AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುದಿನಗಳ ಕನಸು ನನಸು: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ಸಚಿವ ಸಂಪುಟ ತೀರ್ಮಾನ

ಕರಾವಳಿಯ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆದಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ಘೋಷಣೆ ಮಾಡಬೇಕೆನ್ನುವ ಕರಾವಳಿಗರ ಬೇಡಿಕೆಯನ್ನು ಡಿಕೆ ಶಿವಕುಮಾರ್ ಸರ್ಕಾರ ಈಡೇರಿಸಿದೆ.

ಬಹುದಿನಗಳ ಕನಸು ನನಸು: ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ಸಚಿವ ಸಂಪುಟ ತೀರ್ಮಾನ
Dk Shivakumar Cabinet
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 18, 2026 | 5:18 PM

Share

ಮಂಗಳೂರು, (ಸೆಪ್ಟೆಂಬರ್ 18): ಮಂಗಳೂರು, (ಸೆಪ್ಟೆಂಬರ್ 18): ಡಿಕೆ ಶಿವಕುಮಾರ್ ನೇತೃತ್ವದಲ್ಲಿಂದು ಮಂಗಳೂರಿನಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ, ತುಳು 2ನೇ ಆಡಳಿತ ಭಾಷೆಯಾಗಿ ಘೋಷಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಂದಿಗೆ ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಂತಾಗಿದ್ದು. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ಸೆಪ್ಟೆಂಬರ್ 18)  ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಘೋಷಣೆ ಮಾಡಿದರು.

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಪ್ರಬಲ ವೇದಿಕೆಯಾಗಲಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರು. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Fri, 18 September 26

Follow Us
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ