AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಕೇಸ್​: ಆರೋಪಿ ಚಿನ್ನಯ್ಯನ ಜೊತೆ ಫೋನ್​ ಸಂಪರ್ಕದಲ್ಲಿದ್ದವರಿಗೆ ಶಾಕ್​

ಧರ್ಮಸ್ಥಳದಲ್ಲಿ ಶವ ಹೂಳಿದ್ದಾಗಿ ಹೇಳಲಾದ ಆರೋಪಿ ಚಿನ್ನಯ್ಯನನ್ನು ಬಂಧಿಸಲಾಗಿದೆ. ಬೆಳ್ತಂಗಡಿ ಎಸ್‌ಐಟಿ ತೀವ್ರ ವಿಚಾರಣೆ ನಡೆಸುತ್ತಿದ್ದು, ಕೋರ್ಟ್‌ಗೆ ತೆಗೆದುಕೊಂಡು ಹೋಗಿದ್ದ ತಲೆಬುರುಡೆಯ ಬಗ್ಗೆ ತನಿಖೆ ಮಾಡಿದೆ. ಚಿನ್ನಯ್ಯನ ಮೊಬೈಲ್‌ಗಾಗಿ ಶೋಧ ನಡೆಸಲಾಗುತ್ತಿದ್ದು, ಎರಡು ವರ್ಷಗಳ ಸಿಡಿಆರ್ ಪರಿಶೀಲಿಸಲಾಗುತ್ತಿದೆ. ಚಿನ್ನಯ್ಯನೊಂದಿಗೆ ಸಂಪರ್ಕ ಹೊಂದಿದವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

ಧರ್ಮಸ್ಥಳ ಕೇಸ್​: ಆರೋಪಿ ಚಿನ್ನಯ್ಯನ ಜೊತೆ ಫೋನ್​ ಸಂಪರ್ಕದಲ್ಲಿದ್ದವರಿಗೆ ಶಾಕ್​
ಆರೋಪಿ ಚಿನ್ನಯ್ಯ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ|

Updated on:Aug 24, 2025 | 4:08 PM

Share

ಮಂಗಳೂರು, ಆಗಸ್ಟ್​ 24: ಧರ್ಮಸ್ಥಳದಲ್ಲಿ (Dharmastala) ಶವಹೂತಿದ್ದಾಗಿ ಹೇಳಿದ್ದ ಆರೋಪಿ ಚಿನ್ನಯ್ಯ ಬಂಧನವಾಗಿದ್ದು, ಕ್ಷಣ ಕ್ಷಣಕ್ಕೂ ಹೊಸ ಅಂಶ ಆಚೆ ಬರುತ್ತಿದೆ. ಸದ್ಯ ಬೆಳ್ತಂಗಡಿ (Beltangadi) ಎಸ್‌ಐಟಿ (SIT) ಕಚೇರಿಯಲ್ಲಿರುವ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದು, ಚಿನ್ನಯ್ಯ ಕೋರ್ಟ್​ ತೆಗೆದುಕೊಂಡು ಹೋಗಿದ್ದ ಮಾನವನ ತಲೆ ಬುರುಡೆ ಬಗ್ಗೆ ತನಿಖೆ ನಡೆಸಿದ್ದಾರೆ. ಬುರುಡೆ ಟೀಂ ಧರ್ಮಸ್ಥಳ ಗ್ರಾಮದ ಒಂದು ನಿಗೂಢ ಜಾಗದಲ್ಲಿ ತಲೆ ಬುರುಡೆಯನ್ನು ಹೂತು ಚಿನ್ನಯ್ಯಗೆ ಮಾಹಿತಿ ನೀಡಿತ್ತು. ಉತ್ಖನನದ ವೇಳೆ ಆ ಜಾಗವನ್ನು ತೋರಿಸುವ ಪ್ಲ್ಯಾನ್ ಕೂಡ ಮಾಡಲಾಗಿತ್ತು. ಇದರ ಬಗ್ಗೆಯೂ ಎಸ್ಐಟಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇನ್ನು, ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನ ಮೊಬೈಲ್​ಗಾಗಿ ಶೋಧ ನಡೆಸಿದ್ದಾರೆ. ಚಿನ್ನಯ್ಯ ನ್ಯಾಯಾಲಯಕ್ಕೆ ತಲೆ ಬುರುಡೆ ತೆಗೆದುಕೊಂಡು ಹೋದಾಗಲೇ ಈತನ ಮೊಬೈಲ್​ ಅನ್ನು ಬುರುಡೆ ಟೀಂ ಪಡೆದುಕೊಂಡಿತ್ತು. ಅಂದಿನಿಂದ ಇಲ್ಲಿಯವರೆಗೂ ಚಿನ್ನಯ್ಯ ಬಳಿ ವಕೀಲರಿಗೆ ಮಾತ್ರ ಮಾತನಾಡಲು ಅವಕಾಶ‌ ಇತ್ತು. ಉಳಿದಂತೆ ಚಿನ್ನಯ್ಯ ಮೊಬೈಲ್ ಬಳಸಲು ಬುರುಡೆ ಟೀಂ ಬಿಡುತ್ತಿರಲಿಲ್ಲ.

ಎಸ್​ಐಟಿ ವಿಚಾರಣೆ ವೇಳೆ ಆರೋಪಿ ಚಿನ್ನಯ್ಯ ತನ್ನ ಬಳಿ ಮೊಬೈಲ್​ ಇಲ್ಲ ಎಂದು ಹೇಳಿದ್ದನು. ಆದರೆ, ಚಿನ್ನಯ್ಯನ ಬಳಿ ಮೊಬೈಲ್​ ಇತ್ತು. ಸದ್ಯ ಆ ಮೊಬೈಲ್​ ಬುರುಡೆ ಗ್ಯಾಂಗ್​ನ ಬಳಿಯೇ ಇದೆ ಎಂದು ಎಸ್​ಐಟಿ ಅಧಿಕಾರಿಗಳಿಗೆ ಗೊತ್ತಾಗಿದೆ. ಇದೀಗ, ಎಸ್​ಐಟಿ ಅಧಿಕಾರಿಗಳು ಆರೋಪಿ ಚಿನ್ನಯ್ಯನ ಮೊಬೈಲ್ ಅನ್ನು ವಶಕ್ಕೆ ಪಡೆಯಲು ನಿರ್ಧರಿಸಿದ್ದಾರೆ.

ಇದನ್ನೂ ನೋಡಿ: ಚಿನ್ನಯ್ಯ ತಂದಿದ್ದ ಬುರುಡೆಗೆ ದೆಹಲಿ ಲಿಂಕ್: ದೊಡ್ಡ ವ್ಯಕ್ತಿಯನ್ನ ಭೇಟಿ ಮಾಡಿದ್ದ ಗ್ಯಾಂಗ್!

ಎಸ್​ಐಟಿ ಅಧಿಕಾರಿಗಳು ಸದ್ಯ ಚಿನ್ನಯ್ಯನ ಮೊಬೈಲ್​ ನಂಬರ್​ ಆಧಾರದ ಮೇಲೆ ಎರಡು ವರ್ಷದ ಸಿಡಿಆರ್ ಸಂಗ್ರಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಚಿನ್ನಯ್ಯ ಜತೆ ಫೋನ್ ಸಂಪರ್ಕದಲ್ಲಿದ್ದವರಿಗೆ ಸಂಕಷ್ಟ ಎದುರಾಗಿದೆ. ಆರೋಪಿ ಚಿನ್ನಯ್ಯ ಯಾಱರ ಜೊತೆ ಮೊಬೈಲ್​ನಲ್ಲಿ ಮಾತನಾಡಿದ್ದ, ಆತ ಎಲ್ಲೆಲ್ಲಿ ಕೆಲಸ ಮಾಡಿದ್ದ, ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Sun, 24 August 25