AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು

ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್ ಶುಚಿಗೊಳಿಸಲು ಕೆಳಗಿಳಿದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದ. ಕೂಡಲೇ ಆತನನ್ನು ರಕ್ಷಿಸಲು ಹೋದ 8 ಮಂದಿಯ ಉಸಿರಾಟವೂ ಏರುಪೇರಾಯಿತು.

ಮಂಗಳೂರಿನ ಮೀನು ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಐವರು ಸಾವು
ಮಂಗಳೂರಿನ ಮೀನು ಫ್ಯಾಕ್ಟರಿ ಮತ್ತು ವಿಷಾನಿಲ ಇದ್ದ ಟ್ಯಾಂಕ್
TV9 Web
| Edited By: |

Updated on:Apr 18, 2022 | 10:02 AM

Share

ಮಂಗಳೂರು: ಮೀನಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿಶೇಷ ಆರ್ಥಿಕ ವಲಯ (Special Economic Zone – SEZ) ವ್ಯಾಪ್ತಿಯ ಮೀನಿನ ಕಾರ್ಖಾನೆಯಲ್ಲಿ ಮೀನು ತ್ಯಾಜ್ಯದ ಟ್ಯಾಂಕ್​​ ಶುಚಿಗೊಳಿಸುವಾಗ ಅವಘಡ ಸಂಭವಿಸಿದೆ. ಪಶ್ಚಿಮ ಬಂಗಾಳ ಮೂಲದ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಸೇರಿ ಐವರು ಮೃತಪಟ್ಟಿದ್ದಾರೆ. ಮಿರಾಜುಲ್​ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬ್ಉಲ್ಲಾ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥ ಕಾರ್ಮಿಕರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲಿಸಿದರು. ದುರಂತ ನಡೆದ ಪ್ರದೇಶವು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತದೆ.

ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್ ಶುಚಿಗೊಳಿಸಲು ಕೆಳಗಿಳಿದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದ. ಕೂಡಲೇ ಆತನನ್ನು ರಕ್ಷಿಸಲು ಹೋದ 8 ಮಂದಿಯ ಉಸಿರಾಟವೂ ಏರುಪೇರಾಯಿತು. ಕಾರ್ಖಾನೆಗೆ ವಿವಿಧೆಡೆಯಿಂದ ಬರುವ ಮೀನಿನ ತ್ಯಾಜ್ಯವನ್ನು ಈ ಬೃಹತ್ ಟ್ಯಾಂಕ್​ನಲ್ಲಿ ಮೊದಲು ಇರಿಸಿ, ಶುದ್ಧೀಕರಿಸಲಾಗುತ್ತಿತ್ತು. ಇದು ಸುಮಾರು 20 ಅಡಿ ಆಳವಾಗಿದೆ.

ಮೀನಿನ ತ್ಯಾಜ್ಯವನ್ನು ಸಂಸ್ಕರಿಸುವಾಗ ಬಳಕೆ ಮಾಡುವ ವಿಷಾನಿಲ ಸೋರಿಕೆಯಿಂದ ಈ ದುರ್ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ ನಿರ್ದಿಷ್ಟವಾಗಿ ಇಂಥದ್ದೇ ಕಾರಣ ಎಂದು ಯಾರೂ ಅಧಿಕೃತವಾಗಿ ಹೇಳುತ್ತಿಲ್ಲ. ಸಮರ್ಪಕ ತನಿಖೆ ನಡೆದು, ಸಂಪೂರ್ಣ ಮಾಹಿತಿ ಹೊರಬರಬೇಕಿದೆ. ಮುಂದಿನ ದಿನಗಳಲ್ಲಿ ಇಂಥ ಅನಾಹುತಗಳು ಮರುಕಳಿಸದಿರಲು ಇತರ ಕಾರ್ಖಾನೆಗಳಲ್ಲಿಯೂ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಿದೆ. ಸದ್ಯಕ್ಕೆ ಕಾರ್ಖಾನೆ ಸ್ಥಗಿತಗೊಂಡಿದ್ದು, ಯಾವುದೇ ಕೆಲಸ ನಡೆಸಬೇಡಿ ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ಮಂಗಳೂರು: ಫಿಶ್ ಮಿಲ್ ಚಿಮಣಿಯಲ್ಲಿ ಹಾರುತ್ತಿದೆ ಸಣ್ಣ ಬೆಂಕಿ ಉಂಡೆಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನತ್ತ ಚೀನಾ: ಕೊವಿಡ್​ನಿಂದ ಮತ್ತೆ ಸರಣಿ ಸಾವು, ತತ್ತರಿಸಿವೆ ರಿಯಲ್ ಎಸ್ಟೇಟ್, ಆಟೊ ವಲಯ

Published On - 9:24 am, Mon, 18 April 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ