AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕಟೀಲು ದೇವಸ್ಥಾನದ ಬಳಿ ಖಾಸಗಿ ಬಸ್ ಬೆಂಕಿಗೆ ಆಹುತಿ, ತಪ್ಪಿದ ದುರಂತ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಒಎಂಪಿಎಲ್​ ಸಂಸ್ಥೆಗೆ ಸೇರಿದ ಬಸ್ಸೊಂದು ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಉರಿದುಹೋದ ಘಟನೆ ಬುಧವಾರ ನಡೆದಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ.

Ganapathi Sharma
|

Updated on:May 17, 2023 | 8:22 PM

Share

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಒಎಂಪಿಎಲ್​ ಸಂಸ್ಥೆಗೆ ಸೇರಿದ ಬಸ್ಸೊಂದು ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಉರಿದುಹೋದ ಘಟನೆ ಬುಧವಾರ ನಡೆದಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್​ಗೆ ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣ ಭಸ್ಮವಾಗಿದೆ.

ಮಂಗಳೂರು – ಕಟೀಲು ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಕಟೀಲು ದೇಗುಲದ ಬಳಿ ನೌಕರರನ್ನು ಇಳಿಸಿ ವಾಪಸ್ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಟ್ಯಾಂಕರ್​ನಿಂದ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಲಾಯಿತದಾರೂ ಪ್ರಯೋಜನವಾಗಲಿಲ್ಲ.

ಇದನ್ನೂ ಓದಿ: ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ಆರೋಪಿಯ ಬಂಧನ

ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಬಸ್ ಚಾಲಕ ಮತ್ತು ಇತರ ಇಬ್ಬರು ವ್ಯಕ್ತಿಗಳು ಮಾತ್ರ ಬಸ್ಸಿನೊಳಗೆ ಇದ್ದರು. ಅದೃಷ್ಟವಶಾತ್ ಅವರೆಲ್ಲರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Wed, 17 May 23