ಧರ್ಮಸ್ಥಳ ಕೇಸ್​: ‘ಬುರುಡೆ’ ಕಾಟಕ್ಕೆ ಬೆಚ್ಚಿಬಿದ್ದಿದ್ದ ಆತ​​; SIT ವರದಿಯಲ್ಲಿ ಸ್ಫೋಟಕ ಮಾಹಿತಿ

ಧರ್ಮಸ್ಥಳ ಷಡ್ಯಂತ್ರ ಪ್ರಕರಣದಲ್ಲಿ ಎಸ್​ಐಟಿ ವರದಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದೆ. ಅಪಪ್ರಚಾರಕ್ಕೆ ಬಳಸಿದ 'ಬುರುಡೆ' ಜೊತೆಗಿದ್ದಾಗ ಗ್ಯಾಂಗ್ ಸದಸ್ಯ ಜಯಂತ್​ಗೆ ಕೆಟ್ಟ ಕನಸುಗಳು ಬಿದ್ದು ಭಯಭೀತನಾಗಿದ್ದ. ದೆಹಲಿಯಲ್ಲಿ ಬುರುಡೆ ಬಿಟ್ಟು ಬೆಂಗಳೂರಿಗೆ ಮರಳಿದ್ದ ಆತ, ನಂತರ ಅದನ್ನು ಮತ್ತೆ ತಂದಿದ್ದ. ಸುಜಾತಾ ಭಟ್ ಅರಿವಿಲ್ಲದೆ ಬುರುಡೆ ಪಕ್ಕ ಮಲಗಿದ್ದ ಘಟನೆ ಬಗ್ಗೆಯೂ ಉಲ್ಲೇಖಿಸಲಾಗಿದೆ. ಈ ವರದಿ ಹಲವು ಕುತೂಹಲಕಾರಿ ಅಂಶಗಳನ್ನು ತೆರೆದಿಟ್ಟಿದೆ.

ಧರ್ಮಸ್ಥಳ ಕೇಸ್​: ಬುರುಡೆ ಕಾಟಕ್ಕೆ ಬೆಚ್ಚಿಬಿದ್ದಿದ್ದ ಆತ​​; SIT ವರದಿಯಲ್ಲಿ ಸ್ಫೋಟಕ ಮಾಹಿತಿ
ಸುಜಾತಾ ಭಟ್​​ ಮತ್ತು ಜಯಂತ್​​
Edited By:

Updated on: Dec 29, 2025 | 12:21 PM

ಮಂಗಳೂರು, ಡಿಸೆಂಬರ್​​ 29: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಕೋರ್ಟ್​ಗೆ ಎಸ್​ಐಟಿ ಸಲ್ಲಿಸಿದ ಪ್ರಾಥಮಿಕ ವರದಿ ಹಲವಾರು ಕುತೂಹಲಕಾರಿ ಅಂಶಗಳನ್ನು ಬಹಿರಂಗಗೊಳಿಸಿದೆ. ಧರ್ಮಸ್ಥಳದ ವಿರುದ್ಧ ಆರೋಪ ಹೊರಿಸಿದ್ದ ಬುರುಡೆ ಗ್ಯಾಂಗ್​​ ಸದಸ್ಯನೋರ್ವನಿಗೆ ಅವರು ತಂದಿದ್ದ ಬುರುಡೆಯೇ ಕಾಟ ಕೊಟ್ಟಿತ್ತು ಎನ್ನುವ ಮಾಹಿತಿ SIT ವರದಿಯಲ್ಲಿ ಉಲ್ಲೇಖವಾಗಿದೆ.

ಗ್ಯಾಂಗ್​​ ಸದಸ್ಯ ಜಯಂತ್​​ ಬುರುಡೆಯನ್ನ ರೈಲಿನ ಮೂಲಕ ದೆಹಲಿಗೂ ತೆಗೆದುಕೊಂಡು ಹೋಗಿದ್ದ. ಇತರರಾದ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್ ಮತ್ತು ಸುಜಾತಾ ಫ್ಲೈಟ್​​ ಮೂಲಕ ತೆರಳಿದ್ದರು. ಈ ವೇಳೆ ಒಂದೇ ರೂಂನಲ್ಲಿ ಚಿನ್ನಯ್ಯ, ಮಟ್ಟಣ್ಣನವರ್​ ಮತ್ತು ಜಯಂತ್​ ಮಲಗಿದ್ದ ವೇಳೆ ಕೆಟ್ಟ ಕನಸು ಬಿದ್ದು ಜಯಂತ್​​ ಕಿರುಚಿಕೊಂಡಿದ್ದ. ಇದೇ ಕಅರಣಕ್ಕೆ ಹೆದರಿ ವಾಪಸ್ ಬುರುಡೆ ತರಲು ಒಪ್ಪದೆ ಅದನ್ನು ದೆಹಲಿಯಲ್ಲೇ ಬಿಟ್ಟು ಬೆಂಗಳೂರಿಗೆ ವಾಪಸ್ ಆಗಿದ್ದ. ಬಳಿಕ ಮತ್ತೆ ವಿಮಾನದ ಮೂಲದ ದೆಹಲಿಗೆ ತೆರಳಿದ್ದ ಜಯಂತ್​, ರೈಲಿನ ಮೂಲಕ ದೆಹಲಿಯಿಂದ ನೇರವಾಗಿ ಮಂಗಳೂರಿಗೆ ಬುರುಡೆ ತಂದಿದ್ದ. ತಿಮರೋಡಿ ಮನೆಗೆ ಅದನ್ನು ಕೊಂಡೊಯ್ದಿದ್ದ ಎಂದು ವರದಿಯಲ್ಲಿ ಎಸ್​​ಐಟಿ ಉಲ್ಲೇಖಿಸಿದೆ.

ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​; SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

ಬುರುಡೆ ಜೊತೆ ರಾತ್ರಿ ಕಳೆದಿದ್ದ ಸುಜಾತಾ

ದೆಹಲಿಯಲ್ಲಿ ಪ್ರತ್ಯೇಕ ರೂಮ್​ನಲ್ಲಿ ಇದ್ದ ಸುಜಾತಾ ಭಟ್ ಅರಿವಿಲ್ಲದೇ ಬುರುಡೆ ಜೊತೆ ರಾತ್ರಿ ಕಳೆದಿದ್ದರು. ದೆಹಲಿಯ ವಿಠ್ಠಲ ಮಂದಿರದಲ್ಲಿ ಆರೋಪಿಗಳು ರೂಂ ಮಾಡಿದ್ದು, ಸುಜಾತಾ ಭಟ್ ಇದ್ದ ರೂಂ ಮಂಚದ ಕೆಳಗೆ ಜಯಂತ್ ಬುರುಡೆ ಬಾಕ್ಸ್​​ ಇಟ್ಟಿದ್ದ. ಈ ವೇಳೆ ಬಾಕ್ಸ್​ನಲ್ಲಿ ಏನಿದೆ ಅಂತಾ ಸುಜಾತಾ ಭಟ್ ಕೇಳಿದ್ದು, ಏನಿಲ್ಲ ಅಂತಾ ಹೇಳಿ ಜಯಂತ್ ಸುಮ್ಮನಾಗಿದ್ದ. ಹೀಗಾಗಿ ಅಂದು ರಾತ್ರಿ ಸುಜಾತಾ ಭಟ್ ಮಲಗಿದ್ದ ಮಂಚದ ಕೆಳಗೇ ಬುರುಡೆ ಇತ್ತು. ಅದೇ ರಾತ್ರಿ ಜಯಂತ್​​​ಗೆ ಕೆಟ್ಟ ಕನಸು ಕೂಡ ಬಿದ್ದಿತ್ತು ಎಂದು ಕೋರ್ಟ್​ಗೆ ಎಸ್​ಐಟಿ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us