AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ

ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಪೊಲೀಸರು ಮುಂದಾಗಿದ್ದಾರೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.

ಮಂಗಳೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ
ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ
ಅಶೋಕ್​ ಪೂಜಾರಿ, ಮಂಗಳೂರು
| Edited By: Rakesh Nayak Manchi|

Updated on: Nov 16, 2023 | 12:09 PM

Share

ಮಂಗಳೂರು, ನ.16: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಪೊಲೀಸರು ಮುಂದಾಗಿದ್ದಾರೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕೇಳಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಐವರು ಭಜರಂಗದಳ (Bajrang Dal) ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ.

ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಅವರಿಗೆ ನೋಟಿ ಜಾರಿ ಮಾಡಿದ ಪೊಲೀಸರು, ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರೆದುರು ಹಾಜರಾಗಲು ಸೂಚನೆ ನೀಡಿದ್ದಾರೆ.

ಭಜರಂಗದಳದಲ್ಲಿ ದಿನೇಶ್, ಪ್ರಜ್ವಲ್ ಅವರು ಪುತ್ತೂರು ತಾಲೂಕು ಜವಾಬ್ದಾರಿ ಹೊಂದಿದ್ದು, ಲತೇಶ್ ಗುಂಡ್ಯ ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ಆಗಿದ್ದಾರೆ. ಉಳಿದ ಇಬ್ಬರು ಕಾರ್ಯಕರ್ತರಾದ ನಿಶಾಂತ್ ಮತ್ತು ಪ್ರದೀಪ್ ವಿರುದ್ಧವೂ ಗಡೀಪಾರು ಅಸ್ತ್ರ ಪ್ರಯೋಗಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ದಪ್ಪ ಇದ್ದೀನಿ, ಚನ್ನಾಗಿ ಕಾಣುತ್ತಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ಈ ಐವರಲ್ಲಿ ಲತೇಶ್ ಹೊರತುಪಡಿಸಿ ಉಳಿದ ನಾಲ್ವರ ವಿರುದ್ಧ ಒಂದೊಂದೇ ಪ್ರಕರಣಗಳಿವೆ. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಸಂಬಂಧ ಪುತ್ತೂರು ನಗರ ಠಾಣೆ ಹಾಗೂ ಸುಳ್ಯ ಠಾಣೆಯಿಂದ ಗಡೀಪಾರಿಗೆ ಮನವಿ ಮಾಡಲಾಗಿದೆ.

ಲತೇಶ್​ಗೆ ಬಳ್ಳಾರಿ ಜಿಲ್ಲೆಗೆ, ಪ್ರಜ್ವಲ್​ಗೆ ಬಾಗಲಕೋಟೆ ಜಿಲ್ಲೆಗೆ ಗಡೀಪಾರು ಮಾಡಲು ಮನವಿ ಮಾಡಲಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ 1953ರ ಕಲಂ 55ರ ಅಡಿ ಗಡೀಪಾರು ನೋಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾದ ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಮಾಡಿ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಕಳೆದ ಜುಲೈನಲ್ಲಿ ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರ ಮೇಲೆ ಗಡೀಪಾರು ಅಸ್ತ್ರ ಪ್ರಯೋಗಿಸಲಾಗಿತ್ತು. ಆದರೆ ಸಂಘಟನೆಯು ನ್ಯಾಯಾಲಯದ ಮೆಟ್ಟಿಲೇರಿ ತಡೆ ತಂದಿತ್ತು. ಈ ಬಾರಿ ಐವರ ವಿರುದ್ಧ ಗಡಿಪಾರು ಅಸ್ತ್ರ ಪ್ರಯೋಗಿಸಲಾಗಿದ್ದು, ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್​ಗಳಿಂದ ಗಡೀಪಾರಿಗೆ ವರದಿ ಸಿದ್ಧಪಡಿಸಲಾಗುತ್ತಿದ್ದು, ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More