AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಪ್ರಮುಖ ರೈಲುಗಳ ವಿಸ್ತರಣೆ: ಸಂಸದ ನಳಿನ್ ಬೇಡಿಕೆಗೇ ಒಲ್ಲೆ ಎಂದ ರೈಲ್ವೆ

ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಗೆ ಪ್ರತಿಕ್ರಿಯಿಸಿದ ದಕ್ಷಿಣ ರೈಲ್ವೆ ವ್ಯವಸ್ಥಾಪಕ ಆರ್.ಎನ್.ಸಿಂಗ್, ಪ್ಲಾಟ್‌ಫಾರ್ಮ್‌ಗಳು ಮತ್ತು ಲಭ್ಯವಿರುವ ಟ್ರ್ಯಾಕ್‌ಗಳ ಕೊರತೆಯಿಂದಾಗಿ ಪ್ರಮುಖ ರೈಲುಗಳನ್ನು ಸೆಂಟ್ರಲ್ ನಿಲ್ದಾಣಕ್ಕೆ ವಿಸ್ತರಿಸುವುದು ಕಾರ್ಯಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಪ್ರಮುಖ ರೈಲುಗಳ ವಿಸ್ತರಣೆ: ಸಂಸದ ನಳಿನ್ ಬೇಡಿಕೆಗೇ ಒಲ್ಲೆ ಎಂದ ರೈಲ್ವೆ
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ
TV9 Web
| Edited By: |

Updated on:Jan 03, 2024 | 7:32 AM

Share

ಮಂಗಳೂರು, ಜನವರಿ 3: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ (Mangaluru Central Railway Station) ನಿರ್ಮಾಣವಾಗಿರುವ ಹೆಚ್ಚುವರಿ ಪ್ಲಾಟ್‌ಫಾರ್ಮ್‌ಗಳನ್ನು ಕೆಲ ದಿನಗಳ ಹಿಂದಷ್ಟೇ ಲೋಕಾರ್ಪಣೆಗೊಳಿಸಲಾಗಿದೆ. ಮಂಗಳೂರು ಗೋವಾ ವಂದೇ ಭಾರತ್​ ರೈಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಸಂದರ್ಭದಲ್ಲೇ, ಹೆಚ್ಚುವರಿ ಪ್ಲಾಟ್‌ಫಾರ್ಮ್‌ಗಳನ್ನು ಕೂಡ ಲೋಕಾರ್ಪಣೆ ಮಾಡಲಾಗಿತ್ತು. ಆದರೆ, ಪ್ರಮುಖ ರೈಲುಗಳನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ವಿಸ್ತರಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಂಬ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರ ಮನವಿಯನ್ನು ರೈಲ್ವೆ ಇಲಾಖೆ ತಿರಸ್ಕರಿಸಿದೆ.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಪ್ರಮುಖ ರೈಲುಗಳನ್ನು ವಿಸ್ತರಿಸಬೇಕೆಂಬ ಬೇಡಿಕೆಯನ್ನು ದಕ್ಷಿಣ ರೈಲ್ವೆ ಅಧಿಕಾರಿಗಳು ತಿರಸ್ಕರಿಸಿದ್ದಾರೆ.

ಮುಂಬೈ ಸಿಎಸ್‌ಎಂಟಿ-ಮಂಗಳೂರು ಜಂಕ್ಷನ್ ಸೂಪರ್‌ಫಾಸ್ಟ್, ವಾರಕ್ಕೆ ಮೂರು ದಿನ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್, ವಾರಕ್ಕೊಮ್ಮೆ ಸಂಚರಿಸುವ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ಮತ್ತು ವಿಜಯಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲುಗಳನ್ನು ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸುವಂತೆ ವಿವಿಧ ಪ್ರಯಾಣಿಕರ ಸಂಘಟನೆಗಳು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಬೇಡಿಕೆಗೆ ಅನುಗುಣವಾಗಿ ಮಂಗಳೂರು ಸೆಂಟ್ರಲ್‌ನಲ್ಲಿ ನಾಲ್ಕು ಮತ್ತು ಐದನೇ ಪ್ಲಾಟ್‌ಫಾರ್ಮ್‌ಗಳ ನಿರ್ಮಾಣ ಮಾಡಲಾಗಿದೆ. ಆದರೆ, ಪ್ಲಾಟ್‌ಫಾರ್ಮ್‌ಗಳ ಕೊರತೆ ಮತ್ತು ಖಾಲಿ ಟ್ರ್ಯಾಕ್‌ಗಳ ಕೊರತೆಯನ್ನು ಉಲ್ಲೇಖಿಸಿ ದಕ್ಷಿಣ ರೈಲ್ವೆ ಬೇಡಿಕೆಯನ್ನು ತಿರಸ್ಕರಿಸಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಗೆ ಪ್ರತಿಕ್ರಿಯಿಸಿದ ದಕ್ಷಿಣ ರೈಲ್ವೆ ವ್ಯವಸ್ಥಾಪಕ ಆರ್.ಎನ್.ಸಿಂಗ್, ಪ್ಲಾಟ್‌ಫಾರ್ಮ್‌ಗಳು ಮತ್ತು ಲಭ್ಯವಿರುವ ಟ್ರ್ಯಾಕ್‌ಗಳ ಕೊರತೆಯಿಂದಾಗಿ ಪ್ರಮುಖ ರೈಲುಗಳನ್ನು ಸೆಂಟ್ರಲ್ ನಿಲ್ದಾಣಕ್ಕೆ ವಿಸ್ತರಿಸುವುದು ಕಾರ್ಯಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು-ಮಡಗಾಂವ್‌ ಹಾಗೂ ಕೊಯಮತ್ತೂರು-ಬೆಂಗಳೂರು ವಂದೇ ಭಾರತ್​ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ

ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲುಗಳು ಮಂಗಳೂರು ಜಂಕ್ಷನ್‌ಗೆ ಸಂಜೆ 4.40 ಕ್ಕೆ ಆಗಮಿಸುತ್ತವೆ. ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಿದರೆ, ಇದು ಹೆಚ್ಚಿನ ಒತ್ತಡವನ್ನು ಉಂಟುಮಾಡಲಿದೆ. ಆಗಮನ, ನಿರ್ಗಮನ, ಕ್ರಾಸಿಂಗ್‌ಗಳು ಮತ್ತು ಪ್ಲಾಟ್‌ಫಾರ್ಮ್ ಕೊರತೆಯು ಸಮಸ್ಯೆಗಳಿಗೆ ಕಾರಣವಾಗುತ್ತದೆ. ವಿಜಯಪುರ ಎಕ್ಸ್‌ಪ್ರೆಸ್ ಮತ್ತು ಸಿಎಸ್‌ಟಿ ಸೂಪರ್‌ಫಾಸ್ಟ್ ರೈಲುಗಳಿಗೆ ಮಂಗಳೂರು ಜಂಕ್ಷನ್‌ನಲ್ಲಿ ಕೇವಲ ಎರಡು ಗಂಟೆ 55 ನಿಮಿಷಗಳ ನಿಲುಗಡೆ ಸಮಯ ಇದೆ. ಇದನ್ನು ವಿಸ್ತರಿಸಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಸಿಂಗ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Wed, 3 January 24

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ