AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್​​ ಶೆಟ್ಟಿ ತಿಮರೋಡಿ ವಿರುದ್ಧ FIR

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಕ್ಷಗಾನ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪದಡಿ FIR ದಾಖಲಾಗಿದೆ. 'ಬುರುಡೆ ಗ್ಯಾಂಗ್' ಹೆಸರಿನ ಯಕ್ಷಗಾನ ಪ್ರಸಂಗ ತಮ್ಮ ಹೋರಾಟವನ್ನು ಹಾಸ್ಯ ಮಾಡುತ್ತಿದೆ ಎಂದು ತಿಮರೋಡಿ ಕಲಾವಿದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಪುತ್ತೂರು ಮಹಿಳಾ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್​​ ಶೆಟ್ಟಿ ತಿಮರೋಡಿ ವಿರುದ್ಧ FIR
ಮಹೇಶ್​​ ಶೆಟ್ಟಿ ತಿಮರೋಡಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Apr 16, 2026 | 1:12 PM

Share

ಮಂಗಳೂರು, ಏಪ್ರಿಲ್​​ 16: ಧರ್ಮಸ್ಥಳದಲ್ಲಿ ನೂರಾರು ಅಪರಿಚಿತ ಹೆಣ ಹೂಳಲಾಗಿದೆ ಎಂಬ ಆರೋಪ ಪ್ರಕರಣದ ಪ್ರಮುಖ ರೂವಾರಿಗಳಲ್ಲೊಬ್ಬರಾಗಿದ್ದ ಮಹೇಶ್​​ ಶೆಟ್ಟಿ ತಿಮರೋಡಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ಸಂಬಂಧ ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬೆದರಿಕೆ ಹಾಕಿರುವ ಆರೋಪ ತಿಮರೋಡಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಪುತ್ತೂರು ಮಹಿಳಾ ಠಾಣೆ ಮತ್ತು ಗ್ರಾಮಾಂತ್ರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಧರ್ಮಸ್ಥಳ ಪ್ರಕರಣವನ್ನೇ ಹೋಲುವು ಕಥೆ ಹೊಂದಿರುವ ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ನಿರ್ಮಾಣ ಮಾಡಲಾಗಿತ್ತು.ಇದರಿಂದ ರೊಚ್ಚಿಗೆದ್ದ ಮಹೇಶ್​​ ಶೆಟ್ಟಿ ತಿಮರೋಡಿ ಏಪ್ರಿಲ್​​ 11ರಂದು ಯಕ್ಷಗಾನ ಹಾಸ್ಯ ಕಲಾವಿಧ ಪ್ರಜ್ವಲ್ ಗುರುನಾಯನಕೆರೆಗೆ ಕರೆ ಮಾಡಿದ್ದರು. ಈ ವೇಳೆ ಕಲಾವಿದ ದಿನೇಶ್ ಶೆಟ್ಟಿಗಾರ್ ಮತ್ತು ಚಿತ್ರನಟ ಮಂದಾರ ಸುಂದರ ರೈ ಅವರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಲ್ಲದೆ, ಅವರ ತಾಯಂದಿರ ಚಾರಿತ್ರ್ಯದ ಬಗ್ಗೆಯೂ ತೀರಾ ಕೆಟ್ಟದಾಗಿ ಮಾತನಾಡಿದ್ದರು. ಆ ಆಡಿಯೋವನ್ನು ದಿನೇಶ್ ಶೆಟ್ಟಿ ಮತ್ತು ಸುಂದರ ರೈಗೆ ಪ್ರಜ್ವಲ್ ಕಳುಹಿಸಿದ್ದು, ಅದನ್ನು ಕೇಳಿ ಕಲಾವಿದರು ತೀವ್ರ ನೊಂದಿದ್ದಾರೆ. ಈ ಹಿನ್ನೆಲೆ ಸುಂದರ ರೈ ನೀಡಿದ ದೂರಿನಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ತಿಮರೋಡಿ ವಿರುದ್ಧ FIR ದಾಖಲಾಗಿದ್ದರೆ, ದಿನೇಶ್ ಶೆಟ್ಟಿಗಾರ್ ತಾಯಿ ಲೀಲಾವತಿ ಶೆಟ್ಟಿಗಾರ್ ದೂರಿನಡಿ ಮಹಿಳಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಕೇಸ್​ ಚಾರ್ಜ್​ಶೀಟ್ ಸಲ್ಲಿಕೆ, ಕೋರ್ಟ್​ಗೆ ಎಸ್ಐಟಿ ಮಹತ್ವದ ಮನವಿ

ಆಡಿಯೋದಲ್ಲಿ ಏನಿದೆ?

ತೀರಾ ಅಂದರೆ ಅತಿ ಕೆಟ್ಟದಾದ ಪದಗಳನ್ನು ಯಕ್ಷಗಾನ ಕಲಾವಿದರ ಬಗ್ಗೆ ಮಹೇಶ್​​ ಶೆಟ್ಟಿ ತಿಮರೋಡಿ ಬಳಸಿರೋದು ಆಡಿಯೋದಲ್ಲಿವೆ. ಒಂದು ಮಗುವಿಗೆ ಅನ್ಯಾಯ ಆಗಿರುವ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಇವರು ಅದನ್ನು ಹಾಸ್ಯ ಮಾಡುತ್ತಾರೆ. ಆ ಬಗ್ಗೆ ಕಥೆ ಬರೆಯುತ್ತಾರೆ. ಯಕ್ಷಗಾನ ಮಾಡಲಿ, ಹೊಟ್ಟೆಪಾಡಿಗೆ ಅದನ್ನು ಮಾಡುವುದು. ಆದರೆ ಈ ಕತೆ ಯಾಕೆ? ಅವರ ಕುಟುಂಬಸ್ಥರ ಕತೆಯನ್ನು ಮಾಡಬಹುದಿತ್ತು ಅಲ್ವಾ?. ಈ ರೀತಿಯದ್ದನ್ನು ಮಾಡುವ ಮೊದಲು ಜಾಗೃತೆ ಇರಬೇಕಿತ್ತು. ಯಕ್ಷಗಾನಕ್ಕೆ ಒಂದು ಮರ್ಯಾದೆ ಇದೆ ಅಲ್ಲವಾ? ಎಂದು ಮಹೆಶ್​​ ಶೆಟ್ಟಿ ತಿಮರೋಡಿ ಪ್ರಶ್ನಿಸಿರೋದನ್ನು ಆಡಿಯೋದಲ್ಲಿ ಕೇಳಬಹುದಾಗಿದೆ. ಜೊತೆಗೆ ಈ ವಿಷಯವನ್ನು ಅವರಿಗೆ ಮುಟ್ಟಿಸು ಎಂದೂ ತಿಮರೋಡಿ ಹೇಳಿರುವ ಮಾತುಗಳನ್ನು ಗಮನಿಸಬಹುದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!