AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ರಸ್ತೆ ಬದಿ ಕುಡುಕನ ಕೈಗೆ ಸಿಕ್ತು ಕಂತೆ ಕಂತೆ ಹಣದ ಬಾಕ್ಸ್, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ನವೆಂಬರ್​ 27ರಂದು ನಗರದ ಪಂಪ್​ವೆಲ್ ಬಾರ್​ ಬಳಿ ಮದ್ಯವಸನಿಗೆ ಕಂತೆ ಕಂತೆ ಹಣ ಇರುವ ಬಾಕ್ಸ್ ಸಿಕ್ಕಿದೆ.

ಮಂಗಳೂರು: ರಸ್ತೆ ಬದಿ ಕುಡುಕನ ಕೈಗೆ ಸಿಕ್ತು ಕಂತೆ ಕಂತೆ ಹಣದ ಬಾಕ್ಸ್, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಶಿವರಾಜ್​
TV9 Web
| Updated By: ವಿವೇಕ ಬಿರಾದಾರ|

Updated on:Dec 06, 2022 | 3:22 PM

Share

ದಕ್ಷಿಣ ಕನ್ನಡ: ಸುಮ್ನೆ ದಾರಿಯಲ್ಲಿ ಹೋಗುತ್ತಿದ್ದಾಗ ಕಂತೆ ಕಂತೆ ಹಣ ಸಿಕ್ಕರೇ ಜಗತ್ತೇ ಅಂಗೈಯಲ್ಲಿ ಎಂದು ಅಂದುಕೊಳ್ಳುತ್ತಾರೆ. ಹಾಗೆಯೇ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಗಾದೆ ಮಾತಿನಂತೆ, ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಮಂಗಳೂರಿನಲ್ಲಿ (Mangalore) ಮದ್ಯವಸ್ಯನಿಯಾಗಿರುವ ಶಿವರಾಜ ಎಂಬುವರಿಗೆ ಕಳೆದು ತಿಂಗಳು ನವೆಂಬರ್​ 27ರಂದು ನಗರದ ಪಂಪ್​ವೆಲ್ ಬಾರ್​ ಬಳಿ ಕಂತೆ ಕಂತೆ ಹಣ ಇರುವ ಬಾಕ್ಸ್ ಸಿಕ್ಕಿದೆ. ಬಾಕ್ಸ್​ನಲ್ಲಿ ​ 500, 2,000 ರೂ. ಮುಖಬೆಲೆಯ ಗರಿ ಗರಿ ನೋಟುಗಳ ಹಣವಿತ್ತು.

ಹಣ ಸಿಕ್ಕಿದ್ದೇ ತಡ ಮದ್ಯ ವ್ಯಸನಿಯಾಗಿದ್ದ ಶಿವರಾಜ್​​ ಹಣದ ಬಾಕ್ಸ್​ನಲ್ಲಿದ್ದ 1 ಸಾವಿರ ರೂ ನೀಡಿ ಮದ್ಯ ಸೇವಿಸಿದ್ದಾರೆ. ನಂತರ ತನ್ನ ಜೊತೆಗಿದ್ದವರಿಗೂ ನೋಟಿನ ಕಂತೆ ನೀಡಿದ್ದಾರೆ. ಈ ವಿಷಯ ಕಂಕನಾಡಿ ಪೊಲೀಸರಿಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಖಾಕಿ ಹಣದ ಬಾಕ್ಸ್​ ಸಮೇತ ಶಿವರಾಜ್​ನನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಮದುಮಗ ತನ್ನ ಪ್ರೀತಿಯ ನಾಯಿಯೊಂದಿಗೆ ಮದುವೆ ಮಂಟಪಕ್ಕೆ ಬಂದಾಗ

ನಂತರ ಮೂರು ದಿನಗಳ ಕಾಲ ಠಾಣೆಯಲ್ಲಿ ಇಟ್ಟುಕೊಂಡು ಬಿಟ್ಟು ಕಳಿಸಿದ್ದಾರೆ. ಶಿವರಾಜ್​​ ಬಾಕ್ಸ್​ನಲ್ಲಿ 5ರಿಂದ 10 ಲಕ್ಷ ಇತ್ತು ಎಂದು ಹೇಳಿಕೆ ನೀಡಿದ್ದಾರೆ. ಆದರೆ ಬಾಕ್ಸ್​ನಲ್ಲಿ 49 ಸಾವಿರ ರೂ ಮಾತ್ರ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ .

ವಿಪರ್ಯಾಸವೆಂದರೆ ವಾರ ಕಳೆದರೂ ಹಣದ ವಾರಸುದಾರರು ಮಾತ್ರ ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರು ಯಾವುದೇ ದೂರು ದಾಖಲಿಸಿಕೊಂಡಿಲ್ಲ. ಪೊಲೀಸರ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಜೊತೆಗೆ  ಚುನಾವಣೆ ಹೊಸ್ತಿನಲ್ಲಿ ಈ ರೀತಿ ಹಣದ ಕಂತೆ ಕಂತೆ ಬಾಕ್ಸ್​​ ಸಿಕ್ಕಿರುವುದು ಮಾತ್ರ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ .

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 6 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?