AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಕೇರಳ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಎದುರಾಯ್ತು ಸಂಕಷ್ಟ

ಧರ್ಮಸ್ಥಳದ ‘ತಲೆಬುರುಡೆ’ ಪ್ರಕರಣದಲ್ಲಿ ಆಘಾತಕಾರಿ ಬೆಳವಣಿಗೆಗಳು ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ ತೋರಿಸಿದ್ದರು ಎಂಬುದು ಬಹಿರಂಗಗೊಂಡಿದೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು 11 ಸೆಕ್ಷನ್​​ಗಳ ಅಡಿ ಎಸ್​ಐಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ವಿವರಗಳು ಇಲ್ಲಿವೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಕೇರಳ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಎದುರಾಯ್ತು ಸಂಕಷ್ಟ
ಧರ್ಮಸ್ಥಳ ಬುರುಡೆ ಪ್ರಕರಣ (ಸಾಂದರ್ಭಿಕ ಚಿತ್ರ)
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Sep 06, 2025 | 10:53 AM

Share

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ (Dharmasthala Case) ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ (CPI) ಸಂಸದ ಸಂತೋಷ್ ಕುಮಾರ್​ಗೆ (Santosh Kumar) ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ ಪ್ರಸ್ತಾಪಿಸಿತ್ತು ಎಂಬ ಸ್ಫೋಟಕ ಮಾಹಿತಿ ಎಸ್​​ಐಟಿ ತನಿಖೆ ವೇಳೆ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ದೊರೆತಂತಾಗಿದೆ.

ಏತನ್ಮಧ್ಯೆ, ತಲೆಬುರುಡೆಯನ್ನು ಕೊಟ್ಟಿದ್ದು ಜಯಂತ್. ತಾನು ಅದನ್ನು ಧರ್ಮಸ್ಥಳದಿಂದ ತಂದೇ ಇಲ್ಲವೆಂದು ಚೆನ್ನಯ್ಯ ಎಸ್​ಐಟಿ ಮುಂದೆ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ, ಜಯಂತ್ ಮಾತ್ರ ಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ಕೊಟ್ಟಿದ್ದು ಎಂದಿದ್ದಾರೆ. ಮಟ್ಟಣನವರ್ ನಿರಾಕರಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ಕೇರಳ ಸಂಸದನ ಹೆಸರು ಪ್ರಕರಣದಲ್ಲಿ ತಳಕುಹಾಕಿಕೊಂಡಿದೆ.

11 ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿ ತನಿಖೆ

ತಲೆಬುರುಡೆ ಪ್ರಕರಣ ಹಾಗೂ ಒಟ್ಟಾರೆ ಧರ್ಮಸ್ಥಳ ಪ್ರಕರಣವನ್ನು ಎಸ್​ಐಟಿ ಪೊಲೀಸರು ಈವರೆಗೆ ಒಟ್ಟು 11 ಸೆಕ್ಷನ್​ಗಳ ಅಡಿ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈವರೆಗಿನ ತನಿಖೆಯಲ್ಲಿ ಬೆಳಕಿಗೆ ಬಂದ ವಿಚಾರಗಳನ್ನು ಆಧರಿಸಿ ಸೆಕ್ಷನ್​ಗಳನ್ನು ಅಳವಡಿಕೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ FIR ನಂಬರ್ 39/2025 ರಲ್ಲಿ BNS 211(A), 336, 230, 231, 229, 227, 228, 240, 236, 233, 248 ಸೆಕ್ಷನ್ ಅಳವಡಿಕೆ ಮಾಡಲಾಗಿದೆ.

ಧರ್ಮಸ್ಥಳ ಪ್ರಕರಣ: ಯಾವ್ಯಾವ ಸೆಕ್ಷನ್​ಗಳ ಅಡಿ ಕೇಸ್?

  1. BNS 211(A) – ಅಧಿಕಾರಿಗೆ ಕಾನೂನಾತ್ಮಕವಾಗಿ ನೀಡಬೇಕಾದ ಮಾಹಿತಿಯನ್ನು ನೀಡದೆ ಉದ್ದೇಶಪೂರ್ವಕವಾಗಿ ತಪ್ಪಿಸುವುದು.
  2. BNS 336 – ನಕಲಿ ದಾಖಲೆ ಸೃಷ್ಟಿಸುವುದು‌.
  3. BNS 230 – ಸುಳ್ಳು ಸಾಕ್ಷಿ ಕೊಡಲು ಅಥವಾ ಸುಳ್ಳು ಸಾಕ್ಷಿ ತಯಾರಿಸುವುದು‌.
  4. BNS 231 – ಜೀವಾವಧಿ ಶಿಕ್ಷೆ ಅಥವಾ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧದ ಬಗ್ಗೆ ಸುಳ್ಳು ಸಾಕ್ಷ್ಯ ನೀಡುವುದು ಅಥವಾ ಅದನ್ನು ಸೃಷ್ಟಿಸುವುದು.
  5. BNS 229 – ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸುಳ್ಳು ಪುರಾವೆ ನೀಡಿದರೆ.
  6. BNS 227 – ಸುಳ್ಳೆಂದು ತಿಳಿದಿದ್ದರು ಸುಳ್ಳು ಸಾಕ್ಷ್ಯವನ್ನು ಹೇಳೋದು.
  7. BNS 228 – ನ್ಯಾಯಾಂಗ ಅಥವಾ ಕಾನೂನು ಪ್ರಕ್ರಿಯೆಯನ್ನು ದಾರಿತಪ್ಪಿಸುವ ಉದ್ದೇಶದಿಂದ, ಪುಸ್ತಕಗಳು ಅಥವಾ ದಾಖಲೆಗಳಲ್ಲಿ ಸುಳ್ಳು ನಮೂದುಗಳನ್ನು ಮಾಡುವುದು.
  8. BNS 240 – ಅಪರಾಧದ ಬಗ್ಗೆ ತಪ್ಪು ಮಾಹಿತಿ ನೀಡುವುದು.
  9. BNS 236 – ನ್ಯಾಯಾಲಯಕ್ಕೆ ತಾನು ನೀಡಿದ ಮಾಹಿತಿ ಸುಳ್ಳು ಎಂದು ತಿಳಿದಿದ್ದರೂ ಅಥವಾ ನಂಬದಿದ್ದರೂ, ಅದನ್ನು ನಿಜವೆಂದು ಹೇಳುವುದು‌.
  10. BNS 233 – ನ್ಯಾಯಾಲಯದಲ್ಲಿ ಸುಳ್ಳು ಎಂದು ತಿಳಿದಿರುವ ಯಾವುದೇ ಪುರಾವೆಯನ್ನು ನಿಜವಾದ ಪುರಾವೆಯಂತೆ ಬಳಸಲು ಪ್ರಯತ್ನಿಸುವುದು, ಈಗಾಗಲೇ ಸುಳ್ಳು ಎಂದು ತಿಳಿದಿರುವ ಪುರಾವೆಯನ್ನು ಬಳಸೋದು.
  11. BNS 248 – ಒಬ್ಬ ವ್ಯಕ್ತಿಯನ್ನು ಹಾನಿ ಮಾಡುವ ದುರುದ್ದೇಶದಿಂದ, ಅವನ ಮೇಲೆ ಯಾವ ಕಾನೂನು ಆಧಾರಗಳೂ ಇಲ್ಲದಿದ್ದರೂ ಸುಳ್ಳು ಅಪರಾಧದ ಆರೋಪ ಹೊರಿಸುವುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Sat, 6 September 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್