AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಜಾನ್: ದಕ, ಉಡುಪಿಯಲ್ಲಿ ಇಂದೇ ರಜೆ, ನಾಳೆ ಕೆಲಸದ ದಿನ

ಉಭಯ ಜಿಲ್ಲೆಗಳಲ್ಲಿ ಇಂದು ರಂಜಾನ್ ರಜೆ ಘೋಷಿಸಲಾಗಿದ್ದರೂ ಶಾಲಾ-ಕಾಲೇಜುಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ. ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗುವುದು. ಇಂದು ರಜೆ ನೀಡಿರುವ ಕಾರಣ ನಾಳೆ, ಅಂದರೆ ಏಪ್ರಿಲ್ 11 ಅನ್ನು ನಿಯಮಿತ ಕೆಲಸದ ದಿನವೆಂದು ಪರಿಗಣಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಂಜಾನ್: ದಕ, ಉಡುಪಿಯಲ್ಲಿ ಇಂದೇ ರಜೆ, ನಾಳೆ ಕೆಲಸದ ದಿನ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Apr 10, 2024 | 10:00 AM

Share

ಮಂಗಳೂರು, ಏಪ್ರಿಲ್ 10: ರಂಜಾನ್ ಹಬ್ಬ (Ramadan) ಅಥವಾ ಈದ್ ಉಲ್-ಫಿತರ್ (Eid al-Fitr) ಪ್ರಯುಕ್ತ ಇಂದು (ಏಪ್ರಿಲ್ 10) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ (Government Holiday) ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗಳಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಎಚ್.ಬಿ ಅಧಿಕೃತ ಆದೇಶಕ್ಕೆ ಸಹಿ ಹಾಕಿದ್ದಾರೆ.

ಉಭಯ ಜಿಲ್ಲೆಗಳಲ್ಲಿ ಇಂದು ರಂಜಾನ್ ರಜೆ ಘೋಷಿಸಲಾಗಿದ್ದರೂ ಶಾಲಾ-ಕಾಲೇಜುಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ. ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗುವುದು. ಇಂದು ರಜೆ ನೀಡಿರುವ ಕಾರಣ ನಾಳೆ, ಅಂದರೆ ಏಪ್ರಿಲ್ 11 ಅನ್ನು ನಿಯಮಿತ ಕೆಲಸದ ದಿನವೆಂದು ಪರಿಗಣಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈದ್ ಉಲ್-ಫಿತರ್ ವಿಶ್ವಾದ್ಯಂತ ಮುಸ್ಲಿಮರಿಗೆ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ. ಇದು ಪವಿತ್ರ ರಂಜಾನ್ ತಿಂಗಳ ಮುಕ್ತಾಯವನ್ನು ಸೂಚಿಸುತ್ತದೆ. ಇದನ್ನು ಮುಸ್ಲಿಂ ಸಮುದಾಯದವರು ಹಬ್ಬವಾಗಿ ಆಚರಿಸುತ್ತಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ.

ಇದನ್ನೂ ಓದಿ: ಕರಾವಳಿ ಪ್ರದೇಶದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ

ಕೇರಳದಲ್ಲಿ ಮಂಗಳವಾರವೇ (ಏಪ್ರಿಲ್ 9) ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ಇಂದೇ ರಂಜಾನ್ ಆಚರಿಸಲಾಗುತ್ತಿದೆ. ಈ ಬಗ್ಗೆ ದಕ್ಷಿಣ ಕನ್ನಡ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮಂಗಳವಾರ ರಾತ್ರಿ ಘೋಷಣೆ ಮಾಡಿದ್ದರು. ಇದರಂತೆ, ಕರಾವಳಿ ಭಾಗದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿಯಲ್ಲಿ ಹಬ್ಬ ಇಂದು ಆಚರಿಸಲಾಗುತ್ತಿದೆ.

ಕರಾವಳಿ ಪ್ರದೇಶ ಹೊರತುಪಡಿಸಿ ಕರ್ನಾಟಕದ ಎಲ್ಲೆಡೆ ನಾಳೆ, ಅಂದರೆ ಏಪ್ರಿಲ್ 11ರಂದು ರಂಜಾನ್ ಹಬ್ಬ ಆಚರಣೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 am, Wed, 10 April 24

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ