AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಪೂರ್ಣ; ಪ್ರಾಯೋಗಿಕ ಸಂಚಾರ ಯಶಸ್ವಿ

ಶೀಘ್ರದಲ್ಲೇ ಈ ಮಾರ್ಗದಲ್ಲಿ ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಟ್ರ್ಯಾಕ್‌ನ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಪುತ್ತೂರು - ಸುಬ್ರಹ್ಮಣ್ಯ ರಸ್ತೆಯ ಕಾಮಗಾರಿ ಅಕ್ಟೋಬರ್​​​ಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಮಂಗಳೂರು ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಪೂರ್ಣ; ಪ್ರಾಯೋಗಿಕ ಸಂಚಾರ ಯಶಸ್ವಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jul 31, 2023 | 4:57 PM

Share

ಮಂಗಳೂರು: ಮಂಗಳೂರಿನ ಪಡೀಲ್ ರೈಲು ನಿಲ್ದಾಣದಿಂದ (Padil Railway Station) ಕಬಕ ಪುತ್ತೂರು (Kabaka Puttur) ರೈಲ್ವೆ ನಿಲ್ದಾಣದ ವರೆಗಿನ ರೈಲು ಮಾರ್ಗದ ವಿದ್ಯುದೀಕರಣ (Electrification) ಕಾಮಗಾರಿ ಪೂರ್ಣಗೊಂಡಿದ್ದು, ಎಲೆಕ್ಟ್ರಿಕಲ್ ರೈಲ್ ಇಂಜಿನ್​​ನ ಯಶಸ್ವಿ ಪ್ರಾಯೋಗಿಕ ಸಂಚಾರ ನಡೆಸಲಾಯಿತು. ಕಬಕ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ (48 ಕಿಮೀ) ವಿದ್ಯುದ್ದೀಕರಣದ ಕಾಮಗಾರಿಯೂ ಭರದಿಂದ ಸಾಗುತ್ತಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು ಮಂಗಳೂರು ನಡುವಣ ಸಂಪರ್ಕದ ಪ್ರಮುಖ ರೈಲು ಮಾರ್ಗ ಇದಾಗಿದೆ.

ಎಲೆಕ್ಟ್ರಿಕಲ್ ರೈಲ್ ಇಂಜಿನ್ ಶುಕ್ರವಾರ ಪ್ರಾಯೋಗಿಕ ಸಂಚಾರ ನಡೆಸಿದೆ. ಪಡೀಲ್​​​ನಿಂದ ಮಧ್ಯಾಹ್ನ 2.30ಕ್ಕೆ ಹೊರಟ ಎಲೆಕ್ಟ್ರಿಕಲ್ ರೈಲ್ ಇಂಜಿನ್ ಸಂಜೆ 4 ಗಂಟೆಗೆ ಕಬಕ ಪುತ್ತೂರು ತಲುಪಿತ್ತು. ನೈಋತ್ಯ ರೈಲ್ವೆಯ ಮುಖ್ಯ ಎಂಜಿನಿಯರ್ ಜೈಪಾಲ್ ಸಿಂಗ್ ಪ್ರಾಯೋಗಿಕ ಸಮಚಾರಕ್ಕೆ ಚಾಲನೆ ನೀಡಿದ್ದರು.

ಶೀಘ್ರದಲ್ಲೇ ಈ ಮಾರ್ಗದಲ್ಲಿ ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಟ್ರ್ಯಾಕ್‌ನ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಕಾಮಗಾರಿ ಅಕ್ಟೋಬರ್​​​ಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಹಾಸನ ಮತ್ತು ಸುಬ್ರಹ್ಮಣ್ಯ ರಸ್ತೆ ವಿದ್ಯುದ್ದೀಕರಣಕ್ಕೆ ಇನ್ನೂ ಸ್ವಲ್ಪ ಸಮಯ ಹಿಡಿಯಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳೂರು ರೈಲುಗಳಿಗೆ ಕರಾವಳಿಯ ಜನಪ್ರಿಯ ವ್ಯಕ್ತಿಗಳ, ಸ್ಥಳಗಳ ಹೆಸರು ಮರುನಾಮಕರಣ?

ಮಂಗಳೂರು ಹಾಗೂ ಪುತ್ತೂರು ನಡುವಣ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ 2022ರ ಸೆಪ್ಟೆಂಬರ್​​ನಲ್ಲಿ ಪ್ರಾರಂಭವಾಗಿತ್ತು. ಹಾಸನ ಮತ್ತು ಸುಬ್ರಹ್ಮಣ್ಯ ಮಾರ್ಗದ ವಿದ್ಯುದೀಕರಣಕ್ಕೆ ಇನ್ನೂ ಸ್ವಲ್ಪ ಸಮಯ ಹಿಡಿಯಲಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

2021 ರ ಜುಲೈನಲ್ಲಿ, ಮೈಸೂರು – ಹಾಸನ – ಮಂಗಳೂರು (300 ಕಿಮೀ) ರೈಲು ಮಾರ್ಗದ ವಿದ್ಯುದೀಕರಣದ ಒಪ್ಪಂದಕ್ಕೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ 47 ಕಿಮೀ ದೂರದ ಅರಸೀಕೆರೆ – ಹಾಸನ ಮಾರ್ಗ ಕೂಡ ಸೇರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Mon, 31 July 23

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ