AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಅಮಾನುಷ ಘಟನೆ; ಮೀನುಗಾರಿಕಾ ಬೋಟ್​ನಲ್ಲಿ ವ್ಯಕ್ತಿಯನ್ನು ಉಲ್ಟಾ ನೇತುಹಾಕಿ ಹಲ್ಲೆ

ಆಂಧ್ರಪ್ರದೇಶ ಮೂಲದ ವೈಲಾ ಸೀನು ಎಂಬುವವನು ಮೊಬೈಲ್ ಕದ್ದಿದ್ದಾನೆ ಅಂತ ಮೀನುಗಾರರು ಉಲ್ಟಾ ನೇತುಹಾಕಿ ಥಳಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಮಂಗಳೂರಿನಲ್ಲಿ ಅಮಾನುಷ ಘಟನೆ; ಮೀನುಗಾರಿಕಾ ಬೋಟ್​ನಲ್ಲಿ ವ್ಯಕ್ತಿಯನ್ನು ಉಲ್ಟಾ ನೇತುಹಾಕಿ ಹಲ್ಲೆ
ವ್ಯಕ್ತಿಯನ್ನು ಉಲ್ಟಾ ನೇತುಹಾಕಿ ಹಲ್ಲೆ ನಡೆಸಿದ್ದಾರೆ
TV9 Web
| Updated By: sandhya thejappa|

Updated on:Dec 23, 2021 | 1:24 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಮೀನುಗಾರಿಕಾ ಬೋಟ್ನಲ್ಲಿ ವ್ಯಕ್ತಿಯೊಬ್ಬರನ್ನು ನೇತುಹಾಕಿ ಹಲ್ಲೆ ನಡೆಸಿದ್ದಾರೆ. ಮೀನುಗಾರರು ವ್ಯಕ್ತಿಯನ್ನು ಉಲ್ಟಾ ನೇತುಹಾಕಿ ಥಳಿಸಿದ್ದಾರೆ. ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಟಿವಿ9ಗೆ ಲಭ್ಯವಾಗಿದ್ದು, ಮೊಬೈಲ್ ಕಳ್ಳತನ ಮಾಡಿದ್ದಾನೆಂದು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶ ಮೂಲದ ವೈಲಾ ಸೀನು ಎಂಬುವವನು ಮೊಬೈಲ್ ಕದ್ದಿದ್ದಾನೆ ಅಂತ ಮೀನುಗಾರರು ಉಲ್ಟಾ ನೇತುಹಾಕಿ ಥಳಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಸೆಕ್ಷನ್ 143, 147, 148, 323, 324, 307, 364, 342, 506, 149ರಡಿ ಕೇಸ್ ದಾಖಲಾಗಿದೆ.

ಆರೋಪಿಗಳು ಅರೆಸ್ಟ್ ಬೋಟ್‌ನಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ 6 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಕೊಂಡೂರು ಪೋಲಯ್ಯ(23), ಅವುಲ ರಾಜ್‌ಕುಮಾರ್(26), ಕಾಟಂಗರಿ‌ ಮನೋಹರ್(21), ವೊಟುಕೋರಿ ಜಾಲಯ್ಯ(30), ಕಲಪಿಂಗಾರ ರವಿ(23) ಪ್ರಲಯ ಕಾವೇರಿ ಗೋವಿಂದಯ್ಯ(47) ಎಂಬುವವರು ಅರೆಸ್ಟ್ ಆಗಿದ್ದಾರೆ.

ಕೃಷ್ಣಾ ನದಿಯಲ್ಲಿ ಮಹಿಳೆಯ ಶವ ಪತ್ತೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಬಳಿ ಕೃಷ್ಣಾ ನದಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ರಬಕವಿಯ ಕುಂಬಾರ ಗಲ್ಲಿಯ ನಿವಾಸಿ ಸುಮಿತ್ರಾ ಕೊಣ್ಣೂರ ಎಂಬ ಮಹಿಳೆ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಮಹಿಳೆ ಮದುವೆಗೆ ಎಂದು ಮನೆ ಬಿಟ್ಟು ಹೋಗಿದ್ದರು. ಸದ್ಯ ಕೃಷ್ಣಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಕಸಿದು ಪರಾರಿಯಾಗಿದ್ದ ಆರೋಪಿ ಬಂಧನ ಕದ್ದ ಸ್ಕೂಟರ್‌ನಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರು ಉಪ್ಪಾರಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಯಾಸಿನ್ ಬಂಧಿತ ಆರೋಪಿ. ಡಿ.17ರ ರಾತ್ರಿ ಉಪ್ಪಾರಪೇಟೆ ವ್ಯಾಪ್ತಿಯಲ್ಲಿ ಕಳ್ಳತನ ನಡೆದಿತ್ತು. ಏರ್ ಫೋರ್ಸ್ ಸಿಬ್ಬಂದಿಯ ಮೊಬೈಲ್ ಕಸಿದು ಇಬ್ಬರು ಪರಾರಿಯಾಗಿದ್ದರು. ಸದ್ಯ ಓರ್ವ ಆರೋಪಿಯ ಬಂಧನಕ್ಕೊಳಗಾಗಿದ್ದು, ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ

Short Story Writing : ಅಭಿಜ್ಞಾನ ; ‘ಗಿಣಿಯೋ ಮಾರಾಯ, ನಮ್ಮ ಬಳ್ಳಾರಿ ಗಣಿಮಣ್ಣು ಮೆತ್ತಿಗೊಂಡು ಹಂಗೆ ಕೆಂಪಾಗ್ಯದೆ’

ಬೆಂಗಳೂರಿನಲ್ಲಿ ಕೋಟಿ ಕೋಟಿ ರೂ. ಹವಾಲಾ ದಂಧೆ ಬೆಳಕಿಗೆ! ಕೆಲ ಸ್ಫೋಟಕ ಮಾಹಿತಿ ಇಲ್ಲಿದೆ

Published On - 11:10 am, Thu, 23 December 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!