AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ರಸ್ತೆ ಬದಿ ಕುಡುಕನ ಕೈಗೆ ಸಿಕ್ತು ಕಂತೆ ಕಂತೆ ಹಣದ ಬಾಕ್ಸ್, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ನವೆಂಬರ್​ 27ರಂದು ನಗರದ ಪಂಪ್​ವೆಲ್ ಬಾರ್​ ಬಳಿ ಮದ್ಯವಸನಿಗೆ ಕಂತೆ ಕಂತೆ ಹಣ ಇರುವ ಬಾಕ್ಸ್ ಸಿಕ್ಕಿದೆ.

ಮಂಗಳೂರು: ರಸ್ತೆ ಬದಿ ಕುಡುಕನ ಕೈಗೆ ಸಿಕ್ತು ಕಂತೆ ಕಂತೆ ಹಣದ ಬಾಕ್ಸ್, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಶಿವರಾಜ್​
TV9 Web
| Edited By: ವಿವೇಕ ಬಿರಾದಾರ|

Updated on:Dec 06, 2022 | 3:22 PM

Share

ದಕ್ಷಿಣ ಕನ್ನಡ: ಸುಮ್ನೆ ದಾರಿಯಲ್ಲಿ ಹೋಗುತ್ತಿದ್ದಾಗ ಕಂತೆ ಕಂತೆ ಹಣ ಸಿಕ್ಕರೇ ಜಗತ್ತೇ ಅಂಗೈಯಲ್ಲಿ ಎಂದು ಅಂದುಕೊಳ್ಳುತ್ತಾರೆ. ಹಾಗೆಯೇ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಗಾದೆ ಮಾತಿನಂತೆ, ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಮಂಗಳೂರಿನಲ್ಲಿ (Mangalore) ಮದ್ಯವಸ್ಯನಿಯಾಗಿರುವ ಶಿವರಾಜ ಎಂಬುವರಿಗೆ ಕಳೆದು ತಿಂಗಳು ನವೆಂಬರ್​ 27ರಂದು ನಗರದ ಪಂಪ್​ವೆಲ್ ಬಾರ್​ ಬಳಿ ಕಂತೆ ಕಂತೆ ಹಣ ಇರುವ ಬಾಕ್ಸ್ ಸಿಕ್ಕಿದೆ. ಬಾಕ್ಸ್​ನಲ್ಲಿ ​ 500, 2,000 ರೂ. ಮುಖಬೆಲೆಯ ಗರಿ ಗರಿ ನೋಟುಗಳ ಹಣವಿತ್ತು.

ಹಣ ಸಿಕ್ಕಿದ್ದೇ ತಡ ಮದ್ಯ ವ್ಯಸನಿಯಾಗಿದ್ದ ಶಿವರಾಜ್​​ ಹಣದ ಬಾಕ್ಸ್​ನಲ್ಲಿದ್ದ 1 ಸಾವಿರ ರೂ ನೀಡಿ ಮದ್ಯ ಸೇವಿಸಿದ್ದಾರೆ. ನಂತರ ತನ್ನ ಜೊತೆಗಿದ್ದವರಿಗೂ ನೋಟಿನ ಕಂತೆ ನೀಡಿದ್ದಾರೆ. ಈ ವಿಷಯ ಕಂಕನಾಡಿ ಪೊಲೀಸರಿಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಖಾಕಿ ಹಣದ ಬಾಕ್ಸ್​ ಸಮೇತ ಶಿವರಾಜ್​ನನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಮದುಮಗ ತನ್ನ ಪ್ರೀತಿಯ ನಾಯಿಯೊಂದಿಗೆ ಮದುವೆ ಮಂಟಪಕ್ಕೆ ಬಂದಾಗ

ನಂತರ ಮೂರು ದಿನಗಳ ಕಾಲ ಠಾಣೆಯಲ್ಲಿ ಇಟ್ಟುಕೊಂಡು ಬಿಟ್ಟು ಕಳಿಸಿದ್ದಾರೆ. ಶಿವರಾಜ್​​ ಬಾಕ್ಸ್​ನಲ್ಲಿ 5ರಿಂದ 10 ಲಕ್ಷ ಇತ್ತು ಎಂದು ಹೇಳಿಕೆ ನೀಡಿದ್ದಾರೆ. ಆದರೆ ಬಾಕ್ಸ್​ನಲ್ಲಿ 49 ಸಾವಿರ ರೂ ಮಾತ್ರ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ .

ವಿಪರ್ಯಾಸವೆಂದರೆ ವಾರ ಕಳೆದರೂ ಹಣದ ವಾರಸುದಾರರು ಮಾತ್ರ ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರು ಯಾವುದೇ ದೂರು ದಾಖಲಿಸಿಕೊಂಡಿಲ್ಲ. ಪೊಲೀಸರ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಜೊತೆಗೆ  ಚುನಾವಣೆ ಹೊಸ್ತಿನಲ್ಲಿ ಈ ರೀತಿ ಹಣದ ಕಂತೆ ಕಂತೆ ಬಾಕ್ಸ್​​ ಸಿಕ್ಕಿರುವುದು ಮಾತ್ರ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ .

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 6 December 22

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ