ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಳಶೋತ್ಸವ ಆಹ್ವಾನ ಪತ್ರಿಕೆ ವಿತರಣೆಗೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಹೊರಿಸಲಾಗಿದೆ. ದೂರುದಾರ ಇಬ್ರಾಹಿಂ ಎಸ್.ಬಿ. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಿಎನ್ಎಸ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR
ಶಾಸಕ ಹರೀಶ್​ ಪುಂಜಾ
Edited By: ವಿವೇಕ ಬಿರಾದಾರ

Updated on: May 04, 2025 | 6:21 PM

ಮಂಗಳೂರು, ಮೇ 04: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Punja) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಶನಿವಾರ (ಮೇ.04) ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಳಶೋತ್ಸವ ನಡೆಯಿತು.

“ದೇವಾಲಯದ ಬ್ರಹ್ಮಕಳಶೋತ್ಸವ ಕಾರ್ಯಕ್ರಮದ ಆಹ್ವಾನಪತ್ರಿಕೆಗಳನ್ನು ಮಸೀದಿಗೆ ಹೋಗಿ ಕೊಟ್ಟ ಕಾರಣ ಮುಸ್ಲಿಮರು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಹ್ವಾನಪತ್ರೆಕೆ ಕೊಡಬಾರದಿತ್ತು. ಅವರನ್ನು ಕಾಯರ್ಯಕ್ರಮಕ್ಕೆ ಕರೆಯಬಾರದಿತ್ತು. ನಾವು ಹಿಂದುಗಳು ಹಿಂದೂಗಳೇ ಅವರನ್ನು ಸೇರಿಸಬಾರದು” ಎಂದು ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮುಂದುವರಿದ ಪ್ರತೀಕಾರದ ಎಚ್ಚರಿಗಳು: ಕೊಚ್ಚಿ ಕೊಲ್ಲುವ ಸಂದೇಶಗಳು

ಇದನ್ನೂ ಓದಿ
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನ 3 ಕಡೆ ಚಾಕು ಇರಿತ: 7 ಜನರ ಬಂಧನ
ಸುಹಾಸ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು?
ಸುಹಾಸ್ ಹತ್ಯೆ: ಫಿನೀಶ್, ರಿವೇಂಜ್ ಪೋಸ್ಟ್​​ಗಳ ವಿರುದ್ಧ 12 ಪ್ರಕರಣ ದಾಖಲು
ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಪೊಲೀಸರಿಂದ ವಿಚಾರಣೆ

ಈ ಹಿನ್ನೆಲೆಯಲ್ಲಿ ತಕ್ಕಾರು ಗ್ರಾಮದ ನಿವಾಸಿ ಇಬ್ರಾಹಿಂ ಎಸ್‌.ಬಿ ಎಂಬುವರು ದೂರು ನೀಡಿದ್ದಾರೆ. ದೂರು ಆಧಾರದ ಮೇಲೆ ಬಿಎನ್ಎಸ್ಎಸ್ ಕಾಯ್ದೆ 196, 352(2) ಅಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us