತ್ತಾದ ಬೆನ್ನಲ್ಲೇ ಜೈಲುಪಾಲಾಗಿದ್ದಾನೆ. ಇದೀಗ, ಚಿನ್ನಯ್ಯನ ಬುರುಡೆ ಕೇಸ್​​ ತನಿಖೆ ಅಂತಿಮ ಘಟ್ಟಕ್ಕೆ ತಲುಪಿದೆ. ಜುಲೈ 25 ರಿಂದ ಈವರೆಗಿನ ಅಂತಿಮ ವರದಿ ತಯಾರಿಸುವ ಪ್ರಕ್ರಿಯೆಯಲ್ಲಿರುವ ಎಸ್ಐಟಿ ಎಲ್ಲಾ ದಾಖಲೆ, ಹಲವು ಸಾಕ್ಷ್ಯ ಹಾಗೂ ಹೇಳಿಕೆ ದಾಖಲು ಪ್ರಕ್ರಿಯೆ ಪೂರ್ಣಗೊಳಿಸಿದೆ.

ಬುರುಡೆ ಚಿನ್ನಯ್ಯನ ಕೇಸ್​ನಲ್ಲಿ ಅಕ್ಟೊಬರ್ 30ರ ಒಳಗಡೆ ಚಾರ್ಜ್​ಶೀಟ್ ತಯಾರಿಗೆ ಸಿದ್ಧತೆ ನಡೆದಿದೆ. ನವೆಂಬರ್ 23 ರ ಒಳಗೆ ಬೆಳ್ತಂಗಡಿ ಕೋರ್ಟ್​​ಗೆಚಾರ್ಜ್​ಶೀಟ್ ಸಲ್ಲಿಕೆ ಅಗಲಿದೆ.

ವಾಸಂತಿ ಪ್ರಕರಣದ ಬಗ್ಗೆ ಸುಜಾತಾ ಭಟ್ ಸ್ಫೋಟಕ ಹೇಳಿಕೆ

ಧರ್ಮಸ್ಥಳದಲ್ಲಿ ನನ್ನ ಪುತ್ರಿ ಅನನ್ಯಾ ಭಟ್​ ಕಾಣೆಯಾಗಿದ್ದಾಳೆ ಎಂದು ಸಾಲು ಸಾಲು ಬುರುಡೆ ಬಿಟ್ಟಿದ್ದ ಸುಜಾತ ಭಟ್​ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಬುರುಡೆ ಗ್ಯಾಂಗ್​ ಜೊತೆ ಸೇರಿ ಕೆಟ್ಟೆ. ನನ್ನಿಂದ ತಪ್ಪಾಗಿದೆ ಎಂದು ‘ಟಿವಿ9’ ಎದುರು ಕಣ್ಣೀರಿಟ್ಟಿದ್ದಾರೆ. ಅಲ್ಲದೆ, ಧರ್ಮಸ್ಥಳ ದೇವರಿಗೆ, ವೀರೇಂದ್ರ ಹೆಗ್ಗಡೆಯವರಿಗೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಅಲ್ಲದೆ, ವಾಸಂತಿ ಫೋಟೋ ಹಿಡಿದು ಮಗಳು ಅನನ್ಯಾ ಭಟ್​ ಎಂದಿದ್ದ ಸುಜಾತ ಭಟ್, ಇದೀಗ ವಾಸಂತಿ ಸತ್ತಿಲ್ಲ ಬದುಕಿದ್ದಾಳೆ ಎಂದಿದ್ದಾರೆ. ವಾಸಂತಿ ಗಂಡ ಶ್ರೀವತ್ಸ ಮತ್ತು ನಟನ ಸೋದರ ಸ್ನೇಹಿತರು. ಆತನ ಜತೆ ವಾಸಂತಿ ಹೋಗಿರುವ ಅನುಮಾನವಿದೆ ಎಂದಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಸುಜಾತ ಭಟ್ ಕೇಸ್​ನಲ್ಲಿ ದಕ್ಷಿಣ ಭಾರತದ ಹೆಸರಾಂತ ನಟನ ಸಹೋದರನಿಗೆ ಸಂಕಷ್ಟ? ಎಸ್​ಐಟಿ ನೋಟಿಸ್ ಸಾಧ್ಯತೆ

ಬೆಂಗಳೂರಿನಲ್ಲಿ ಪತಿ ಶ್ರೀವತ್ಸ ಜತೆ ವಾಸವಿದ್ದ ವಾಸಂತಿ ಮನೆಗೆ ಖ್ಯಾತ ನಟನ ತಮ್ಮ ಬರುತ್ತಿದ್ದ. ಮದುವೆ ಆದ ಕೆಲ ತಿಂಗಳಲ್ಲೇ ವಾಸಂತಿ ನಾಪತ್ತೆಯಾಗಿ ಕೊಡಗಿನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಶವ ಸಿಗುತ್ತಿದ್ದಂತೆಯೇ ಖ್ಯಾತ ನಟನ ಸೋದರ ಬೆಂಗಳೂರಿಂದ ಕಾಲ್ಕಿತ್ತಿದ್ದ. ತಮಿಳುನಾಡಿಗೆ ಹೋಗಿ ಸೆಟಲ್​ ಆಗಿದ್ದ. ಆತನ ವಿಚಾರಣೆ ಕೂಡ ಆಗಬೇಕಿದ್ದು ವಿಳಾಸ ಸಿಗದೆ ಆತನಿಗೆ ಎಸ್ಐಟಿ ನೋಟಿಸ್ ಕೊಡಲು ಸಾಧ್ಯವಾಗಿಲ್ಲ. ಈಗ ಈ ಸ್ಟಾರ್ ನಟನ ಸಹೋದರನಿಗೆ ಎಸ್​​ಐಟಿ ನೋಟಿಸ್ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us