AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಅಮಾನುಷ ಘಟನೆ; ಮೀನುಗಾರಿಕಾ ಬೋಟ್​ನಲ್ಲಿ ವ್ಯಕ್ತಿಯನ್ನು ಉಲ್ಟಾ ನೇತುಹಾಕಿ ಹಲ್ಲೆ

ಆಂಧ್ರಪ್ರದೇಶ ಮೂಲದ ವೈಲಾ ಸೀನು ಎಂಬುವವನು ಮೊಬೈಲ್ ಕದ್ದಿದ್ದಾನೆ ಅಂತ ಮೀನುಗಾರರು ಉಲ್ಟಾ ನೇತುಹಾಕಿ ಥಳಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮಂಗಳೂರಿನಲ್ಲಿ ಅಮಾನುಷ ಘಟನೆ; ಮೀನುಗಾರಿಕಾ ಬೋಟ್​ನಲ್ಲಿ ವ್ಯಕ್ತಿಯನ್ನು ಉಲ್ಟಾ ನೇತುಹಾಕಿ ಹಲ್ಲೆ
ವ್ಯಕ್ತಿಯನ್ನು ಉಲ್ಟಾ ನೇತುಹಾಕಿ ಹಲ್ಲೆ ನಡೆಸಿದ್ದಾರೆ
TV9 Web
| Edited By: |

Updated on:Dec 23, 2021 | 1:24 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಮೀನುಗಾರಿಕಾ ಬೋಟ್ನಲ್ಲಿ ವ್ಯಕ್ತಿಯೊಬ್ಬರನ್ನು ನೇತುಹಾಕಿ ಹಲ್ಲೆ ನಡೆಸಿದ್ದಾರೆ. ಮೀನುಗಾರರು ವ್ಯಕ್ತಿಯನ್ನು ಉಲ್ಟಾ ನೇತುಹಾಕಿ ಥಳಿಸಿದ್ದಾರೆ. ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಟಿವಿ9ಗೆ ಲಭ್ಯವಾಗಿದ್ದು, ಮೊಬೈಲ್ ಕಳ್ಳತನ ಮಾಡಿದ್ದಾನೆಂದು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶ ಮೂಲದ ವೈಲಾ ಸೀನು ಎಂಬುವವನು ಮೊಬೈಲ್ ಕದ್ದಿದ್ದಾನೆ ಅಂತ ಮೀನುಗಾರರು ಉಲ್ಟಾ ನೇತುಹಾಕಿ ಥಳಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಸೆಕ್ಷನ್ 143, 147, 148, 323, 324, 307, 364, 342, 506, 149ರಡಿ ಕೇಸ್ ದಾಖಲಾಗಿದೆ.

ಆರೋಪಿಗಳು ಅರೆಸ್ಟ್ ಬೋಟ್‌ನಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ 6 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಕೊಂಡೂರು ಪೋಲಯ್ಯ(23), ಅವುಲ ರಾಜ್‌ಕುಮಾರ್(26), ಕಾಟಂಗರಿ‌ ಮನೋಹರ್(21), ವೊಟುಕೋರಿ ಜಾಲಯ್ಯ(30), ಕಲಪಿಂಗಾರ ರವಿ(23) ಪ್ರಲಯ ಕಾವೇರಿ ಗೋವಿಂದಯ್ಯ(47) ಎಂಬುವವರು ಅರೆಸ್ಟ್ ಆಗಿದ್ದಾರೆ.

ಕೃಷ್ಣಾ ನದಿಯಲ್ಲಿ ಮಹಿಳೆಯ ಶವ ಪತ್ತೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಬಳಿ ಕೃಷ್ಣಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ರಬಕವಿಯ ಕುಂಬಾರ ಗಲ್ಲಿಯ ನಿವಾಸಿ ಸುಮಿತ್ರಾ ಕೊಣ್ಣೂರ ಎಂಬ ಮಹಿಳೆ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಮಹಿಳೆ ಮದುವೆಗೆ ಎಂದು ಮನೆ ಬಿಟ್ಟು ಹೋಗಿದ್ದರು. ಸದ್ಯ ಕೃಷ್ಣಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಕಸಿದು ಪರಾರಿಯಾಗಿದ್ದ ಆರೋಪಿ ಬಂಧನ ಕದ್ದ ಸ್ಕೂಟರ್‌ನಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರು ಉಪ್ಪಾರಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಯಾಸಿನ್ ಬಂಧಿತ ಆರೋಪಿ. ಡಿ.17ರ ರಾತ್ರಿ ಉಪ್ಪಾರಪೇಟೆ ವ್ಯಾಪ್ತಿಯಲ್ಲಿ ಕಳ್ಳತನ ನಡೆದಿತ್ತು. ಏರ್ ಫೋರ್ಸ್ ಸಿಬ್ಬಂದಿಯ ಮೊಬೈಲ್ ಕಸಿದು ಇಬ್ಬರು ಪರಾರಿಯಾಗಿದ್ದರು. ಸದ್ಯ ಓರ್ವ ಆರೋಪಿಯ ಬಂಧನಕ್ಕೊಳಗಾಗಿದ್ದು, ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ

Short Story Writing : ಅಭಿಜ್ಞಾನ ; ‘ಗಿಣಿಯೋ ಮಾರಾಯ, ನಮ್ಮ ಬಳ್ಳಾರಿ ಗಣಿಮಣ್ಣು ಮೆತ್ತಿಗೊಂಡು ಹಂಗೆ ಕೆಂಪಾಗ್ಯದೆ’

ಬೆಂಗಳೂರಿನಲ್ಲಿ ಕೋಟಿ ಕೋಟಿ ರೂ. ಹವಾಲಾ ದಂಧೆ ಬೆಳಕಿಗೆ! ಕೆಲ ಸ್ಫೋಟಕ ಮಾಹಿತಿ ಇಲ್ಲಿದೆ

Published On - 11:10 am, Thu, 23 December 21

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?