AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ರಸ್ತೆ ಬದಿ ಕುಡುಕನ ಕೈಗೆ ಸಿಕ್ತು ಕಂತೆ ಕಂತೆ ಹಣದ ಬಾಕ್ಸ್, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ನವೆಂಬರ್​ 27ರಂದು ನಗರದ ಪಂಪ್​ವೆಲ್ ಬಾರ್​ ಬಳಿ ಮದ್ಯವಸನಿಗೆ ಕಂತೆ ಕಂತೆ ಹಣ ಇರುವ ಬಾಕ್ಸ್ ಸಿಕ್ಕಿದೆ.

ಮಂಗಳೂರು: ರಸ್ತೆ ಬದಿ ಕುಡುಕನ ಕೈಗೆ ಸಿಕ್ತು ಕಂತೆ ಕಂತೆ ಹಣದ ಬಾಕ್ಸ್, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಶಿವರಾಜ್​
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 06, 2022 | 3:22 PM

ದಕ್ಷಿಣ ಕನ್ನಡ: ಸುಮ್ನೆ ದಾರಿಯಲ್ಲಿ ಹೋಗುತ್ತಿದ್ದಾಗ ಕಂತೆ ಕಂತೆ ಹಣ ಸಿಕ್ಕರೇ ಜಗತ್ತೇ ಅಂಗೈಯಲ್ಲಿ ಎಂದು ಅಂದುಕೊಳ್ಳುತ್ತಾರೆ. ಹಾಗೆಯೇ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಗಾದೆ ಮಾತಿನಂತೆ, ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಮಂಗಳೂರಿನಲ್ಲಿ (Mangalore) ಮದ್ಯವಸ್ಯನಿಯಾಗಿರುವ ಶಿವರಾಜ ಎಂಬುವರಿಗೆ ಕಳೆದು ತಿಂಗಳು ನವೆಂಬರ್​ 27ರಂದು ನಗರದ ಪಂಪ್​ವೆಲ್ ಬಾರ್​ ಬಳಿ ಕಂತೆ ಕಂತೆ ಹಣ ಇರುವ ಬಾಕ್ಸ್ ಸಿಕ್ಕಿದೆ. ಬಾಕ್ಸ್​ನಲ್ಲಿ ​ 500, 2,000 ರೂ. ಮುಖಬೆಲೆಯ ಗರಿ ಗರಿ ನೋಟುಗಳ ಹಣವಿತ್ತು.

ಹಣ ಸಿಕ್ಕಿದ್ದೇ ತಡ ಮದ್ಯ ವ್ಯಸನಿಯಾಗಿದ್ದ ಶಿವರಾಜ್​​ ಹಣದ ಬಾಕ್ಸ್​ನಲ್ಲಿದ್ದ 1 ಸಾವಿರ ರೂ ನೀಡಿ ಮದ್ಯ ಸೇವಿಸಿದ್ದಾರೆ. ನಂತರ ತನ್ನ ಜೊತೆಗಿದ್ದವರಿಗೂ ನೋಟಿನ ಕಂತೆ ನೀಡಿದ್ದಾರೆ. ಈ ವಿಷಯ ಕಂಕನಾಡಿ ಪೊಲೀಸರಿಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಖಾಕಿ ಹಣದ ಬಾಕ್ಸ್​ ಸಮೇತ ಶಿವರಾಜ್​ನನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಮದುಮಗ ತನ್ನ ಪ್ರೀತಿಯ ನಾಯಿಯೊಂದಿಗೆ ಮದುವೆ ಮಂಟಪಕ್ಕೆ ಬಂದಾಗ

ನಂತರ ಮೂರು ದಿನಗಳ ಕಾಲ ಠಾಣೆಯಲ್ಲಿ ಇಟ್ಟುಕೊಂಡು ಬಿಟ್ಟು ಕಳಿಸಿದ್ದಾರೆ. ಶಿವರಾಜ್​​ ಬಾಕ್ಸ್​ನಲ್ಲಿ 5ರಿಂದ 10 ಲಕ್ಷ ಇತ್ತು ಎಂದು ಹೇಳಿಕೆ ನೀಡಿದ್ದಾರೆ. ಆದರೆ ಬಾಕ್ಸ್​ನಲ್ಲಿ 49 ಸಾವಿರ ರೂ ಮಾತ್ರ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ .

ವಿಪರ್ಯಾಸವೆಂದರೆ ವಾರ ಕಳೆದರೂ ಹಣದ ವಾರಸುದಾರರು ಮಾತ್ರ ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರು ಯಾವುದೇ ದೂರು ದಾಖಲಿಸಿಕೊಂಡಿಲ್ಲ. ಪೊಲೀಸರ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಜೊತೆಗೆ  ಚುನಾವಣೆ ಹೊಸ್ತಿನಲ್ಲಿ ಈ ರೀತಿ ಹಣದ ಕಂತೆ ಕಂತೆ ಬಾಕ್ಸ್​​ ಸಿಕ್ಕಿರುವುದು ಮಾತ್ರ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ .

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 6 December 22

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ