AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಕೇಸ್​: ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ ರಹಸ್ಯ ರಿವೀಲ್

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಷಡ್ಯಂತ್ರಕಾರರ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಓರ್ವ ಸ್ವಾಮೀಜಿ ಬಗ್ಗೆ ಕೂಡ ಉಲ್ಲೇಖಿಸಿದ್ದಾರೆ. ಇಡೀ ಪ್ರಕರಣದಲ್ಲಿ ಸ್ವಾಮೀಜಿ ಕುತೂಹಲ ಮೂಡಿಸಿದ್ದರು. ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ ಯಾರು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಧರ್ಮಸ್ಥಳ ಕೇಸ್​: ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ ರಹಸ್ಯ ರಿವೀಲ್
ಧರ್ಮಸ್ಥಳ ಕೇಸ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jun 13, 2026 | 9:27 PM

Share

ಮಂಗಳೂರು, ಜೂನ್​ 13: ಧರ್ಮಸ್ಥಳದ (Dharmasthala Case) ವಿರುದ್ಧ ಹೆಣೆದಿದ್ದ ಕರಾಳ ಷಡ್ಯಂತ್ರ ಬಯಲಾಗುತ್ತಿದೆ. ಧರ್ಮಸ್ಥಳದಲ್ಲಿ ಶವ ಸಿಗುತ್ತೆ ಅಂತಾ SIT ಅಧಿಕಾರಿಗಳಿಂದ ಗುಂಡಿ ತೋಡಿಸಿದ್ದ ಮಾಸ್ಕ್​ಮ್ಯಾನ್ ಚಿನ್ನಯ್ಯ, ಹೈಕೋರ್ಟ್​​​​​​ನಲ್ಲಿ ರಿಟ್ ಅರ್ಜಿ ಸಲ್ಲಿಸುವ ಮೂಲಕ ತಮ್ಮದೇ ಬುರುಡೆ ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದಾನೆ.  ನಿನ್ನೆ ಯಾರು ಪ್ರೊಡ್ಯೂಸರ್? ಎಷ್ಟು ಕೋಟಿ ಫಂಡಿಂಗ್? ಅನ್ನೋದೆಲ್ಲ ರಿವೀಲ್ ಆಗಿತ್ತು. ಜೊತೆ ನಟ ಪ್ರಕಾಶ್​​ರಾಜ್ ಹೆಸರನ್ನು ಉಲ್ಲೇಖಿಸಿದ್ದ. ಆದರೆ ಇಂದು ಧರ್ಮಸ್ಥಳ ಬುರುಡೆ ರಹಸ್ಯದ ಹಿಂದೆ ಸ್ವಾಮೀಜಿ ಸಂಪರ್ಕ ಇರುವುದು ರಿವೀಲ್ ಆಗಿದೆ.

ಮುಖ್ಯಾಂಶಗಳು

  • ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ
  • ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಸ್ವಾಮೀಜಿ ಭೇಟಿ
  • ಚಿನ್ನಯ್ಯನ ರಿಟ್ ಅರ್ಜಿಯಲ್ಲಿ ಸ್ವಾಮೀಜಿ ಹೆಸರು ಉಲ್ಲೇಖ

ಚಂದ್ರಶೇಖರ್ ಸ್ವಾಮೀಜಿ ಯಾರು?

ಧರ್ಮಸ್ಥಳ ಬುರುಡೆ ಗ್ಯಾಂಗ್ ಮುಲ್ಕಿ ಆಶ್ರಮದ ಚಂದ್ರಶೇಖರ್ ಸ್ವಾಮೀಜಿಯನ್ನ ಭೇಟಿಯಾದ ಬಗ್ಗೆಯೂ ಚಿನ್ನಯ್ಯನ ತನ್ನ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ. ಷಡ್ಯಂತ್ರಕಾರರ ಮನವಿ ಮೇರೆಗೆ ಸ್ವಾಮೀಜಿಯೂ ಪೊಲೀಸರನ್ನು ಭೇಟಿಯಾಗಿದ್ದರಂತೆ. ಮಂಗಳೂರು ಪೊಲೀಸ್ ಅಧೀಕ್ಷಕರರನ್ನು ಸ್ವಾಮೀಜಿ ಭೇಟಿ ಮಾಡಿದ್ದರು. ಜೊತೆಗೆ ಬೆಂಗಳೂರಿನ ಹಿರಿಯ ಪೊಲೀಸರನ್ನೂ ಸ್ವಾಮೀಜಿ ಸಂಪರ್ಕಿಸಿದ್ದರು. ಪೊಲೀಸರಿಗೆ ಅರ್ಜಿದಾರರು ದೂರು ದಾಖಲಿಸಿದ್ದಾರೆಂದು ತಿಳಿಸಿದ್ದರು. ಚಿನ್ನಯ್ಯನ ದೂರು ಸ್ವೀಕರಿಸುವಂತೆ ಸ್ವಾಮೀಜಿ ಪ್ರಭಾವ ಬೀರಿದ್ದಾರೆ ಎಂದು ಚಿನ್ನಯ್ಯ ತನ್ನ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.

ಚಿನ್ನಯ್ಯ ಬೇಡಿಕೆಯಂತೆ ಸ್ವಾಮೀಜಿ ಬಳಿ ಹೋಗಿದ್ವಿ ಎಂದ ಮಟ್ಟಣ್ಣನವರ್

ಇನ್ನು ಚಂದ್ರಶೇಖರ್ ಸ್ವಾಮೀಜಿ ಭೇಟಿ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಪ್ರತಿಕ್ರಿಯಿಸಿದ್ದು, ಚಿನ್ನಯ್ಯನ ಬೇಡಿಕೆಯಂತೆ ಚಂದ್ರಶೇಖರ್ ಸ್ವಾಮೀಜಿ ಬಳಿ ಹೋಗಿದ್ವಿ ಅಂತ ಹೇಳಿದ್ದಾರೆ. ಮತ್ತೊಂದ್ಕಡೆ 200 ಕೋಟಿ ರೂ ಫಂಡಿಂಗ್ ಸುಳ್ಳು, ಕೋಮುಗಲಭೆ ಎಬ್ಬಿಸುವ ಹುನ್ನಾರ ಎಂದು ಈ ಬಗ್ಗೆಯೂ ಗಿರೀಶ್ ಮಟ್ಟಣ್ಣನವರ್ ಸ್ಪಷ್ಟನೆ ನೀಡಿದ್ದಾರೆ.

ಗೃಹ ಸಚಿವರನ್ನು ಭೇಟಿಯಾದ ಎಸ್​ಐಟಿ ಮುಖ್ಯಸ್ಥ

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ಹೈಕೋರ್ಟ್ ವರದಿ ಕೇಳಿದೆ. ಈ ಬೆನ್ನಲ್ಲೇ SIT ಅಲರ್ಟ್ ಆಗಿದೆ. ಇವತ್ತು ಗೃಹ ಸಚಿವರನ್ನು ಎಸ್​ಐಟಿ ಮುಖ್ಯಸ್ಥ ಪ್ರಣಬ್ ಮೋಹಂತಿ ಭೇಟಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿ ಕುರಿತು ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್