AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಸಾಂತ್ವನ

ಕುಟುಂಬ ಸದಸ್ಯರನ್ನು ಸಂತೈಸುವ ವೇಳೆ, ‘ಆರೋಪಿಗಳು ಜೈಲಿನಲ್ಲಿ ಆರಾಮವಾಗಿದ್ದಾರೆ’ ಎಂದುಬಿಟ್ಟರು. ಈ ಹೇಳಿಕೆಯು ಪ್ರವೀಣ್ ಕುಟುಂಬ ಸದಸ್ಯರನ್ನು ಕೆರಳಿಸಿತು.

ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಸಾಂತ್ವನ
ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on:Aug 01, 2022 | 1:10 PM

Share

ಮಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಸೋಮವಾರ ಸುಳ್ಯ ತಾಲ್ಲೂಕು ಬೆಳ್ಳಾರೆಯಲ್ಲಿರುವ ಮೃತ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ‘ಕರ್ನಾಟಕದ ಜನರು ಈ ಬಾರಿ ನನಗೆ ಅವಕಾಶ ಕೊಟ್ಟರೆ ಯಾವುದೇ ಸಮಾಜದವರ ಸಾವುನೋವು ಆಗದ ರೀತಿಯಲ್ಲಿ ಮಾಡುತ್ತೇನೆ. ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಹುಡುಕುತ್ತೇನೆ. ದಕ್ಷಿಣ ಕನ್ನಡದಲ್ಲಿ ತಪ್ಪು ಆಗದ ರೀತಿಯಲ್ಲಿ ಮಾಡುತ್ತೇನೆ. ಈ ಭಾಗದಲ್ಲಿ ಶಾಂತಿ ನೆಲೆಸಲು ಕೆಲಸ ಮಾಡುತ್ತೇನೆ’ ಎಂದು ಪ್ರವೀಣ್ ಪತ್ನಿ ನೂತನ ಅವರಿಗೆ ಭರವಸೆ ನೀಡಿದರು

ಪ್ರವೀಣ್​ ನೆಟ್ಟಾರು ಕುಟುಂಬ ಸದಸ್ಯರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವೀಣ್​ ಹಂತಕರಿಗೆ ಶಿಕ್ಷೆ ವಿಧಿಸಬೇಕು ಎಂಬುದು ಕುಟುಂಬ ಸದಸ್ಯರ ಆಗ್ರಹವಾಗಿದೆ. ಈ ಅಂಶವನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಕಾಟಾಚಾರಕ್ಕೆ ತನಿಖೆ ಮಾಡುವುದು ಬೇಡ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮೃತ ಪ್ರವೀಣ್ ಕುಟುಂಬಕ್ಕೆ ನಮ್ಮ ಪಕ್ಷದಿಂದ ₹ 5 ಲಕ್ಷ ಪರಿಹಾರ ನೀಡಿದ್ದೇವೆ. ಏನೇ ಸಮಸ್ಯೆ ಬಂದರೂ ನನ್ನ ಗಮನಕ್ಕೆ ತರಲು ಹೇಳಿದ್ದೇನೆ. ಸರ್ಕಾರ ಕಾಟಾಚಾರಕ್ಕೆ ಎನ್​ಐಎ ತನಿಖೆಗೆ ವಹಿಸಿದೆ. ಇವರು ತಮ್ಮ ಜವಾಬ್ದಾರಿ ಕಳೆದುಕೊಳ್ಳಲು ರಾಷ್ಟ್ರೀಯ ತನಿಖಾ ದಳಕ್ಕೆ ತನಿಖೆಯ ಜವಾಬ್ದಾರಿ ವಹಿಸಿದ್ದಾರೆ ಎಂದರು.

ಮಸೂದ್ ನಿವಾಸಕ್ಕೆ ಭೇಟಿ

ಸುಳ್ಯ ತಾಲ್ಲೂಕು ಕಳಂಜೆಯಲ್ಲಿರುವ ಮಸೂದ್ ನಿವಾಸಕ್ಕೂ ಎಚ್​ಡಿಕೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳ ಬೇಜವಾಬ್ದಾರಿತನ ಇಲ್ಲಿ ಕಾಣುತ್ತಿದೆ. ಪ್ರವೀಣ್ ‌ಮನೆಗೆ ಬಂದಿದ್ದವರು ಮಸೂದ್ ಮನೆಗೆ ಬರಲಿಲ್ಲ. ಮಸೂದ್ ಹತ್ಯೆ ಹಿನ್ನೆಲೆಯಲ್ಲೂ ವಿಚಿತ್ರ ಸನ್ನಿವೇಶ ಇದೆ. ಮಸೂದ್ ಸಾವಿಗೆ ಕಾರಣವನ್ನು ಗಮನಕ್ಕೆ ತಂದಿದ್ದಾರೆ. ಮಸೂದ್​ಗೆ ಯಾವುದೇ ಸಂಘಟನೆ, ಪಕ್ಷಗಳ ಸಂಪರ್ಕವಿರಲಿಲ್ಲ. ಹಿಂದೂ ಸಮಾಜದವರೇ ಆತನ ಹತ್ಯೆಗೆ ಸ್ಕೆಚ್ ಹಾಕಿದ್ದರು. ಇದನ್ನು ಪೊಲೀಸರ ಗಮನಕ್ಕೆ ತಂದು, ತನಿಖೆಗೆ ಒತ್ತಾಯಿಸುತ್ತೇನೆ ಎಂದರು.

ಇದು ಶಿಕ್ಷಣಕಾಶಿಯೇ ಆಗಿ ಉಳಿಯಲಿ

ದಕ್ಷಿಣ ಕನ್ನಡವನ್ನು ಕರ್ನಾಟಕದ ಶಿಕ್ಷಣ ಕಾಶಿ ಎನ್ನುತ್ತಾರೆ. ಇದು ಹೀಗೆಯೇ ಉಳಿಯಬೇಕು. ಹಿಂಸೆಯ ನೆರಳು ಬದಿಗೆ ಸರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದರು. ಇಲ್ಲಿನ ವಾತಾವರಣ ಕದಡಲು ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆಯೇ ಮುಖ್ಯ ಕಾರಣ. ದೇಶದ ವಿವಿಧ ಮೂಲೆಯಿಂದ ಇಲ್ಲಿ ದೇವರ ದರ್ಶನ ಪಡೆಯಲು ಆಗಮಿಸುತ್ತಾರೆ. ಆದರೆ ಇಲ್ಲಿ ಸರಣಿ ಹತ್ಯೆಗಳು ನೆಡೆಯುತ್ತಿದ್ದು ನಾವು ತಲೆತಗ್ಗಿಸುವಂತೆ ಆಗಿದೆ ಎಂದು ವಿಷಾದಿಸಿದರು.

ಎರಡು ರಾಷ್ಟ್ರೀಯ ಪಕ್ಷಗಳು ಅವರ ಸ್ವಾರ್ಥದ ರಾಜಕಾರಣಕ್ಕೆ ಜಿಲ್ಲೆಯ ಶಾಂತಿಯನ್ನು ಬಲಿ ಕೊಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಷ್ಟೆಲ್ಲಾ ಪ್ರಕರಣ ನಡೆದಿವೆ. ಬಿಜೆಪಿ ಅಥವಾ ಕಾಂಗ್ರೆಸ್​ನ ಮಂತ್ರಿಗಳ ಮಕ್ಕಳು ಅಥವಾ ಶಾಸಕರ ಮಕ್ಕಳು ಬಲಿಯಾಗಿದ್ದಾರಾ? ಪ್ರಮುಖ ನಾಯಕರ ಮಕ್ಕಳು ಬಲಿಯಾಗಿದ್ದಾರಾ ಎಂದು ಪ್ರಶ್ನಿಸಿದರು.

ಸತ್ತಿರುವವರೆಲ್ಲರೂ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಬಡ ಕುಟುಂಬದ ಮಕ್ಕಳೇ ಆಗಿದ್ದಾರೆ. ಕಳೆದ 15 ವರ್ಷಗಳಿಂದ ರಾಜಕೀಯ ಮುಖಂಡರು ತಮ್ಮ ಶಕ್ತಿಯನ್ನ ಬೆಳೆಸಿಕೊಳ್ಳಲು ಇಂಥ ವಾತಾವರಣ ಸೃಷ್ಟಿ ಮಾಡಿದ್ದಾರೆ. ಇದು ಇಲ್ಲಿಗೆ ಕೊನೆಯಾಗಬೇಕು ಎಂದು ಎಲ್ಲರಿಗೂ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ಇಷ್ಟು ಸಣ್ಣತನದಲ್ಲಿ ವರ್ತನೆ ಮಾಡಬಾರದಿತ್ತು. ಆರುವರೆ ಕೋಟಿ ಜನರ ರಕ್ಷಣೆ ಮಾಡುವ ಹೊಣೆ ರಾಜ್ಯ ಸರ್ಕಾರದ ಮೇಲಿದೆ. ಒಂದು ಕುಟುಂಬಕ್ಕೆ ಸಾಂತ್ವನ ಹೇಳಿ ಇನ್ನೊಂದು ಕುಟುಂಬಕ್ಕೆ ಸಾಂತ್ವನ ಹೇಳದೆ ಹೋಗೋದು ಯಾವ ಸಂದೇಶ ಕೊಡುತ್ತದೆ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಕರ್ನಾಟಕದಲ್ಲಿ ಶಾಂತಿ ನೆಲೆಸುವ ಅವಶ್ಯಕತೆ ಇಲ್ಲ. ಇದೇ ರೀತಿಯ ವಾತಾವರಣ ಮುಂದುವರಿದರೆ ಸರ್ಕಾರಕ್ಕೂ, ಪಕ್ಷಕ್ಕೂ ಅನುಕೂಲ ಎಂದು ಮುಖ್ಯಮಂತ್ರಿ ಯೋಚಿಸುತ್ತಿರುವಂತಿದೆ ಎಂದರು.

Published On - 12:16 pm, Mon, 1 August 22

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ