AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲೇ ಹಫ್ತಾ ವಸೂಲಿ! ಸಹ ಕೈದಿಗೆ ಹಲ್ಲೆ: ನಾಲ್ವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆಯಡಿ ಎಫ್​ಐಆರ್

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಗಳ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಆದರೆ ಇಲ್ಲಿಗೆ ಖಡಕ್ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಿದ ಬಳಿಕ ಕ್ರಿಮಿನಲ್​ಗಳೆಲ್ಲಾ ಬಿಲ ಸೇರಿಕೊಂಡಿದ್ದಾರೆ. ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ಪೊಲೀಸ್ ಇಲಾಖೆ, ಬಾಲ ಬಿಚ್ಚುವವರ ವಿರುದ್ಧ ಕೋಕಾ ಕಾಯ್ದೆಯ ಅಸ್ತ್ರ ಬಳಸುತ್ತಿದೆ. ಜೈಲಿನಲ್ಲೇ ಕೈದಿಗಳ ಮೇಲೆ ಹಲ್ಲೆ ನಡೆಸಿ ಹಫ್ತಾ ಮಾಡುತ್ತಿದ್ದವರ ಮೇಲೆ ಕೋಕಾ ಕಾಯ್ದೆಯಡಿ ಎಫ್​ಐಆರ್ ದಾಖಲಿಸಲಾಗಿದೆ.

ಜೈಲಿನಲ್ಲೇ ಹಫ್ತಾ ವಸೂಲಿ! ಸಹ ಕೈದಿಗೆ ಹಲ್ಲೆ: ನಾಲ್ವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆಯಡಿ ಎಫ್​ಐಆರ್
ಮಂಗಳೂರು ಜಿಲ್ಲಾ ಕಾರಾಗೃಹ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 25, 2025 | 12:03 PM

Share

ಮಂಗಳೂರು, ಜುಲೈ 25: ಮಂಗಳೂರಿನಲ್ಲಿ (Mangaluru) ಕಾನೂನು ಸುವ್ಯವಸ್ಥೆ ಪೊಲೀಸರ ನಿಯಂತ್ರಣಕ್ಕೆ ಬಂದಿದೆ. ನಗರ ಪೊಲೀಸ್ ಕಮಿಷನರ್ ಆಗಿ ಖಡಕ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕರಿಸಿದ ಬಳಿಕ ಕ್ರಿಮಿನಲ್​ಗಳನ್ನು ಹೆಡೆಮುರಿ ಕಟ್ಟಲಾಗುತ್ತಿದೆ. ಇದರ ಜೊತೆ ಕ್ರಿಮಿನಲ್​ಗಳ ವಿರುದ್ದ ಕಠಿಣ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದು, ಇದೀಗ ಕೆ-ಕೋಕಾ ಕಾಯ್ದೆಯಡಿ (KOKA Act) ಪ್ರಕರಣ ದಾಖಲಿಸಲಾಗುತ್ತಿದೆ. ಇತ್ತಿಚೇಗೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಸಹ ಕೈದಿಗೆ ಹಲ್ಲೆ ನಡೆಸಿ ಹಣಕ್ಕಾಗಿ ಬೇಡಿಕೆಯಿಟ್ಟು ಇಪ್ಪತ್ತು ಸಾವಿರ ರೂಪಾಯಿ ಹಫ್ತಾ ವಸೂಲಿ ಮಾಡಿದ ನಾಲ್ವರು ಆರೋಪಿಗಳ ವಿರುದ್ದ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿ (Karnataka Control of Organized Crimes Act) ಪ್ರಕರಣ ದಾಖಲಿಸಲಾಗಿದೆ.

ಜೈಲು ಒಳಗಡೆಯೆ ಹಫ್ತಾ ವಸೂಲಿ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್ ಸುಧೀರ್ ಕುಮಾರ್, ಆರೋಪಿತ ನಾಲ್ವರು ಕೈದಿಗಳಾದ ಧನು ಯಾನೆ ಧನುಷ್ ಭಂಡಾರಿ, ಸಚಿನ್ ತಲಪಾಡಿ, ದಿಲೇಶ್ ಬಂಗೇರ ಯಾನೆ ದಿಲ್ಲು, ಲಾಯಿ ವೇಗಸ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಕೋಕಾ ಕಾಯ್ದೆ ಎಂದರೇನು?

ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಥವಾ ಕೆ-ಕೋಕಾ ಕಾಯ್ದೆ 2000ನೇ ಇಸವಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ. ಇದು ಸಂಘಟಿತ ಅಪರಾಧ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದ ಕಾನೂನಾಗಿದೆ.

ಇದನ್ನೂ ಓದಿ
Image
ಹಾಳೆ ತಟ್ಟೆಯಲ್ಲಿ ಕ್ಯಾನ್ಸರ್ ಕಾರಕ: ಶಿವಮೊಗ್ಗದ ಸಣ್ಣ ಉದ್ಯಮಿಗಳಿಗೆ ಸಂಕಷ್ಟ
Image
ಸರ್ಕಾರಿ ಅಧಿಕಾರಿಗಳ ಜತೆ ಸುರ್ಜೇವಾಲ ಸಭೆ? ರಾಜಣ್ಣ, ಜೆಡಿಎಸ್ ತೀವ್ರ ಆಕ್ಷೇಪ
Image
ಆನೆಗಳಿಗೆ ವಿಮಾನ ಪ್ರಯಾಣ ಭಾಗ್ಯ! ಜಪಾನ್​ಗೆ ತೆರಳಿದ ಬನ್ನೇರುಘಟ್ಟದ ಆನೆಗಳು
Image
ದೇವ ಸನ್ನಿಧಾನ ಉದ್ಯಾನದಲ್ಲಿ ಅನೈತಿಕ ಚಟುವಟಿಕೆ: 200 ಕೊಟ್ರೆ ಖುಲ್ಲಂ ಖುಲ್ಲ

ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಇರುವ ಮಾನದಂಡವೇನು?

ಎರಡು ಪ್ರಕರಣಗಳಲ್ಲಿ ಶಾಮೀಲಾದ ಆರೋಪಿಗಳು ಮತ್ತೆ ಅಪರಾಧ ಕೃತ್ಯಗಳನ್ನು ಎಸಗಿದರೆ ಅವರ ವಿರುದ್ದ ಕೆ-ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡುವ ಅವಕಾಶ ಕಾನೂನಿನಲ್ಲಿದೆ.

ಕೋಕಾ ಕಾಯ್ದೆಯಡಿ ಪ್ರಕರಣ: ಆರೋಪ ಸಾಬೀತಾದರೆ ಶಿಕ್ಷೆ ಏನು?

ಕೆ-ಕೋಕಾ ಕಾಯ್ದೆಯಡಿ ಕನಿಷ್ಠ ಐದು ವರ್ಷ ಶಿಕ್ಷೆ ವಿಧಿಸಲು ಅವಕಾಶವಿದ್ದು, ಗರಿಷ್ಠ ಜೀವಾವಧಿ ಶಿಕ್ಷೆವರೆಗೂ ವಿಸ್ತರಿಸಬಹುದಾಗಿದೆ. ಈ ಕ್ರಿಮಿನಲ್ ಗ್ಯಾಂಗ್ ಸದಸ್ಯರಾಗಿದ್ದವರ ಮೇಲೂ ಕನಿಷ್ಠ ‌ಐದು ವರ್ಷ ಶಿಕ್ಷೆ ವಿಧಿಸಬಹುದಾಗಿದೆ. ಹೀಗಾಗಿ ಯಾರು ಸಹ ಪ್ರಕರಣದಲ್ಲಿ ಶಾಮೀಲಾದವರ ಜೊತೆ ತಿರುಗಾಡಬೇಡಿ ಎಂದು ಪೊಲೀಸ್ ಕಮೀಷನರ್ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಅಂಥವರ ಜತೆ ಸೇರಿಕೊಂಡರೆ ಜೈಲಿಗೆ ಹೋಗಬೇಕಾಗಲಿದೆ. ಮಾತ್ರವಲ್ಲದೇ ಅಷ್ಟು ಸುಲಭವಾಗಿ ಜಾಮೀನು ಪಡೆದು ಹೊರಗೆ ಬರುವುದೂ ಸಾಧ್ಯವಿಲ್ಲ.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ಮಂಗಳೂರಿನ ರಸ್ತೆಗಳಲ್ಲಿ ಗುಂಡಿಗಳದ್ದೇ ದರ್ಬಾರ್​: ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಿಡಿಶಾಪ‌

ಈ ಕಾಯ್ದೆಯಲ್ಲಿ ಕಡ್ಡಾಯವಾಗಿ ಡಿಎಸ್‌ಪಿ ಶ್ರೇಣಿಯ ಅಧಿಕಾರಿ ಪ್ರಕರಣದ ತನಿಖೆ ನಡೆಸಬೇಕು ಎಂಬ ನಿಯಮವಿದ್ದು, ಸದ್ಯ ಈ ನಾಲ್ವರು ಆರೋಪಿಗಳ ವಿರುದ್ದ ದಾಖಲಾಗಿರುವ ಪ್ರಕರಣಕ್ಕೆ ತನಿಖಾಧಿಕಾರಿಯಾಗಿ ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ರನ್ನು ನೇಮಿಸಲಾಗಿದೆ. ಒಟ್ಟಿನಲ್ಲಿ ಮಂಗಳೂರು ಪೊಲೀಸರು ಕೈಗೊಳ್ಳುತ್ತಿರುವ ಕಠಿಣ ಕ್ರಮಗಳಿಗೆ ಕ್ರಿಮಿನಲ್ಸ್ ಫುಲ್ ಥಂಡಾ ಹೊಡೆದಿರುವುದಂತೂ ಸುಳ್ಳಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ