AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡ ಮಹಜರಿಗೆ ಎಸ್​ಐಟಿಗೇ ಗೊಂದಲ! ಕಾನೂನು ತಜ್ಞರಿಗೆ ಮೊರೆ

ಧರ್ಮಸ್ಥಳ ‘ಬುರುಡೆ’ ಪ್ರಕರಣದ ತನಿಖೆಯಲ್ಲಿ ಎಸ್ಐಟಿ ಮಹಜರು ನಡೆಸುವ ವಿಚಾರದಲ್ಲಿ ಸಂಕಷ್ಟಕ್ಕೀಡಾಗಿದೆ. ವಿಠ್ಠಲ ಗೌಡ ತೋರಿಸಿದ ಸ್ಥಳದಲ್ಲಿ ಮಾತ್ರ ಮಹಜರು ನಡೆಸಬೇಕೇ ಅಥವಾ ಸಂಪೂರ್ಣ ಬಂಗ್ಲೆಗುಡ್ಡದಲ್ಲಿ ನಡೆಸಬೇಕೇ ಎಂಬ ಗೊಂದಲವಿದೆ. ಅರಣ್ಯ ಇಲಾಖೆಯ ಅನುಮತಿಯೂ ಅಗತ್ಯವಾಗಿದ್ದು, ಕಾನೂನು ತಜ್ಞರ ಸಲಹೆಯನ್ನೂ ಎಸ್ಐಟಿ ಪಡೆಯುತ್ತಿದೆ.

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡ ಮಹಜರಿಗೆ ಎಸ್​ಐಟಿಗೇ ಗೊಂದಲ! ಕಾನೂನು ತಜ್ಞರಿಗೆ ಮೊರೆ
ಬಂಗ್ಲೆಗುಡ್ಡ ಮಹಜರಿಗೆ ಎಸ್​ಐಟಿಗೇ ಗೊಂದಲ!
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma|

Updated on: Sep 16, 2025 | 2:32 PM

Share

ಬೆಂಗಳೂರು, ಸೆಪ್ಟೆಂಬರ್ 16: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ (Dharmasthala Case) ಎಸ್​ಐಟಿ ತನಿಖೆ ಚುರುಕುಗೊಂಡಿದೆ. ಆರೋಪ ಕೇಳಿ ಬಂದ ಎಲ್ಲರನ್ನೂ ಕರೆದು ವಿಚಾರಣೆ ಮಾಡಲಾಗುತ್ತಿದೆ. ಅಗತ್ಯಬಿದ್ದರೆ ನೋಟಿಸ್ ಕೊಟ್ಟು ವಿಚಾರಣೆ ಕೂಡ ಮಾಡಲಾಗುತ್ತಿದೆ. ಆದರೆ, ಇದೀಗ ಮಹಜರು ವಿಚಾರದಲ್ಲಿ ಎಸ್​ಐಟಿ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಈ ಹಿಂದೆ ಆಗಿರುವ ತಪ್ಪು ಮತ್ತೆ ಮರುಳಿಸಬಾರದು ಎಂಬ ಯೋಚನೆಯನ್ನೂ ಮಾಡಿದೆ. ಆದರೆ, ಚಿನ್ನಯ್ಯ ತೋರಿಸಿ ರೀತಿಯೇ ವಿಠ್ಠಲ ಗೌಡ ತೋರಿಸಿದ ಜಾಗವನ್ನು ಮಹಜರು ಮಾಡಬೇಕಾ ಅಥವಾ ಬೇಡವಾ ಎಂಬ ವಿಚಾರ ಎಸ್​ಐಟಿಯನ್ನು ಗೊಂದಲಕ್ಕೀಡು ಮಾಡಿದೆ.

ಮಾಸ್ಕ್​ಮ್ಯಾನ್ ಚಿನ್ನಯ್ಯ ಬುರುಡೆ ಬಿಟ್ಟಿದ್ದು ಜಗಜ್ಜಾಹೀರಾಗಿದೆ. ಎಲ್ಲವೂ ಸುಳ್ಳು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಹೀಗಾಗಿ ಜೈಲು ಶಿಕ್ಷೆ ಅನುಭವಿಸುವಂತಾಗಿದೆ. ಇದೀಗ ಸೌಜನ್ಯ ಮಾವ ವಿಠ್ಠಲ ಗೌಡನ ಕಡೆ ಕೇಸ್ ತಿರುಗಿದೆ. ಮೊನ್ನೆ ಮೊನ್ನೆಯಷ್ಟೇ ಬಂಗ್ಲೆಗುಡ್ಡದಲ್ಲಿ ವಿಠ್ಠಲ ಗೌಡನ ಸಮ್ಮುಖದಲ್ಲೇ ಎಸ್​ಐಟಿ ಸ್ಥಳಮಹಜರನ್ನೂ ಮಾಡಿತ್ತು. ಇದೇ ವೇಳೆ ವಿಡಿಯೋ ಮೂಲಕ, ಬಂಗ್ಲೆಗುಡ್ಡದಲ್ಲಿ ರಾಶಿ ರಾಶಿ ಕಳೇಬರ ಇದೆ, ಅಸ್ಥಿಪಂಜರ ಇದೆ. ನಾನೇ ತೋರಿಸುತ್ತೇನೆ, ಸ್ಥಳ ಮಹಜರು ನಡೆಸಿ ಎಂದು ವಿಠ್ಠಲ ಗೌಡ ಆಗ್ರಹ ಮಾಡಿರುವುದು ಇದೀಗ ಎಸ್​ಐಟಿಗೆ ತಲೆನೋವು ತಂದಿಟ್ಟಿದೆ.

ಆದರೆ, ವಿಠ್ಠಲಗೌಡ ಆರೋಪ ಮಾಡಿದಾಕ್ಷಣ ಏಕಾಏಕಿ ಬಂಗ್ಲೆಗುಡ್ಡದಲ್ಲಿ ಎಸ್ಐಟಿ ಅಗೆಯುವ ಕೆಲಸ ಮಾಡ್ತಿಲ್ಲ. ವಿಠ್ಠಲ ಗೌಡ ತೋರಿಸಿದ ಜಾಗವನ್ನ ತಕ್ಷಣವೇ ಮಹಜರು ಮಾಡಲು ಎಸ್​ಐಟಿ ಹಿಂದೇಟು ಹಾಕುತ್ತಿದೆ. ಬಂಗ್ಲೆಗುಡ್ಡದ ಬಳಿ ಮಹಜರು ಪ್ರಕ್ರಿಯೆಯನ್ನು ಬಾಕಿ ಇರಿಸಿಕೊಳ್ಳಲಾಗಿದೆ. ಒಂದು ಸಣ್ಣ ಯಡವಟ್ಟಾದರೂ ಮುಂದೆ ಅವಾಂತರ ಆಗುತ್ತದೆ. ಹಾಗಾಗುವುದು ಬೇಡ ಎಂದು ಎಸ್ಐಟಿ ವಿಳಂಬದ ಹಾದಿ ಹಿಡಿದಿದೆ.

ಎಸ್​​ಐಟಿಗೆ ಅಡ್ಡಿ ಆಯ್ತಾ ಅರಣ್ಯ ಇಲಾಖೆ ಅನುಮತಿ?

ಬಂಗ್ಲೆಗುಡ್ಡದಲ್ಲಿ ಮಹಜರು ನಡೆಸಬೇಕಾ, ಬೇಡವಾ ಎಂಬುದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಮೇಲೆ ನಿಂತಿದೆ. ಅವರು ಅನುಮತಿ ಕೊಟ್ಟರೆ ಇಂದೇ ಮಹಜರು ನಡೆಸಲು ತನಿಖಾಧಿಕಾರಿಗಳು ಸಿದ್ಧರಿದ್ದಾರೆ ಎನ್ನಲಾಗಿದೆ. ಈಗಾಗಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಮನಕ್ಕೂ ಈ ವಿಚಾರ ತರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಯೂ ಎಸ್​ಐಟಿ ಸಭೆ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

ಮತ್ತೊಂದೆಡೆ, ಅರಣ್ಯ ಇಲಾಖೆ ಸುಮ್ಮನೆ ಕುಳಿತಿಲ್ಲ. ಬಂಗ್ಲೆಗುಡ್ಡದ ದಾಖಲೆಯನ್ನು ಅರಣ್ಯ ಇಲಾಖೆ ಸಂಗ್ರಹ ಮಾಡಿದೆ. ದಾಖಲೆಗಳ ನಕಲು ಪ್ರತಿಯನ್ನು ಎಸ್​ಐಟಿಗೆ ಕೊಡಲು ಅರಣ್ಯ ಇಲಾಖೆ ತಯಾರಿ ನಡೆಸಿದೆ.

ಮಹಜರು ನಡೆಸಲು ಕಾನೂನು ತಜ್ಞರ ಸಲಹೆ ಕೇಳಿರುವ ಎಸ್​​ಐಟಿ

ಮಹಜರು ನಡೆಸುವ ವಿಚಾರದಲ್ಲಿ ಎಸ್​ಐಟಿ ಅಧಿಕಾರಿಗಳು, ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಕಾನೂನು ತಜ್ಞರ ಸಲಹೆ ಕೇಳಿರುವ ಎಸ್​ಐಟಿ, ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ವಿಠ್ಠಲ ಗೌಡ ತೋರಿಸುವ ಜಾಗದಲ್ಲಿ ಮಾತ್ರ ಮಹಜರು ನಡೆಸಬೇಕೋ? ಸಂಪೂರ್ಣ ಬಂಗ್ಲೆಗುಡ್ಡದಲ್ಲಿ ಮಹಜರು ನಡೆಸಬೇಕೋ ಎಂಬ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ