AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಜಿಲ್​ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ; ಎಡಿಜಿಪಿ ಅಲೋಕ್​ ಕುಮಾರ್​

ಹತ್ಯೆ ವಿಚಾರವಾಗಿ ಸಿಎಂ ಬೊಮ್ಮಾಯಿ ಹಿರಿಯ ಪೊಲೀಸ್​ ಅಧಿಕಾರಿಗಳ ಸಭೆ ಕರೆದಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಸಂಬಂಧ ಚರ್ಚೆ ಮಾಡಲಿದ್ದಾರೆ.

ಫಾಜಿಲ್​ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ; ಎಡಿಜಿಪಿ ಅಲೋಕ್​ ಕುಮಾರ್​
ಮೃತ ಫಾಜಿಲ್, ಎಡಿಜಿಪಿ ಅಲೋಕ್​ ಕುಮಾರ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 29, 2022 | 12:29 PM

Share

ಮಂಗಳೂರು: ಫಾಜಿಲ್​ ಕೊಲೆ (Fazil murder) ಆರೋಪಿಗಳನ್ನ ಶೀಘ್ರವೇ ಬಂಧಿಸುತ್ತೇವೆ ಎಂದು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್​ ಕುಮಾರ್​ ಹೇಳಿಕೆ ನೀಡಿದರು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದೆ. ಇಂದು ಸಂಜೆಯಿಂದ ವಿಶೇಷ ಕಾರ್ಯಾಚರಣೆ ಮಾಡುತ್ತೇವೆ. ಯಾರು ಕೂಡ ವದಂತಿಗಳಿಗೆ ಕಿವಿ ಕೊಡಬಾರದು. ಫಾಜಿಲ್​ ಮನೆಯವರು ಹತ್ಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು. ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಸಿಸಿಟಿವಿ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ಮಾಡ್ತಿದ್ದೇವೆ. ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳಬಾರದು. ಈಗಿರುವ ಪೊಲೀಸ್​ ಬಂದೋಬಸ್ತ್​​ ಮುಂದುವರಿಸುತ್ತೇವೆ. ಗಡಿಭಾಗದಲ್ಲಿ ವಾಹನಗಳನ್ನ ಚೆಕ್​ ಮಾಡಲಾಗುತ್ತದೆ. ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಡಿಜಿಪಿ ಅಲೋಕ್​ ಕುಮಾರ್​ ಹೇಳಿದರು.

ಇದನ್ನೂ ಓದಿ: Suratkal Murder: ಫಾಜಿಲ್ ಅಂತ್ಯಸಂಸ್ಕಾರಕ್ಕೆ ಕುಟುಂಬ ಸದಸ್ಯರ ಸಿದ್ಧತೆ, 12 ಮಂದಿ ಪೊಲೀಸರ ವಶಕ್ಕೆ

ನಿಷೇಧಾಜ್ಞೆ ಉಲ್ಲಂಘಿಸಿದ 14 ಜನ ವಶಕ್ಕೆ

ಫಾಜಿಲ್​ ಹತ್ಯೆ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಎನ್​.ಶಶಿಕುಮಾರ್ ಹೇಳಿಕೆ ನೀಡಿದ್ದು, ಫಾಜಿಲ್​ ಹತ್ಯೆಯ ನಂತರ ಅನುಮಾನಾಸ್ಪದವಾಗಿ ಕಂಡುಬಂದ 12 ಜನರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ನಿಷೇಧಾಜ್ಞೆ ಉಲ್ಲಂಘಿಸಿದ 14 ಜನರನ್ನು ವಶಕ್ಕೆ ಪಡೆದಿದ್ದೇವೆ. ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕೆಲವರನ್ನ ವಶಕ್ಕೆ ಪಡೆದಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ. ಸುರತ್ಕಲ್​​ನ ಗಣೇಶಪುರದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ; Suratkal Murder: ಫಾಜಿಲ್ ಹತ್ಯೆ ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯವೆಂದ ಸಿಎಂ ಬಸವರಾಜ ಬೊಮ್ಮಾಯಿ

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಿಎಂ

ಹತ್ಯೆ ವಿಚಾರವಾಗಿ ಸಿಎಂ ಬೊಮ್ಮಾಯಿ ಹಿರಿಯ ಪೊಲೀಸ್​ ಅಧಿಕಾರಿಗಳ ಸಭೆ ಕರೆದಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಸಂಬಂಧ ಚರ್ಚೆ ಮಾಡಲಿದ್ದಾರೆ. ಕೇರಳ ಭಾಗದ 55 ರಸ್ತೆಗಳಲ್ಲಿ ನಾಕಾ ಬಂದಿ ಹಾಕಿ ಖಡಕ್ ತಪಾಸಣೆ ಮಾಡಲಾಗುವುದು.

Published On - 12:28 pm, Fri, 29 July 22