AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕ ಫಾಜಿಲ್ ಹತ್ಯೆ ಪ್ರಕರಣ: ಪತ್ತೆಯಾಗಿದ್ದ ಕಾರು ಸ್ಥಳಾಂತರ; ಎಫ್​​​ಎಸ್​ಎಲ್​​​​ ತಜ್ಞರಿಂದ ಇಂದು ಕಾರು ತಪಾಸಣೆ

ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸ್ಫೋಟಕ ಸುಳಿವು ಸಿಕ್ಕಿದ್ದು, ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಸುಹಾಸ್, ಮೋಹನ್, ಗಿರಿ, ಅಮಿತ್ ಎಂಬ ನಾಲ್ವರಿಂದ ಕೃತ್ಯ ನಡೆದಿದೆ ಎನ್ನಲಾಗಿದೆ.

ಯುವಕ ಫಾಜಿಲ್ ಹತ್ಯೆ ಪ್ರಕರಣ: ಪತ್ತೆಯಾಗಿದ್ದ ಕಾರು ಸ್ಥಳಾಂತರ; ಎಫ್​​​ಎಸ್​ಎಲ್​​​​ ತಜ್ಞರಿಂದ ಇಂದು ಕಾರು ತಪಾಸಣೆ
ಪತ್ತೆಯಾಗಿದ್ದ ಕಾರು ಸ್ಥಳಾಂತರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 01, 2022 | 8:54 AM

Share

ಮಂಗಳೂರು: ಸುರತ್ಕಲ್​ನಲ್ಲಿ ಯುವಕ ಫಾಜಿಲ್ (Fazil) ಹತ್ಯೆ ಪ್ರಕರಣ ಸಂಬಂಧ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂಜರಕಟ್ಟೆ ಕಡಕುಂಜ ಬಳಿ ಪತ್ತೆಯಾಗಿದ್ದ ಕಾರು ಸ್ಥಳಾಂತರ ಮಾಡಲಾಗಿದೆ. ಫಾಜಿಲ್​ ಹಂತಕರ ಬಗ್ಗೆ ಸುಳಿವು ಹೊಂದಿರುವ ಇಯಾನ್​ ಕಾರು, 2 ದಿನಗಳಿಂದ ನಿರ್ಜನ ಪ್ರದೇಶದಲ್ಲಿ ಅನಾಥವಾಗಿ ನಿಂತಿತ್ತು. ಸುರತ್ಕಲ್​ ಠಾಣೆ ಪೊಲೀಸರಿಂದ ಪಂಚನಾಮೆ ನಂತರ ಟೋಯಿಂಗ್​ ವಾಹನದ ಮೂಲಕ ಪೊಲೀಸರು ಕಾರನ್ನು ಸ್ಥಳಾಂತರಿಸಿದ್ದಾರೆ. ಎಫ್​​​ಎಸ್​ಎಲ್​​ (FSL) ತಜ್ಞರನ್ನು ಠಾಣೆಗೆ ಕರೆಸಿ ಪೊಲೀಸರು ಪರಿಶೀಲನೆ ನಡೆಸಲಿದ್ದು, ತಜ್ಞರು ಸ್ಟೇರಿಂಗ್, ಹ್ಯಾಂಡ್​ಬ್ರೇಕ್​ ಮೇಲಿನ ಬೆರಳಚ್ಚು ಪತ್ತೆಹಚ್ಚಲಿದ್ದಾರೆ. ಇಯಾನ್​ ಕಾರಿನ ಡಿಕ್ಕಿಯಲ್ಲಿ ಮಾರಕಾಸ್ತ್ರಗಳು ಇರುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಫಾಜಿಲ್​ ಹತ್ಯೆ ಕೇಸ್​ನಲ್ಲಿ ಮಹತ್ವ  FSL ವರದಿ ಪ್ರಮುಖ ಪಾತ್ರ ವಹಿಸಲಿದೆ.

ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಲಭ್ಯ

ಇನ್ನೂ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸ್ಫೋಟಕ ಸುಳಿವು ಸಿಕ್ಕಿದ್ದು, ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಸುಹಾಸ್, ಮೋಹನ್, ಗಿರಿ, ಅಮಿತ್ ಎಂಬ ನಾಲ್ವರಿಂದ ಕೃತ್ಯ ನಡೆದಿರುವುದಾಗಿ ಮಂಗಳೂರು ಪೊಲೀಸರಿಗೆ ಸುಳಿವು ಲಭ್ಯವಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಎಂಬುದಾಗಿ ಮಾಹಿತಿ ಸಿಕ್ಕಿದೆ. ಕೃತ್ಯ ನಡೆಸುವ ಸಂದರ್ಭ ಅಮಿತ್ ಎಂಬಾತ ಕಾರು ಚಾಲಕನಾಗಿದ್ದ.

ಇದೇ ನಾಲ್ವರ ಆರೋಪಿಗಳು ಕೊಲೆಯ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಹಾಸ್ ಮೇಲಿದೆ ಎಕ್ಕಾರಿನಲ್ಲಿ ನಡೆದ ಕೊಲೆ ಹಾಗೂ ಎರಡು ಕೊಲೆ ಯತ್ನದ ಕೇಸ್ ಇದೆ. ಸದ್ಯ ಈ ನಾಲ್ವರಿಂದಲೇ ಫಾಝಿಲ್ ಹತ್ಯೆ ನಡೆದಿರುವ ಶಂಕೆ ಉಂಟಾಗಿದೆ.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು