AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಸಪ್ತಪದಿ ತುಳಿಯಲಿರುವ 201 ಜೋಡಿಗಳು: ಶುಭ ಮಸ್ತು

ಧರ್ಮಸ್ಥಳದಲ್ಲಿ ನಡೆಯುತ್ತಿರುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಧರ್ಮಸ್ಥಳ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಸಪ್ತಪದಿ ತುಳಿಯಲಿರುವ 201 ಜೋಡಿಗಳು: ಶುಭ ಮಸ್ತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 02, 2023 | 3:23 PM

Share

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮೇ 3ರ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನದಲ್ಲಿ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಜೋಡಿಗಳಿಗೆ ಮಂಗಳಸೂತ್ರ ವಿತರಿಸಲಿದ್ದಾರೆ.

ಮೇ 3ರಂದು ಸಂಜೆ 5ರಿಂದ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವಿವಾಹ ನೆರವೇರಲಿರುವ ಅಮೃತವರ್ಷಿಣಿ ಸಭಾ ಮಂಟಪಕ್ಕೆ ಭವ್ಯ ಮೆರವಣಿಗೆಯಲ್ಲಿ ಸಾಗುವರು. ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಜೋಡಿಗಳಿಗೆ ಮಂಗಳಸೂತ್ರ ವಿತರಿಸುತ್ತಾರೆ. ವಿವಾಹ ಸಮಾರಂಭ ಅವರವರ ಜಾತಿ ಸಂಪ್ರದಾಯದಂತೆ ನೆರವೇರಲಿದೆ. ಬಳಿಕ ಅನ್ನಪೂರ್ಣ ಭೋಜನಾಲಯದಲ್ಲಿ ಭೋಜನ ಇರಲಿದೆ.

ಕಾರ್ಯಕ್ರಮದ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸಲಿದೆ. ಇಂದು ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ಟ್ರಸ್ಟ್ ಕಡೆಯಿಂದ ವರನಿಗೆ ಧೋತಿ ಮತ್ತು ಶಾಲು ನೀಡಲಾಗುತ್ತೆ. ಹಾಗೂ ವಧುವಿಗೆ ಸೀರೆ, ಕುಪ್ಪಸ ಹಾಗೂ ಮಂಗಳಸೂತ್ರ ನೀಡಲಾಗುವುದು. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ವರದಕ್ಷಿಣೆ ಮತ್ತು ಮದುವೆಯ ಮೇಲಿನ ಅನಗತ್ಯ ವೆಚ್ಚಗಳನ್ನು ತಡೆಯಲು ಈ ಯೋಜನೆಯನ್ನು ಜಾರಿಗೆ ತಂದರು. ಈ ಯೋಜನೆಯಡಿ ಇಲ್ಲಿಯವರೆಗೆ 12,576 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವರ್ಷ ಈ ಕಾರ್ಯಕ್ರಮ ನಡೆಯುತ್ತದೆ.

ಮಂಗಳೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?