AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಚಕಘಟ್ಟ ತಲುಪಿದ ಧರ್ಮಸ್ಥಳ ಬುರುಡೆ ಪ್ರಕರಣ: 6 ಮಂದಿಗೆ ತಪ್ಪದ ಸಂಕಷ್ಟ, ಎಸ್​ಐಟಿಯಿಂದ ತೀವ್ರ ವಿಚಾರಣೆ

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ಸದ್ಯ ಮಾಸ್ಕ್​ಮ್ಯಾನ್ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಲಾಗಿದೆ. ಗಿರೀಶ್ ಮಟ್ಟಣ್ಣನವರ್, ಜಯಂತ್, ವಿಠ್ಠಲ ಗೌಡ, ಪ್ರದೀಪ್, ಅಬಿಷೇಕ್ ಮತ್ತು ಮನಾಫ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಬಂಧನದ ಸಾಧ್ಯತೆ ಇದೆ.

ರೋಚಕಘಟ್ಟ ತಲುಪಿದ ಧರ್ಮಸ್ಥಳ ಬುರುಡೆ ಪ್ರಕರಣ: 6 ಮಂದಿಗೆ ತಪ್ಪದ ಸಂಕಷ್ಟ, ಎಸ್​ಐಟಿಯಿಂದ ತೀವ್ರ ವಿಚಾರಣೆ
ಧರ್ಮಸ್ಥಳ ಬುರುಡೆ ಪ್ರಕರಣ: 6 ಮಂದಿಗೆ ತಪ್ಪದ ಸಂಕಷ್ಟ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Sep 11, 2025 | 2:23 PM

Share

ಮಂಗಳೂರು, ಸೆಪ್ಟೆಂಬರ್ 11: ಧರ್ಮಸ್ಥಳ ಬುರುಡೆ ಪ್ರಕರಣ (Dharmasthala Case) ತನಿಖೆ ಚುರುಕುಗೊಳಿಸಿರುವ ಎಸ್ಐಟಿ, ಈಗಾಗಲೇ ಬುರುಡೆ ಚಿನ್ನಯ್ಯನನ್ನು ತೀವ್ರ ವಿಚಾರಣೆಗೊಳಪಡಿಸಿ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಿದೆ. ಚಿನ್ನಯ್ಯ ನೀಡಿದ ಹೇಳಿಕೆ ಆಧರಿಸಿ ಹಲವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಗ್ಯಾಂಗ್‌ನ ಹಲವರನ್ನು ಬಂಧಿಸುವ ಸಾಧ್ಯತೆ ಇದೆ. ಬುರುಡೆ ಕೇಸ್‌ನಲ್ಲಿ 6 ಮಂದಿಗೆ ಸಂಕಷ್ಟ ಎದುರಾಗಿದೆ.

ಬುರುಡೆ ಕೇಸ್‌ನಲ್ಲಿ ಗಿರೀಶ್ ಮಟ್ಟಣ್ಣನವರ್​​ನನ್ನು ಕಳೆದ 7 ದಿನದಿಂದ ವಿಚಾರಣೆಗೆ ಒಳಪಡಿಸಲಾಗಿದೆ. ಗುರುವಾರ ಕೂಡಾ ವಿಚಾರಣೆ ಮಾಡಲಾಗಿದೆ. ಜಯಂತ್‌ರನ್ನು 8 ದಿನದಿಂದ ಗ್ರಿಲ್ ಮಾಡಲಾಗುತ್ತಿದ್ದು, ಇಂದೂ ವಿಚಾರಣೆ ಎದುರಿಸಿದ್ದಾರೆ. ಸೌಜನ್ಯ ಮಾವ ವಿಠ್ಠಲ ಗೌಡ ಮತ್ತು ಅವರ ಕಾರು ಚಾಲಕ ಪ್ರದೀಪ್‌ನನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಯೂಟ್ಯೂಬರ್ ಅಬಿಷೇಕ್​ಗೆ 7 ದಿನ ಹಾಗೆಯೇ ಕೇರಳ ಯೂಟ್ಯೂಬರ್ ಮನಾಫ್​ಗೆ 3 ದಿನ ಗ್ರಿಲ್ ಮಾಡಲಾಗಿದೆ.

ಹೇಳಿಕೆಗಳಲ್ಲಿ ವ್ಯಾತ್ಯಾಸ ಕಂಡು ಬಂದರೆ ಬಂಧನ ಸಾಧ್ಯತೆ

ಪ್ರತಿಯೊಬ್ಬರನ್ನೂ ತೀವ್ರವಾಗಿ ವಿಚಾರಣೆ ಮಾಡಲಾಗುತ್ತಿದ್ದು, ಹೇಳಿಕೆಗಳಲ್ಲಿ ವ್ಯಾತ್ಯಾಸ ಕಂಡು ಬಂದರೆ ಬಂಧಿಸುವ ಸಾಧ್ಯತೆ ಇದೆ. ಬಿಎನ್​ಎಸ್ ಕಾಯ್ದೆ 161 ರಡಿ 6 ಮಂದಿ ಹೇಳಿಕೆಯನ್ನು ದಾಖಲಿಸಲಾಗುತ್ತಿದ್ದು, ಬಲವಾದ ಸಾಕ್ಷ್ಯ ಸಿಕ್ಕಿದರೆ ಬಂಧಿಸಿ ವಿಚಾರಣೆ ನಡೆಸಲು ಎಸ್ಐಟಿ ಸಿದ್ಧತೆ ನಡೆಸಿದೆ.

ಬುರುಡೆ ಗ್ಯಾಂಗ್​ಗೆ ತಪ್ಪದ ಸಂಕಷ್ಟ

ಬುರುಡೆ ಕೇಸ್ ತನಿಖೆಯಲ್ಲಿ ಎಲ್ಲರನ್ನೂ ಕರೆಸಿ ವಿಚಾರಣೆ ಮಾಡಲಾ ಗುತ್ತಿದೆ. ಸಾಕ್ಷಿದಾರ, ಸಂಬಂಧಿತ ವ್ಯಕ್ತಿಯನ್ನು ಕರೆಸಿ ವಿಚಾರಣೆ ಮಾಡಲಾಗುತ್ತಿದ್ದು, ವಿಚಾರಣೆ ವೇಳೆ ವ್ಯಕ್ತಿಗೆ ತಿಳಿದಿರುವ ಮಾಹಿತಿ ನೀಡಬೇಕು. ಹೇಳಿಕೆಯನ್ನು ಲಿಖಿತವಾಗಿ ಅಧಿಕಾರಿ ದಾಖಲಿಕೊಳ್ಳುತ್ತಾರೆ. ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದರೆ ಮಾತ್ರ ಬಂಧನ ಮಾಡಬಹುದು. ಯಾರಾದರೂ ವ್ಯತ್ಯಾಸದ ಹೇಳಿಕೆ ಕೊಟ್ಟರೆ ಮತ್ತೆ ವಿಚಾರಣೆ ನಡೆಸಿ, ಹೊಸ ಸಾಕ್ಷ್ಯ ಸಿಕ್ಕರೆ ಮತ್ತೆ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇದಾದ ಬಳಿಕವೂ ಹೇಳಿಕೆಯಲ್ಲಿ ವ್ಯಾತ್ಯಾಸ ಬಂದರೆ, ಆರೋಪಿಯಾಗಿ ಪರಿಗಣಿಸಿ ಬಿಎನ್​ಎಸ್ ಕಾಯ್ದೆಯ ಸೆಕ್ಷನ್ 41ರಡಿ ಬಂಧಿಸಲಾಗುತ್ತದೆ. ಬಂಧನ ಮಾಡಿ ವಿಚಾರಣೆ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.

ಏತನ್ಮಧ್ಯೆ, ಎಸ್ಐಟಿ ವಿಚಾರಣೆಗೆ ನಾವು ಸಹಕಾರ ಕೊಡುತ್ತಿದ್ದೇವೆ. ದಾಖಲೆಗಳನ್ನೂ ನೀಡಿದ್ದೇವೆ ಎಂದು ಜಯಂತ್ ಹೇಳಿದ್ದಾರೆ. ಎಸ್‌ಐಟಿಯವರಿಗೆ ಸುಳ್ಳು ಹೇಳಲು ಆಗಲ್ಲ. ಸುಳ್ಳು ಹೇಳಿದರೆ ಲಾಕ್ ಆಗಬೇಕಾಗತ್ತದೆ ಎಂದಿದ್ದಾರೆ.

ಯೂಟ್ಯೂಬರ್ ವಿಚಾರಣೆ ಅಂತ್ಯಗೊಳಿಸಿ ಕಳುಹಿಸಿದ ಎಸ್​ಐಟಿ

ಕೇರಳ ಯೂಟ್ಯೂಬರ್ ಮನಾಫ್ ಮತ್ತು ಅಭಿಷೇಕ್‌ ವಿಚಾರಣೆ ನಡೆಸಿದ ಎಸ್ಐಟಿ ಇಬ್ಬರ ಹೇಳಿಕೆ ದಾಖಲಿಸಿಕೊಂಡು ವಾಪಸ್ ಕಳುಹಿಸಿದೆ. ನೋಟಿಸ್ ಕೊಟ್ಟಾಗ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಇನ್ ಕ್ಯಾಮರಾದಲ್ಲಿ ಇಬ್ಬರ ಹೇಳಿಕೆ ದಾಖಲಿಸಲಾಗಿದ್ದು, ಅಭಿಷೇಕ್​​ ಲ್ಯಾಪ್​ಟಾಪ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಬುರುಡೆ ತಂದು ಕೊಟ್ಟಿದ್ದ ಸೌಜನ್ಯ ಮಾವ ವಿಠ್ಠಲ ಗೌಡನನ್ನು ಬಂಗ್ಲೆಗುಡ್ಡಕ್ಕೆ ಕರೆದೊಯ್ದು ಬುಧವಾರ ಮಹಜರು ಮಾಡಲಾಗಿತ್ತು. ಒಂದೂವರೆ ಗಂಟೆ ಮಹಜರು ನಡೆಸಿ ಹೇಳಿಕೆ ದಾಖಲಿಸಲಾಗಿತ್ತು. ಮಟ್ಟಣ್ಣನವರ್ ಸೂಚನೆಯಂತೆ ಬುರುಡೆ ತಂದಿದ್ದ ವಿಠ್ಠಲ ಗೌಡಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ವಿಠ್ಠಲಗೌಡಗೆ ಬುರುಡೆ ಉರುಳು!

ಒಂದು ವರ್ಷದ ಹಿಂದೆ ಬುರುಡೆ ತಂದಿದ್ದ ವಿಠ್ಠಲ ಗೌಡ ಮತ್ತು ಪ್ರದೀಪ್, ಬಂಗ್ಲೆಗುಡ್ಡ ಕಾಡಂಚಿನಲ್ಲಿ ಬುರುಡೆ ಅಡಗಿಸಿಟ್ಟಿದ್ದರು ಎನ್ನಲಾಗಿದೆ. ಒಂದು ಕಡೆಯಿಂದ ಬುರುಡೆ ತೆಗೆದು ಮತ್ತೊಂದು ಕಡೆ, ಅಂದರೆ ದಟ್ಟಾರಣ್ಯದ ಮಧ್ಯೆ ಬುರುಡೆ ಇಟ್ಟಿದ್ದರು. ಮಟ್ಟಣ್ಣನವರ್ ನಿರ್ದೇಶನದಂತೆ ಅಡಗಿಸಿಟ್ಟಿದ್ದ ಬುರುಡೆಯನ್ನು ವಿಠ್ಠಲ ಗೌಡ ತಂದಿದ್ದ. ತರುವಾಗ ಬುರುಡೆ ತೆಗೆದು ಚೀಲಕ್ಕೆ ತುಂಬಿಸುವ ವಿಡಿಯೋವನ್ನು ಮಾಡಿಕೊಂಡಿದ್ದರು. ಬುರುಡೆ ಅಡಗಿಸಿಟ್ಟಿದ್ದ ಜಾಗವನ್ನ ವಿಠ್ಠಲ ಗೌಡ ಮಹಜರು ವೇಳೆ ತೋರಿಸಿದ್ದಾನೆ.

ಇದನ್ನೂ ಓದಿ: ಧರ್ಮಸ್ಥಳ ವಿರೋಧಿ ಅಭಿಯಾನದ ಮೂಲ ಸಂಚುಕೋರರು ಸಿಗುವುದು ಕಷ್ಟ: ಎಸ್​ಐಟಿಗಿದೆ ತಾಂತ್ರಿಕ ಸಂಕಷ್ಟ

ಸದ್ಯ ಎಲ್ಲರ ಹೇಳಿಕೆ ದಾಖಲಿಸಿಕೊಂಡಿರುವ ಎಸ್ಐಟಿ, ಅವುಗಳನ್ನನು ತಾಳೆ ಹಾಕುತ್ತಿದೆ. ವ್ಯಾತ್ಯಾಸ ಕಂಡು ಬಂದರೆ ಬಂಧಿಸಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!