AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲಿ ಮಳೆ ಕಡಿಮೆಯಾದರು ನಿಲ್ಲದ ಕಡಲ ಅಬ್ಬರ, ಮಂಗಳೂರು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ತಗ್ಗಿದರೂ ಕಡಲಬ್ಬರ ಜೋರಾಗಿದೆ. ಸಮುದ್ರ ಪ್ರಕ್ಷುಬ್ಧ ಹಿನ್ನೆಲೆ ಜಿಲ್ಲೆಯ ಎಲ್ಲಾ ಬೀಚ್​ಗಳಿಗೆ ಪ್ರವಾಸಿಗರಿಗೆ ನಿಷೇಧಿಸಲಾಗಿದೆ.

ಕರಾವಳಿಯಲ್ಲಿ ಮಳೆ ಕಡಿಮೆಯಾದರು ನಿಲ್ಲದ ಕಡಲ ಅಬ್ಬರ, ಮಂಗಳೂರು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ
ಬೀಚ್
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 30, 2023 | 11:13 AM

Share

ಮಂಗಳೂರು, (ಜುಲೈ 30): ಕರ್ನಾಟಕದ (Karnataka) ಕರಾವಳಿ ಭಾಗದಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿದ್ದ ಮಳೆ(Rain) ಕೊಂಚ ಕಡಿಮೆಯಾಗಿದೆ. ಆದ್ರೆ, ಮಳೆ ತಗ್ಗಿದರೂ ಕಡಲ ಅಬ್ಬರ ಜೋರಾಗಿದೆ. ಮಂಗಳೂರಿನಲ್ಲಿ(Mangaluru)  ಸಮುದ್ರ ಪ್ರಕ್ಷುಬ್ಧ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಬೀಚ್​ಗಳಿಗೆ ನಿರ್ಬಂಧಿಸಲಾಗಿದೆ. ಮಂಗಳೂರಿನ ಎಂಟು ಬೀಚ್ ಗಳಿಗೆ (beaches) ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಲಾಗಿದೆ. ನಿರ್ಬಂಧ ಇದ್ದರೂ ಸಹ ಪ್ರವಾಸಿಗರು ಮಂಗಳೂರಿನ ಪಣಂಬೂರು ಬೀಚ್ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದಾರೆ. ಎಚ್ಚರಿಕೆಯ ಸೂಚನೆ ನಡುವೆಯೂ ಪ್ರವಾಸಿಗರು ಕಡಲಿಗೆ ಇಳಿಯುತ್ತಿದ್ದು, ಭದ್ರತಾ ಸಿಬ್ಬಂದಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: Kodachadri: ಪ್ರವಾಸಿಗರ ಭೂ ಸ್ವರ್ಗ ಕೊಡಚಾದ್ರಿ ಗಿರಿಗೆ ಇಂದಿನಿಂದ ಪ್ರವೇಶ ನಿಷೇಧ

ಯಾರೂ ಬೀಚ್​ಗೆ ಬರಬಾರದು ಎಂದು ಅಡ್ಡಲಾಗಿ ಹಗ್ಗ ಕಟ್ಟಿದ್ದರೂ ಸಹ ಪ್ರವಾಸಿಗರು ಅದನ್ನು ದಾಟಿ ಬೀಚಿಗೆ ಆಗಮಿಸುತ್ತಿದ್ದಾರೆ. ಇದರಿಂದ ಪೊಲೀಸರು, ಸಮುದ್ರ ತೀರದಿಂದ ಪ್ರವಾಸಿಗರನ್ನು ಚದುರಿಸುತ್ತಿದ್ದಾರೆ. ಅಲ್ಲದೇ ಲೈಫ್ ಗಾರ್ಡ್ ಸಿಬ್ಬಂದಿ ಸಹ ಸೈರನ್ ಹಾಕಿ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್, ಸೆಲ್ಫಿ ತೆಗೆಯದಂತೆಯೂ ನಿರ್ಬಂಧಿಸಲಾಗಿದೆ. ಈಗಾಗಲೇ ಎಂಟು ಬೀಚ್ ಗಳಲ್ಲಿ 24 ಜನ ಹೋಂ ಗಾರ್ಡ್ಸ್ ನೇಮಕ ಮಾಡಲಾಗಿದೆ.

ಮಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ