AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಜಿಲ್​ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ; ಎಡಿಜಿಪಿ ಅಲೋಕ್​ ಕುಮಾರ್​

ಹತ್ಯೆ ವಿಚಾರವಾಗಿ ಸಿಎಂ ಬೊಮ್ಮಾಯಿ ಹಿರಿಯ ಪೊಲೀಸ್​ ಅಧಿಕಾರಿಗಳ ಸಭೆ ಕರೆದಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಸಂಬಂಧ ಚರ್ಚೆ ಮಾಡಲಿದ್ದಾರೆ.

ಫಾಜಿಲ್​ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ; ಎಡಿಜಿಪಿ ಅಲೋಕ್​ ಕುಮಾರ್​
ಮೃತ ಫಾಜಿಲ್, ಎಡಿಜಿಪಿ ಅಲೋಕ್​ ಕುಮಾರ್
TV9 Web
| Edited By: |

Updated on:Jul 29, 2022 | 12:29 PM

Share

ಮಂಗಳೂರು: ಫಾಜಿಲ್​ ಕೊಲೆ (Fazil murder) ಆರೋಪಿಗಳನ್ನ ಶೀಘ್ರವೇ ಬಂಧಿಸುತ್ತೇವೆ ಎಂದು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್​ ಕುಮಾರ್​ ಹೇಳಿಕೆ ನೀಡಿದರು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದೆ. ಇಂದು ಸಂಜೆಯಿಂದ ವಿಶೇಷ ಕಾರ್ಯಾಚರಣೆ ಮಾಡುತ್ತೇವೆ. ಯಾರು ಕೂಡ ವದಂತಿಗಳಿಗೆ ಕಿವಿ ಕೊಡಬಾರದು. ಫಾಜಿಲ್​ ಮನೆಯವರು ಹತ್ಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು. ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಸಿಸಿಟಿವಿ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ಮಾಡ್ತಿದ್ದೇವೆ. ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳಬಾರದು. ಈಗಿರುವ ಪೊಲೀಸ್​ ಬಂದೋಬಸ್ತ್​​ ಮುಂದುವರಿಸುತ್ತೇವೆ. ಗಡಿಭಾಗದಲ್ಲಿ ವಾಹನಗಳನ್ನ ಚೆಕ್​ ಮಾಡಲಾಗುತ್ತದೆ. ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಡಿಜಿಪಿ ಅಲೋಕ್​ ಕುಮಾರ್​ ಹೇಳಿದರು.

ಇದನ್ನೂ ಓದಿ: Suratkal Murder: ಫಾಜಿಲ್ ಅಂತ್ಯಸಂಸ್ಕಾರಕ್ಕೆ ಕುಟುಂಬ ಸದಸ್ಯರ ಸಿದ್ಧತೆ, 12 ಮಂದಿ ಪೊಲೀಸರ ವಶಕ್ಕೆ

ನಿಷೇಧಾಜ್ಞೆ ಉಲ್ಲಂಘಿಸಿದ 14 ಜನ ವಶಕ್ಕೆ

ಫಾಜಿಲ್​ ಹತ್ಯೆ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಎನ್​.ಶಶಿಕುಮಾರ್ ಹೇಳಿಕೆ ನೀಡಿದ್ದು, ಫಾಜಿಲ್​ ಹತ್ಯೆಯ ನಂತರ ಅನುಮಾನಾಸ್ಪದವಾಗಿ ಕಂಡುಬಂದ 12 ಜನರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ನಿಷೇಧಾಜ್ಞೆ ಉಲ್ಲಂಘಿಸಿದ 14 ಜನರನ್ನು ವಶಕ್ಕೆ ಪಡೆದಿದ್ದೇವೆ. ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕೆಲವರನ್ನ ವಶಕ್ಕೆ ಪಡೆದಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ. ಸುರತ್ಕಲ್​​ನ ಗಣೇಶಪುರದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ; Suratkal Murder: ಫಾಜಿಲ್ ಹತ್ಯೆ ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯವೆಂದ ಸಿಎಂ ಬಸವರಾಜ ಬೊಮ್ಮಾಯಿ

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಿಎಂ

ಹತ್ಯೆ ವಿಚಾರವಾಗಿ ಸಿಎಂ ಬೊಮ್ಮಾಯಿ ಹಿರಿಯ ಪೊಲೀಸ್​ ಅಧಿಕಾರಿಗಳ ಸಭೆ ಕರೆದಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಸಂಬಂಧ ಚರ್ಚೆ ಮಾಡಲಿದ್ದಾರೆ. ಕೇರಳ ಭಾಗದ 55 ರಸ್ತೆಗಳಲ್ಲಿ ನಾಕಾ ಬಂದಿ ಹಾಕಿ ಖಡಕ್ ತಪಾಸಣೆ ಮಾಡಲಾಗುವುದು.

Published On - 12:28 pm, Fri, 29 July 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ