ಮಂಗಳೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ

ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಪೊಲೀಸರು ಮುಂದಾಗಿದ್ದಾರೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.

ಮಂಗಳೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ
ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ
Follow us
| Updated By: Rakesh Nayak Manchi

Updated on: Nov 16, 2023 | 12:09 PM

ಮಂಗಳೂರು, ನ.16: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಪೊಲೀಸರು ಮುಂದಾಗಿದ್ದಾರೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಐವರು ಭಜರಂಗದಳ (Bajrang Dal) ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.

ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಅವರಿಗೆ ನೋಟಿ ಜಾರಿ ಮಾಡಿದ ಪೊಲೀಸರು, ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರೆದುರು ಹಾಜರಾಗಲು ಸೂಚನೆ ನೀಡಿದ್ದಾರೆ.

ಭಜರಂಗದಳದಲ್ಲಿ ದಿನೇಶ್, ಪ್ರಜ್ವಲ್ ಅವರು ಪುತ್ತೂರು ತಾಲೂಕು ಜವಾಬ್ದಾರಿ ಹೊಂದಿದ್ದು, ಲತೇಶ್ ಗುಂಡ್ಯ ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಆಗಿದ್ದಾರೆ. ಉಳಿದ ಇಬ್ಬರು ಕಾರ್ಯಕರ್ತರಾದ ನಿಶಾಂತ್ ಮತ್ತು ಪ್ರದೀಪ್ ವಿರುದ್ಧವೂ ಗಡೀಪಾರು ಅಸ್ತ್ರ ಪ್ರಯೋಗಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ದಪ್ಪ ಇದ್ದೀನಿ, ಚನ್ನಾಗಿ ಕಾಣುತ್ತಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ಈ ಐವರಲ್ಲಿ ಲತೇಶ್ ಹೊರತುಪಡಿಸಿ ಉಳಿದ ನಾಲ್ವರ ವಿರುದ್ಧ ಒಂದೊಂದೇ ಪ್ರಕರಣಗಳಿವೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಸಂಬಂಧ ಪುತ್ತೂರು ನಗರ ಠಾಣೆ ಹಾಗೂ ಸುಳ್ಯ ಠಾಣೆಯಿಂದ ಗಡೀಪಾರಿಗೆ ಮನವಿ ಮಾಡಲಾಗಿದೆ.

ಲತೇಶ್​ಗೆ ಬಳ್ಳಾರಿ ಜಿಲ್ಲೆಗೆ, ಪ್ರಜ್ವಲ್​ಗೆ ಬಾಗಲಕೋಟೆ ಜಿಲ್ಲೆಗೆ ಗಡೀಪಾರು ಮಾಡಲು ಮನವಿ ಮಾಡಲಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ 1953ರ ಕಲಂ 55ರ ಅಡಿ ಗಡೀಪಾರು ನೋಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾದ ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಮಾಡಿ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಕಳೆದ ಜುಲೈನಲ್ಲಿ ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರ ಮೇಲೆ ಗಡೀಪಾರು ಅಸ್ತ್ರ ಪ್ರಯೋಗಿಸಲಾಗಿತ್ತು. ಆದರೆ ಸಂಘಟನೆಯು ನ್ಯಾಯಾಲಯದ ಮೆಟ್ಟಿಲೇರಿ ತಡೆ ತಂದಿತ್ತು. ಈ ಬಾರಿ ಐವರ ವಿರುದ್ಧ ಗಡಿಪಾರು ಅಸ್ತ್ರ ಪ್ರಯೋಗಿಸಲಾಗಿದ್ದು, ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್​ಗಳಿಂದ ಗಡೀಪಾರಿಗೆ ವರದಿ ಸಿದ್ಧಪಡಿಸಲಾಗುತ್ತಿದ್ದು, ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ