AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಆಸ್ತಿ ಮಾಡಿದ್ದ ಮಂಗಳೂರು ಉದ್ಯಮಿಯ ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಹಿನ್ನೆಲೆ ಇಡಿ ಆಸ್ತಿ ಜಪ್ತಿ ಮಾಡಿದೆ. ಭಾರತೀಯ ಲೆಕ್ಕಾಚಾರದ ಪ್ರಕಾರ 17.34 ಕೋಟಿ ರೂ. ಮೌಲ್ಯದ ಆಸ್ತಿ ವಿದೇಶದಲ್ಲಿ ಪತ್ತೆಯಾಗಿದೆ.

ವಿದೇಶದಲ್ಲಿ ಆಸ್ತಿ ಮಾಡಿದ್ದ ಮಂಗಳೂರು ಉದ್ಯಮಿಯ ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ
ಮುಕ್ಕ ಗ್ರೂಪ್ ಆಫ್ ಕಂಪನೀಸ್​​ನ ಮೊಹಮ್ಮದ್ ಹ್ಯಾರಿಸ್
TV9 Web
| Edited By: |

Updated on:Jan 14, 2023 | 10:54 AM

Share

ಮಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಹಿನ್ನೆಲೆ ಉದ್ಯಮಿಯ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಮುಕ್ಕ ಗ್ರೂಪ್ ಆಫ್ ಕಂಪನೀಸ್​​ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋಟಿಯ ಸ್ಥಿರಾಸ್ತಿ ಜಪ್ತಿ ಮಾಡಲಾಗಿದೆ.

ಆದಾಯ ತೆರಿಗೆ ಇಲಾಖೆಯ ಮಾಹಿತಿಯ ಆಧಾರದಲ್ಲಿ ಇಡಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದರು. ತನಿಖೆ ಸಂದರ್ಭದಲ್ಲಿ ಹ್ಯಾರಿಸ್ ಯುಎಇಯಲ್ಲಿ ಫ್ಲ್ಯಾಟ್​​ ಹೊಂದಿರುವುದು, ವಿದೇಶಿ ಬ್ಯಾಂಕ್ ಖಾತೆ, ವ್ಯಾಪಾರ ಘಟಕದಲ್ಲಿ ಹೂಡಿಕೆ ಮಾಡಿದ್ದು ಪತ್ತೆಯಾಗಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಹಿನ್ನೆಲೆ ಇಡಿ ಆಸ್ತಿ ಜಪ್ತಿ ಮಾಡಿದೆ. ಭಾರತೀಯ ಲೆಕ್ಕಾಚಾರದ ಪ್ರಕಾರ 17.34 ಕೋಟಿ ರೂ. ಮೌಲ್ಯದ ಆಸ್ತಿ ವಿದೇಶದಲ್ಲಿ ಪತ್ತೆಯಾಗಿದೆ. ಇದು ಫೆಮಾ ಕಾಯ್ದೆಯ ಸೆಕ್ಷನ್ 4ರ ಅನ್ವಯ ಕಾನೂನು ಉಲ್ಲಂಘನೆಯಾಗಿದೆ. ಕಾಯ್ದೆ ಪ್ರಕಾರ ವಿದೇಶದಲ್ಲಿ ಮಾಡಿದ ಆಸ್ತಿಯನ್ನು ಭಾರತದಲ್ಲಿ ವಶಪಡಿಸಿಕೊಳ್ಳಲು ಇಡಿ ತಂಡಕ್ಕೆ ಅಧಿಕಾರವಿದೆ.

ಮಂಗಳೂರಿನ 2 ಫ್ಲ್ಯಾಟ್, ಒಂದು ಕೈಗಾರಿಕಾ ನಿವೇಶನ ಜಪ್ತಿ ಮಾಡಲಾಗಿದೆ. ‘ಫೆಮಾ’ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಚಿನ್ನಾಭರಣ ರಿಪೇರಿಗೆ ಬಂದಿದ್ದ ವ್ಯಕ್ತಿಯ ಬ್ಯಾಗ್​ ಕದ್ದೊಯ್ದ ಖದೀಮರು

ಮಂಗಳೂರು ಡಾಕ್ಟರುಗಳ ನಶಾ ಲೋಕ: ಊರು ಬಿಡುತ್ತಿರುವ ಆರೋಪಿ ವೈದ್ಯರು-ವಿದ್ಯಾರ್ಥಿಗಳು, ಬೆನ್ನುಹತ್ತಿದ CCB, ಅನೇಕರು ಅರೆಸ್ಟ್!

ಮಂಗಳೂರು: ಮಂಗಳೂರಿನಲ್ಲಿ ಡ್ರಗ್ಸ್ ದಂದೆ(Drugs) ಅಪರೇಷನ್ ಮುಂದುವರೆದಿದೆ. ಸಿಸಿಬಿ ಪೊಲೀಸರು(CCB Police) ಡ್ರಗ್ಸ್ ಜಾಲ ಪತ್ತೆಗೆ ಬಲೆ ಬೀಸಿದ್ದು ಇಂದು ಭರ್ಜರಿ ಭೇಟೆಯಾಡಿ ಅನೇಕರನ್ನು ಬಂಧಿಸಿದ್ದಾರೆ. ಉಡುಪಿಯ ಪ್ರತಿಷ್ಠಿತ ಕಾಲೇಜಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸರ್ಜನ್ ಹಾಗೂ ಓರ್ವ ವೈದ್ಯಕೀಯ ವಿದ್ಯಾರ್ಥಿಯನ್ನು ಅರೆಸ್ಟ್ ಮಾಡಲಾಗಿದೆ.

ಡ್ರಗ್ಸ್ ಪೂರೈಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ಮೂಲದ ಸುಕೇತ್ ಕಾವಾ(33), ಉಡುಪಿಯ ಸುನೀಲ್(32), ತಮಿಳುನಾಡಿನ ಅರವಿಂದ(24) ಬಂಧಿತ ಆರೋಪಿಗಳು. ಪೊಲೀಸರು ಆರೋಪಿಗಳಿಂದ ಗಾಂಜಾದಿಂದ ತಯಾರಿಸಿದ ಭಾರಿ ಪ್ರಮಾಣದ ಚರಸ್ ಜಪ್ತಿ ಮಾಡಿದ್ದಾರೆ. ಆರೋಪಿಗಳು ಉತ್ತರ ಪ್ರದೇಶದಿಂದ ರೈಲಿನಲ್ಲಿ ಗಾಂಜಾ ತಂದು ಮಂಗಳೂರಿನ ಉದ್ಯಮಿಗಳು, ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:54 am, Sat, 14 January 23

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ