AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡ ಮಹಜರಿಗೆ ಎಸ್​ಐಟಿಗೇ ಗೊಂದಲ! ಕಾನೂನು ತಜ್ಞರಿಗೆ ಮೊರೆ

ಧರ್ಮಸ್ಥಳ ‘ಬುರುಡೆ’ ಪ್ರಕರಣದ ತನಿಖೆಯಲ್ಲಿ ಎಸ್ಐಟಿ ಮಹಜರು ನಡೆಸುವ ವಿಚಾರದಲ್ಲಿ ಸಂಕಷ್ಟಕ್ಕೀಡಾಗಿದೆ. ವಿಠ್ಠಲ ಗೌಡ ತೋರಿಸಿದ ಸ್ಥಳದಲ್ಲಿ ಮಾತ್ರ ಮಹಜರು ನಡೆಸಬೇಕೇ ಅಥವಾ ಸಂಪೂರ್ಣ ಬಂಗ್ಲೆಗುಡ್ಡದಲ್ಲಿ ನಡೆಸಬೇಕೇ ಎಂಬ ಗೊಂದಲವಿದೆ. ಅರಣ್ಯ ಇಲಾಖೆಯ ಅನುಮತಿಯೂ ಅಗತ್ಯವಾಗಿದ್ದು, ಕಾನೂನು ತಜ್ಞರ ಸಲಹೆಯನ್ನೂ ಎಸ್ಐಟಿ ಪಡೆಯುತ್ತಿದೆ.

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡ ಮಹಜರಿಗೆ ಎಸ್​ಐಟಿಗೇ ಗೊಂದಲ! ಕಾನೂನು ತಜ್ಞರಿಗೆ ಮೊರೆ
ಬಂಗ್ಲೆಗುಡ್ಡ ಮಹಜರಿಗೆ ಎಸ್​ಐಟಿಗೇ ಗೊಂದಲ!
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Sep 16, 2025 | 2:32 PM

Share

ಬೆಂಗಳೂರು, ಸೆಪ್ಟೆಂಬರ್ 16: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ (Dharmasthala Case) ಎಸ್​ಐಟಿ ತನಿಖೆ ಚುರುಕುಗೊಂಡಿದೆ. ಆರೋಪ ಕೇಳಿ ಬಂದ ಎಲ್ಲರನ್ನೂ ಕರೆದು ವಿಚಾರಣೆ ಮಾಡಲಾಗುತ್ತಿದೆ. ಅಗತ್ಯಬಿದ್ದರೆ ನೋಟಿಸ್ ಕೊಟ್ಟು ವಿಚಾರಣೆ ಕೂಡ ಮಾಡಲಾಗುತ್ತಿದೆ. ಆದರೆ, ಇದೀಗ ಮಹಜರು ವಿಚಾರದಲ್ಲಿ ಎಸ್​ಐಟಿ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಈ ಹಿಂದೆ ಆಗಿರುವ ತಪ್ಪು ಮತ್ತೆ ಮರುಳಿಸಬಾರದು ಎಂಬ ಯೋಚನೆಯನ್ನೂ ಮಾಡಿದೆ. ಆದರೆ, ಚಿನ್ನಯ್ಯ ತೋರಿಸಿ ರೀತಿಯೇ ವಿಠ್ಠಲ ಗೌಡ ತೋರಿಸಿದ ಜಾಗವನ್ನು ಮಹಜರು ಮಾಡಬೇಕಾ ಅಥವಾ ಬೇಡವಾ ಎಂಬ ವಿಚಾರ ಎಸ್​ಐಟಿಯನ್ನು ಗೊಂದಲಕ್ಕೀಡು ಮಾಡಿದೆ.

ಮಾಸ್ಕ್​ಮ್ಯಾನ್ ಚಿನ್ನಯ್ಯ ಬುರುಡೆ ಬಿಟ್ಟಿದ್ದು ಜಗಜ್ಜಾಹೀರಾಗಿದೆ. ಎಲ್ಲವೂ ಸುಳ್ಳು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಹೀಗಾಗಿ ಜೈಲು ಶಿಕ್ಷೆ ಅನುಭವಿಸುವಂತಾಗಿದೆ. ಇದೀಗ ಸೌಜನ್ಯ ಮಾವ ವಿಠ್ಠಲ ಗೌಡನ ಕಡೆ ಕೇಸ್ ತಿರುಗಿದೆ. ಮೊನ್ನೆ ಮೊನ್ನೆಯಷ್ಟೇ ಬಂಗ್ಲೆಗುಡ್ಡದಲ್ಲಿ ವಿಠ್ಠಲ ಗೌಡನ ಸಮ್ಮುಖದಲ್ಲೇ ಎಸ್​ಐಟಿ ಸ್ಥಳಮಹಜರನ್ನೂ ಮಾಡಿತ್ತು. ಇದೇ ವೇಳೆ ವಿಡಿಯೋ ಮೂಲಕ, ಬಂಗ್ಲೆಗುಡ್ಡದಲ್ಲಿ ರಾಶಿ ರಾಶಿ ಕಳೇಬರ ಇದೆ, ಅಸ್ಥಿಪಂಜರ ಇದೆ. ನಾನೇ ತೋರಿಸುತ್ತೇನೆ, ಸ್ಥಳ ಮಹಜರು ನಡೆಸಿ ಎಂದು ವಿಠ್ಠಲ ಗೌಡ ಆಗ್ರಹ ಮಾಡಿರುವುದು ಇದೀಗ ಎಸ್​ಐಟಿಗೆ ತಲೆನೋವು ತಂದಿಟ್ಟಿದೆ.

ಆದರೆ, ವಿಠ್ಠಲಗೌಡ ಆರೋಪ ಮಾಡಿದಾಕ್ಷಣ ಏಕಾಏಕಿ ಬಂಗ್ಲೆಗುಡ್ಡದಲ್ಲಿ ಎಸ್ಐಟಿ ಅಗೆಯುವ ಕೆಲಸ ಮಾಡ್ತಿಲ್ಲ. ವಿಠ್ಠಲ ಗೌಡ ತೋರಿಸಿದ ಜಾಗವನ್ನ ತಕ್ಷಣವೇ ಮಹಜರು ಮಾಡಲು ಎಸ್​ಐಟಿ ಹಿಂದೇಟು ಹಾಕುತ್ತಿದೆ. ಬಂಗ್ಲೆಗುಡ್ಡದ ಬಳಿ ಮಹಜರು ಪ್ರಕ್ರಿಯೆಯನ್ನು ಬಾಕಿ ಇರಿಸಿಕೊಳ್ಳಲಾಗಿದೆ. ಒಂದು ಸಣ್ಣ ಯಡವಟ್ಟಾದರೂ ಮುಂದೆ ಅವಾಂತರ ಆಗುತ್ತದೆ. ಹಾಗಾಗುವುದು ಬೇಡ ಎಂದು ಎಸ್ಐಟಿ ವಿಳಂಬದ ಹಾದಿ ಹಿಡಿದಿದೆ.

ಎಸ್​​ಐಟಿಗೆ ಅಡ್ಡಿ ಆಯ್ತಾ ಅರಣ್ಯ ಇಲಾಖೆ ಅನುಮತಿ?

ಬಂಗ್ಲೆಗುಡ್ಡದಲ್ಲಿ ಮಹಜರು ನಡೆಸಬೇಕಾ, ಬೇಡವಾ ಎಂಬುದು ಅರಣ್ಯ ಇಲಾಖೆ ಅಧಿಕಾರಿಗಳ ಅನುಮತಿ ಮೇಲೆ ನಿಂತಿದೆ. ಅವರು ಅನುಮತಿ ಕೊಟ್ಟರೆ ಇಂದೇ ಮಹಜರು ನಡೆಸಲು ತನಿಖಾಧಿಕಾರಿಗಳು ಸಿದ್ಧರಿದ್ದಾರೆ ಎನ್ನಲಾಗಿದೆ. ಈಗಾಗಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಮನಕ್ಕೂ ಈ ವಿಚಾರ ತರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಯೂ ಎಸ್​ಐಟಿ ಸಭೆ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

ಮತ್ತೊಂದೆಡೆ, ಅರಣ್ಯ ಇಲಾಖೆ ಸುಮ್ಮನೆ ಕುಳಿತಿಲ್ಲ. ಬಂಗ್ಲೆಗುಡ್ಡದ ದಾಖಲೆಯನ್ನು ಅರಣ್ಯ ಇಲಾಖೆ ಸಂಗ್ರಹ ಮಾಡಿದೆ. ದಾಖಲೆಗಳ ನಕಲು ಪ್ರತಿಯನ್ನು ಎಸ್​ಐಟಿಗೆ ಕೊಡಲು ಅರಣ್ಯ ಇಲಾಖೆ ತಯಾರಿ ನಡೆಸಿದೆ.

ಮಹಜರು ನಡೆಸಲು ಕಾನೂನು ತಜ್ಞರ ಸಲಹೆ ಕೇಳಿರುವ ಎಸ್​​ಐಟಿ

ಮಹಜರು ನಡೆಸುವ ವಿಚಾರದಲ್ಲಿ ಎಸ್​ಐಟಿ ಅಧಿಕಾರಿಗಳು, ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಕಾನೂನು ತಜ್ಞರ ಸಲಹೆ ಕೇಳಿರುವ ಎಸ್​ಐಟಿ, ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ವಿಠ್ಠಲ ಗೌಡ ತೋರಿಸುವ ಜಾಗದಲ್ಲಿ ಮಾತ್ರ ಮಹಜರು ನಡೆಸಬೇಕೋ? ಸಂಪೂರ್ಣ ಬಂಗ್ಲೆಗುಡ್ಡದಲ್ಲಿ ಮಹಜರು ನಡೆಸಬೇಕೋ ಎಂಬ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?