AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಜಿಲ್​ ಹತ್ಯೆ ಪ್ರಕರಣ: ಶೀಘ್ರದಲ್ಲೇ ಕೊಲೆ ಆರೋಪಿಗಳನ್ನು ಬಂಧಿಸಲಾಗುವುದು; ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್

ಫಾಜಿಲ್​ ಹತ್ಯೆ ಪ್ರಕರಣ ಹಿನ್ನೆಲೆ ಕರಾವಳಿ ಕೋಮು ಕಿಚ್ಚಿಗೆ ಯುವಕ ಫಾಜಿಲ್ ಬಲಿಯಾದ್ನಾ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ.

ಫಾಜಿಲ್​ ಹತ್ಯೆ ಪ್ರಕರಣ: ಶೀಘ್ರದಲ್ಲೇ ಕೊಲೆ ಆರೋಪಿಗಳನ್ನು ಬಂಧಿಸಲಾಗುವುದು; ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್
ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 30, 2022 | 10:15 AM

Share

ಮಂಗಳೂರು: ನಿಷೇಧಾಜ್ಞೆ ಜಾರಿಯಲ್ಲಿದೆ. ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ. ಶೀಘ್ರದಲ್ಲೇ ಕೊಲೆ ಆರೋಪಿಗಳನ್ನು ಬಂಧಿಸಲಾಗುವುದು. ಸೂಕ್ಷ್ಮ ಪರಿಸ್ಥಿತಿ ಹಿನ್ನೆಲೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿಕೆ ನೀಡಿದರು. ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದೆ. ಕಮಿಷನರೇಟ್ ವ್ಯಾಪ್ತಿಯಲ್ಲಿ 19 ಚೆಕ್​ಪೋಸ್ಟ್ ಸ್ಥಾಪನೆ ಮಾಡಿದ್ದು, ಪ್ರತಿ ಚೆಕ್​ಪೋಸ್ಟ್​​ನಲ್ಲಿ 7 ರಿಂದ 8 ಸಿಬ್ಬಂದಿ ಇರಲಿದ್ದಾರೆ. ಚೆಕ್​ಪೋಸ್ಟ್​ನಲ್ಲಿ ಸಿಬ್ಬಂದಿ 24×7 ಕಾರ್ಯನಿರ್ವಹಿಸುತ್ತಾರೆ. ಭಯದ ವಾತಾವರಣ ಹೋಗಲಾಡಿಸಲು ರೂಟ್ ಮಾರ್ಚ್ ಮಾಡಲಾಗಿದೆ. ಸಾರ್ವಜನಿಕರು ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ತನಿಖೆ ಒಳ್ಳೆ ರೀತಿಯಲ್ಲಿ ಹೋಗುತ್ತಿದೆ ಆರೋಪಿಗಳು ಆದಷ್ಟು ಬೇಗ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಇದನ್ನೂ ಓದಿ; ಪ್ರವೀಣ್ ಹತ್ಯೆ ಪ್ರಕರಣ: ಸರ್ಕಾರದ ಒತ್ತಡಕ್ಕೆ ಮಣಿದು ಇಬ್ಬರನ್ನು ಬಂಧಿಸಿದ ಪೊಲೀಸರು? ಪೊಲೀಸರ ನಡೆ ಮೇಲೆ‌ ಬೆಟ್ಟದಷ್ಟು ಅನುಮಾನ

ಫಾಜಿಲ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ 21 ಶಂಕಿತರು ವಶಕ್ಕೆ

ಇನ್ನೂ ಫಾಜಿಲ್​ ಹತ್ಯೆ ಪ್ರಕರಣ ಹಿನ್ನೆಲೆ ಕರಾವಳಿ ಕೋಮು ಕಿಚ್ಚಿಗೆ ಯುವಕ ಫಾಜಿಲ್ ಬಲಿಯಾದ್ನಾ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಫಾಜಿಲ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಫಾಜಿಲ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ 21 ಶಂಕಿತರನ್ನ ನಿನ್ನೆ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ 21 ಶಂಕಿತರ ಪೈಕಿ ಹತ್ಯೆಯಲ್ಲಿ 6 ಜನರ ಪಾತ್ರ ಇರುವುದು ದೃಢಪಟ್ಟಿರುವ ಹಿನ್ನೆಲೆ ಬಂಧಿಸಲು ಮಂಗಳೂರು ಪೊಲೀಸರ ಸಿದ್ಧತೆ ನಡೆಸಿದ್ದು, ಈ ಕುರಿತು ಸಂಜೆಯೊಳಗೆ ಪೊಲೀಸರು ದೃಢಪಡಿಸಲಿದ್ದಾರೆ.

ನಿಷೇಧಾಜ್ಞೆ ಉಲ್ಲಂಘಿಸಿದ 14 ಜನ ವಶಕ್ಕೆ

ಫಾಜಿಲ್​ ಹತ್ಯೆ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಎನ್​.ಶಶಿಕುಮಾರ್ ಹೇಳಿಕೆ ನೀಡಿದ್ದು, ಫಾಜಿಲ್​ ಹತ್ಯೆಯ ನಂತರ ಅನುಮಾನಾಸ್ಪದವಾಗಿ ಕಂಡುಬಂದ 12 ಜನರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ನಿಷೇಧಾಜ್ಞೆ ಉಲ್ಲಂಘಿಸಿದ 14 ಜನರನ್ನು ವಶಕ್ಕೆ ಪಡೆದಿದ್ದೇವೆ. ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕೆಲವರನ್ನ ವಶಕ್ಕೆ ಪಡೆದಿದ್ದೇವೆ. ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ. ಸುರತ್ಕಲ್​​ನ ಗಣೇಶಪುರದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ ಎಂದು ಹೇಳಿದರು.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ