ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಅಗ್ನಿ ಅವಘಡ: ಪಟಾಕಿ ಕಿಡಿ ತಗುಲಿ ಹೊತ್ತಿ ಉರಿದ ಮನೆ
ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದವರ ಮನೆ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಗ್ನಿಗೆ ಆಹುತಿಯಾದ ಮನೆ
ಮಂಗಳೂರು: ಮಕ್ಕಳು ಪಟಾಕಿ ಸಿಡಿಸುವ ವೇಳೆ ಕಿಡಿ ತಗುಲಿ ಇಡೀ ಮನೆಯೇ ಬೆಂಕಿಗೆ ಆಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದವರ ಮನೆ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿfಇರೆ ಸಂಭವಿಸಿಲ್ಲ.
ಬೆಂಕಿ ತಗುಲುತ್ತಿದ್ದಂತೆಯೇ ಮನೆಯಲ್ಲಿದ್ದವರು ಹೊರಗೆ ಓಡಿ ಹೋದ ಪರಿಣಾಮ ಎಲ್ಲರೂ ಬಚಾವಾಗಿದ್ದಾರೆ. ಆದರೆ, ಮನೆಯಲ್ಲಿ ಕೂಡಿಟ್ಟಿದ್ದ ಪ್ಲಾಸ್ಟಿಕ್ ವಸ್ತುಗಳು ಅಗ್ನಿಗೆ ಆಹುತಿಯಾಗಿದ್ದು, ಅಗ್ನಿಶಾಮಕ ದಳದ 2 ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ.

Follow Us



