AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಹೊಸ ವರ್ಷದ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ; ಯುವಕನ ಮೂಗು ಕಚ್ಚಿ ತೆಗೆದ ವ್ಯಕ್ತಿ

ಪ್ರತಿ ವರ್ಷ ಹೊಸ ವರ್ಷಾಚರಣೆ ವೇಳೆ ಕುಡಿದ ಮತ್ತಿನಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಕಿತ್ತಾಟಗಳು, ಜಗಳಗಳು ನಡೆಯುತ್ತವೆ. ಈ ಬಾರಿ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದರೆ, ಮಂಗಳೂರಿನಲ್ಲಿ ನಡೆದ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಜಗಳ ನಡೆದು ಯುವಕನೊಬ್ಬನ ಮೂಗನ್ನೇ ಕಚ್ಚಿ ಕಿತ್ತು ಹಾಕಿದ ಘಟನೆ ನಡೆದಿದೆ.

ಮಂಗಳೂರು: ಹೊಸ ವರ್ಷದ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ; ಯುವಕನ ಮೂಗು ಕಚ್ಚಿ ತೆಗೆದ ವ್ಯಕ್ತಿ
ಮಂಗಳೂರಿನಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ; ಯುವಕನ ಮೂಗು ಕಚ್ಚಿ ತೆಗೆದ ವ್ಯಕ್ತಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: Rakesh Nayak Manchi|

Updated on: Jan 01, 2024 | 7:02 PM

Share

ಮಂಗಳೂರು, ಜ.1: ಪ್ರತಿ ವರ್ಷ ಹೊಸ ವರ್ಷಾಚರಣೆ (New Year Celebration) ವೇಳೆ ಕುಡಿದ ಮತ್ತಿನಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯುತ್ತವೆ. ಬೆಂಗಳೂರಿನಲ್ಲಂತೂ ಹಲ್ಲೆ, ಜಗಳ ಸಾಮಾನ್ಯವಾಗಿದೆ. ನಿನ್ನೆ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದರೆ, ಮಂಗಳೂರಿನಲ್ಲಿ (Mangaluru) ಕ್ಷುಲ್ಲಕ ಕಾರಣಕ್ಕೆ ಇಬ್ಬರ ಜಗಳ ನಡೆದು ಯುವಕನೊಬ್ಬನ ಮೂಗನ್ನೇ ಕಚ್ಚಿ ಕಿತ್ತು ಹಾಕಿದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ಪಾರ್ಟಿ ನಡೆಸಲಾಗುತ್ತಿತ್ತು. ಈ ವೇಳೆ ಕುಡಿದ ಮತ್ತಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ರಾಕೇಶ್ ಮತ್ತು ಉಲ್ಪೆ ಗ್ರಾಮದ ನಿವಾಸಿ ದೀಕ್ಷಿತ್ (28) ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ.

ಇದನ್ನೂ ಓದಿ: ಬೆಂಗಳೂರು: ಹೊಸವರ್ಷಾಚರಣೆ ನಡುವೆ ಕೆಲವೆಡೆ ಅವಾಂತರ, ಅಸಭ್ಯ ವರ್ತನೆ ತೋರಿದ ಯುವಕನ ಕೆನ್ನೆಗೆ ಬಾರಿಸಿದ ಪೊಲೀಸ್

ಇಬ್ಬರ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದಾಗ ರಾಕೇಶ್ ದೀಕ್ಷಿತ್​ನ ಮೂಗನ್ನು ಕಚ್ಚಿ ಅರ್ಧ ಭಾಗವನ್ನೇ ಕಿತ್ತು ಹಾಕಿದ್ದಾನೆ. ಗಾಯಾಳು ದೀಕ್ಷಿತ್​ನನ್ನು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More