AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಪ್ರಮುಖ ರೈಲುಗಳ ವಿಸ್ತರಣೆ: ಸಂಸದ ನಳಿನ್ ಬೇಡಿಕೆಗೇ ಒಲ್ಲೆ ಎಂದ ರೈಲ್ವೆ

ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಗೆ ಪ್ರತಿಕ್ರಿಯಿಸಿದ ದಕ್ಷಿಣ ರೈಲ್ವೆ ವ್ಯವಸ್ಥಾಪಕ ಆರ್.ಎನ್.ಸಿಂಗ್, ಪ್ಲಾಟ್‌ಫಾರ್ಮ್‌ಗಳು ಮತ್ತು ಲಭ್ಯವಿರುವ ಟ್ರ್ಯಾಕ್‌ಗಳ ಕೊರತೆಯಿಂದಾಗಿ ಪ್ರಮುಖ ರೈಲುಗಳನ್ನು ಸೆಂಟ್ರಲ್ ನಿಲ್ದಾಣಕ್ಕೆ ವಿಸ್ತರಿಸುವುದು ಕಾರ್ಯಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಪ್ರಮುಖ ರೈಲುಗಳ ವಿಸ್ತರಣೆ: ಸಂಸದ ನಳಿನ್ ಬೇಡಿಕೆಗೇ ಒಲ್ಲೆ ಎಂದ ರೈಲ್ವೆ
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ
TV9 Web
| Edited By: |

Updated on:Jan 03, 2024 | 7:32 AM

Share

ಮಂಗಳೂರು, ಜನವರಿ 3: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ (Mangaluru Central Railway Station) ನಿರ್ಮಾಣವಾಗಿರುವ ಹೆಚ್ಚುವರಿ ಪ್ಲಾಟ್‌ಫಾರ್ಮ್‌ಗಳನ್ನು ಕೆಲ ದಿನಗಳ ಹಿಂದಷ್ಟೇ ಲೋಕಾರ್ಪಣೆಗೊಳಿಸಲಾಗಿದೆ. ಮಂಗಳೂರು ಗೋವಾ ವಂದೇ ಭಾರತ್​ ರೈಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಸಂದರ್ಭದಲ್ಲೇ, ಹೆಚ್ಚುವರಿ ಪ್ಲಾಟ್‌ಫಾರ್ಮ್‌ಗಳನ್ನು ಕೂಡ ಲೋಕಾರ್ಪಣೆ ಮಾಡಲಾಗಿತ್ತು. ಆದರೆ, ಪ್ರಮುಖ ರೈಲುಗಳನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ವಿಸ್ತರಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಂಬ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರ ಮನವಿಯನ್ನು ರೈಲ್ವೆ ಇಲಾಖೆ ತಿರಸ್ಕರಿಸಿದೆ.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಪ್ರಮುಖ ರೈಲುಗಳನ್ನು ವಿಸ್ತರಿಸಬೇಕೆಂಬ ಬೇಡಿಕೆಯನ್ನು ದಕ್ಷಿಣ ರೈಲ್ವೆ ಅಧಿಕಾರಿಗಳು ತಿರಸ್ಕರಿಸಿದ್ದಾರೆ.

ಮುಂಬೈ ಸಿಎಸ್‌ಎಂಟಿ-ಮಂಗಳೂರು ಜಂಕ್ಷನ್ ಸೂಪರ್‌ಫಾಸ್ಟ್, ವಾರಕ್ಕೆ ಮೂರು ದಿನ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್, ವಾರಕ್ಕೊಮ್ಮೆ ಸಂಚರಿಸುವ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ಮತ್ತು ವಿಜಯಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲುಗಳನ್ನು ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸುವಂತೆ ವಿವಿಧ ಪ್ರಯಾಣಿಕರ ಸಂಘಟನೆಗಳು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಬೇಡಿಕೆಗೆ ಅನುಗುಣವಾಗಿ ಮಂಗಳೂರು ಸೆಂಟ್ರಲ್‌ನಲ್ಲಿ ನಾಲ್ಕು ಮತ್ತು ಐದನೇ ಪ್ಲಾಟ್‌ಫಾರ್ಮ್‌ಗಳ ನಿರ್ಮಾಣ ಮಾಡಲಾಗಿದೆ. ಆದರೆ, ಪ್ಲಾಟ್‌ಫಾರ್ಮ್‌ಗಳ ಕೊರತೆ ಮತ್ತು ಖಾಲಿ ಟ್ರ್ಯಾಕ್‌ಗಳ ಕೊರತೆಯನ್ನು ಉಲ್ಲೇಖಿಸಿ ದಕ್ಷಿಣ ರೈಲ್ವೆ ಬೇಡಿಕೆಯನ್ನು ತಿರಸ್ಕರಿಸಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಗೆ ಪ್ರತಿಕ್ರಿಯಿಸಿದ ದಕ್ಷಿಣ ರೈಲ್ವೆ ವ್ಯವಸ್ಥಾಪಕ ಆರ್.ಎನ್.ಸಿಂಗ್, ಪ್ಲಾಟ್‌ಫಾರ್ಮ್‌ಗಳು ಮತ್ತು ಲಭ್ಯವಿರುವ ಟ್ರ್ಯಾಕ್‌ಗಳ ಕೊರತೆಯಿಂದಾಗಿ ಪ್ರಮುಖ ರೈಲುಗಳನ್ನು ಸೆಂಟ್ರಲ್ ನಿಲ್ದಾಣಕ್ಕೆ ವಿಸ್ತರಿಸುವುದು ಕಾರ್ಯಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು-ಮಡಗಾಂವ್‌ ಹಾಗೂ ಕೊಯಮತ್ತೂರು-ಬೆಂಗಳೂರು ವಂದೇ ಭಾರತ್​ ರೈಲಿಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ

ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲುಗಳು ಮಂಗಳೂರು ಜಂಕ್ಷನ್‌ಗೆ ಸಂಜೆ 4.40 ಕ್ಕೆ ಆಗಮಿಸುತ್ತವೆ. ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಿದರೆ, ಇದು ಹೆಚ್ಚಿನ ಒತ್ತಡವನ್ನು ಉಂಟುಮಾಡಲಿದೆ. ಆಗಮನ, ನಿರ್ಗಮನ, ಕ್ರಾಸಿಂಗ್‌ಗಳು ಮತ್ತು ಪ್ಲಾಟ್‌ಫಾರ್ಮ್ ಕೊರತೆಯು ಸಮಸ್ಯೆಗಳಿಗೆ ಕಾರಣವಾಗುತ್ತದೆ. ವಿಜಯಪುರ ಎಕ್ಸ್‌ಪ್ರೆಸ್ ಮತ್ತು ಸಿಎಸ್‌ಟಿ ಸೂಪರ್‌ಫಾಸ್ಟ್ ರೈಲುಗಳಿಗೆ ಮಂಗಳೂರು ಜಂಕ್ಷನ್‌ನಲ್ಲಿ ಕೇವಲ ಎರಡು ಗಂಟೆ 55 ನಿಮಿಷಗಳ ನಿಲುಗಡೆ ಸಮಯ ಇದೆ. ಇದನ್ನು ವಿಸ್ತರಿಸಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಸಿಂಗ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Wed, 3 January 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ