AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ: ಈ ಗೋಡಾನ್​ನಲ್ಲಿ ತಯಾರಾಗುತ್ತಿತ್ತಾ ಗ್ರೆನೇಡ್?

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಜ.28ರ ಸಂಜೆ 5.30 ಸುಮಾರಿಗೆ ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟವಾಗಿತ್ತು. ಈ ಪಟಾಕಿ ಗೋದಾಮಿನಲ್ಲಿ ಕೇವಲ ಪಟಾಕಿಯಷ್ಟೇ ತಯಾರಾಗುತ್ತಿತ್ತಾ?ಗ್ರೆನೇಡ್ ಮಾದರಿಯನ್ನೂ ಇಲ್ಲಿ ತಯಾರು ಮಾಡುತ್ತಿದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.

ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ: ಈ ಗೋಡಾನ್​ನಲ್ಲಿ ತಯಾರಾಗುತ್ತಿತ್ತಾ ಗ್ರೆನೇಡ್?
ಪಟಾಕಿ ಸ್ಫೋಟವಾದ ಜಾಗ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 29, 2024 | 8:54 AM

Share

ಮಂಗಳೂರು, ಜ.29: ಮೇಣೂರಿನ ತೋಟದ ಮನೆಯಲ್ಲಿದ್ದ ಪಟಾಕಿ ಗೋಡಾನ್​ನಲ್ಲಿ (Crackers Godown) ನಡೆದ ಅವಘಡಕ್ಕೆ ಮೂವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಆರು ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇನ್ನು ಘಟನೆಯಲ್ಲಿ ಮೃತಪಟ್ಟವರ ದೇಹ ಛಿದ್ರ ಛಿದ್ರವಾಗಿದೆ. ಇದನ್ನು ನೋಡಿದರೆ ಈ ಗೋಡಾನ್​ನಲ್ಲಿ ಕೇವಲ ಪಟಾಕಿಯಷ್ಟೇ ತಯಾರಾಗುತ್ತಿತ್ತಾ?ಗ್ರೆನೇಡ್ ಮಾದರಿಯನ್ನೂ ಇಲ್ಲಿ ತಯಾರು ಮಾಡುತ್ತಿದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಮೇಲ್ನೋಟಕ್ಕೆ ಬಾಂಬ್​ ಸ್ಫೋಟದಂತೆ ಶಬ್ದ ಕೇಳಿ ಬಂದಿತ್ತು. ಸ್ಥಳದಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕ​ ತಯಾರಿಸುವುದರ ಬಗ್ಗೆ ಅನುಮಾನ‌ ವ್ಯಕ್ತವಾಗಿದೆ. ಸ್ಫೋಟವಾದ ಗೋಡಾನ್​ಯೊಳಗೆ ಮತ್ತು ಅಕ್ಕ-ಪಕ್ಕ ಸಾಕಷ್ಟು ಗ್ರೆನೇಡ್ ಮಾದರಿ ವಸ್ತು ಪತ್ತೆಯಾಗಿದೆ. ಪಟಾಕಿ ಸ್ಫೋಟದ ತೀವೃತೆ ಇಷ್ಟೊಂದು ಇರಲ್ಲ ಎಂದು ಸ್ಥಳೀಯರು ಶಂಕಿಸಿದ್ದಾರೆ. ಐದಾರು ಕಿಲೋಮೀಟರ್ ದೂರದವರೆಗೆ ಸ್ಪೋಟದ ಶಬ್ಧ‌ ಕೇಳಿ ಬಂದಿದೆ. ಮೊಬೈಲ್​ ಫೋರೆನ್ಸಿಕ್​​ ತಂಡದಿಂದ ಗ್ರೆನೇಡ್ ಮಾದರಿ ವಸ್ತು ಸಂಗ್ರಹಿಸಲಾಗಿದೆ.

ಘಟನೆ ವಿವರ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಜ.28ರ ಸಂಜೆ 5.30 ಸುಮಾರಿಗೆ ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟವಾಗಿತ್ತು. ಭಾರೀ ಶಬ್ಧದಿಂದ ಆದ ಸ್ಪೋಟದ ಸದ್ದು ಕೇಳಿ ಅಕ್ಕ ಪಕ್ಕದವರು ಸ್ಥಳಕ್ಕೆ ಬಂದಾಗ ಅಲ್ಲಿ ಇಡೀ ಗೋಡಾನ್ ಬ್ಲಾಸ್ಟ್ ಆಗಿ ಬೆಂಕಿ ಆವರಿಸಿತ್ತು. 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಕೇರಳದ ವರ್ಗೀಸ್ (68), ಹಾಸನದ ಚೇತನ್(25) ಕೇರಳದ ಸ್ವಾಮಿ(60) ಮೃತಪಟ್ಟಿದ್ರು. ಉಳಿದಂತೆ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಕೇರಳ ಕೆಲಸ ನಿರ್ವಹಿಸುತ್ತಿದ್ದರು. ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಕುಚ್ಚೋಡಿ ನಿವಾಸಿ ಬಶೀರ್ ಎಂಬುವರು 2011-12 ರಲ್ಲಿ ಸ್ಟೋಟಕ ತಯಾರಿಕೆಗೆ ಲೈಸೆನ್ಸ್ ಪಡೆದುಕೊಂಡಿದ್ರು.

ಇದನ್ನೂ ಓದಿ: ದಕ್ಷಿಣ ಕನ್ನಡ: ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು, ಇಬ್ಬರು ವಶಕ್ಕೆ

ಮೃತದೇಹಗಳು ಸ್ಫೋಟವಾದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಆಗಮಿಸಿ ಬೆಂಕಿನಂದಿಸಿದ್ದಾರೆ. ಸ್ಥಳದಲ್ಲಿ ಶೆಡ್ ಸಂಪೂರ್ಣ ದ್ವಂಸವಾಗಿದ್ದು ಇದರ ಸದ್ದು 4 ಕಿ.ಮೀ. ವ್ಯಾಪ್ತಿಯಷ್ಟು ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ರು. 50 ಸೆನ್ಸ್ ಜಾಗದಲ್ಲಿ ಸಯ್ಯದ್ ಬಷೀರ್ ಎಂಬುವವರು ಪಟಾಕಿ ಮಾಡಲು ಲೈಸೆನ್ಸ್ ಪಡೆದಿದ್ದಾರೆ. 2011-2012 ನಲ್ಲಿ ತಗೊಂಡಿರೋ ಲೈಸೆನ್ಸ್ 2019 ರಲ್ಲಿ ರಿನಿವಲ್ ಆಗಿದೆ. 2024 ಮಾರ್ಚ್ ವರೆಗೂ ವ್ಯಾಲಿಡ್ ಆಗಿದೆ. ಡಿಮ್ಯಾಂಡ್ ಗೆ ತಕ್ಕ ಹಾಗೆ ಪಟಾಕಿ ಮಾಡುತ್ತಿದ್ರು ಅನ್ನೊದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪಟಾಕಿ ಮಾಡುವಾಗ ಯಾವ ರೀಸನ್ ಗೆ ಬ್ಲಾಸ್ಟ್ ಆಗಿದೆ ಅನ್ನೊದು ಗೊತ್ತಾಗಿಲ್ಲ. ಇಲ್ಲಿ ಏನಾಯ್ತು, ಯಾಕಾಯ್ತು ಅನ್ನೊದ್ರ ಬಗ್ಗೆ ತನಿಖೆ ಮಾಡ್ತಾ ಇದ್ದೀವಿ ಅಂತಾ ಎಸ್ಪಿ ಹೇಳಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್