ಕರಾವಳಿಯಲ್ಲಿ ಮಳೆ ಕಡಿಮೆಯಾದರು ನಿಲ್ಲದ ಕಡಲ ಅಬ್ಬರ, ಮಂಗಳೂರು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ತಗ್ಗಿದರೂ ಕಡಲಬ್ಬರ ಜೋರಾಗಿದೆ. ಸಮುದ್ರ ಪ್ರಕ್ಷುಬ್ಧ ಹಿನ್ನೆಲೆ ಜಿಲ್ಲೆಯ ಎಲ್ಲಾ ಬೀಚ್​ಗಳಿಗೆ ಪ್ರವಾಸಿಗರಿಗೆ ನಿಷೇಧಿಸಲಾಗಿದೆ.

ಕರಾವಳಿಯಲ್ಲಿ ಮಳೆ ಕಡಿಮೆಯಾದರು ನಿಲ್ಲದ ಕಡಲ ಅಬ್ಬರ, ಮಂಗಳೂರು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ
ಬೀಚ್
Edited By:

Updated on: Jul 30, 2023 | 11:13 AM

ಮಂಗಳೂರು, (ಜುಲೈ 30): ಕರ್ನಾಟಕದ (Karnataka) ಕರಾವಳಿ ಭಾಗದಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿದ್ದ ಮಳೆ(Rain) ಕೊಂಚ ಕಡಿಮೆಯಾಗಿದೆ. ಆದ್ರೆ, ಮಳೆ ತಗ್ಗಿದರೂ ಕಡಲ ಅಬ್ಬರ ಜೋರಾಗಿದೆ. ಮಂಗಳೂರಿನಲ್ಲಿ(Mangaluru)  ಸಮುದ್ರ ಪ್ರಕ್ಷುಬ್ಧ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಬೀಚ್​ಗಳಿಗೆ ನಿರ್ಬಂಧಿಸಲಾಗಿದೆ. ಮಂಗಳೂರಿನ ಎಂಟು ಬೀಚ್ ಗಳಿಗೆ (beaches) ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಲಾಗಿದೆ. ನಿರ್ಬಂಧ ಇದ್ದರೂ ಸಹ ಪ್ರವಾಸಿಗರು ಮಂಗಳೂರಿನ ಪಣಂಬೂರು ಬೀಚ್ ಸಮುದ್ರ ತೀರಕ್ಕೆ ಆಗಮಿಸುತ್ತಿದ್ದಾರೆ. ಎಚ್ಚರಿಕೆಯ ಸೂಚನೆ ನಡುವೆಯೂ ಪ್ರವಾಸಿಗರು ಕಡಲಿಗೆ ಇಳಿಯುತ್ತಿದ್ದು, ಭದ್ರತಾ ಸಿಬ್ಬಂದಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: Kodachadri: ಪ್ರವಾಸಿಗರ ಭೂ ಸ್ವರ್ಗ ಕೊಡಚಾದ್ರಿ ಗಿರಿಗೆ ಇಂದಿನಿಂದ ಪ್ರವೇಶ ನಿಷೇಧ

ಯಾರೂ ಬೀಚ್​ಗೆ ಬರಬಾರದು ಎಂದು ಅಡ್ಡಲಾಗಿ ಹಗ್ಗ ಕಟ್ಟಿದ್ದರೂ ಸಹ ಪ್ರವಾಸಿಗರು ಅದನ್ನು ದಾಟಿ ಬೀಚಿಗೆ ಆಗಮಿಸುತ್ತಿದ್ದಾರೆ. ಇದರಿಂದ ಪೊಲೀಸರು, ಸಮುದ್ರ ತೀರದಿಂದ ಪ್ರವಾಸಿಗರನ್ನು ಚದುರಿಸುತ್ತಿದ್ದಾರೆ. ಅಲ್ಲದೇ ಲೈಫ್ ಗಾರ್ಡ್ ಸಿಬ್ಬಂದಿ ಸಹ ಸೈರನ್ ಹಾಕಿ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್, ಸೆಲ್ಫಿ ತೆಗೆಯದಂತೆಯೂ ನಿರ್ಬಂಧಿಸಲಾಗಿದೆ. ಈಗಾಗಲೇ ಎಂಟು ಬೀಚ್ ಗಳಲ್ಲಿ 24 ಜನ ಹೋಂ ಗಾರ್ಡ್ಸ್ ನೇಮಕ ಮಾಡಲಾಗಿದೆ.

ಮಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us