AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ

ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ
ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣ
TV9 Web
| Edited By: |

Updated on: Aug 14, 2022 | 5:36 PM

Share

ದಕ್ಷಿಣ ಕನ್ನಡ: ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೌದು ಮಂಗಳೂರು ಏರ್ ಪೋರ್ಟ್​​ನಲ್ಲಿ ಯುವಕ-ಯುವತಿ ಭದ್ರತೆ ಬಗ್ಗೆ ಆತಂಕ ಹುಟ್ಟಿಸುವ ರೀತಿಯಲ್ಲಿ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಯುವತಿ ಮಂಗಳೂರು ಏರ್ ಪೋರ್ಟ್ ಮೂಲಕ ಬೆಂಗಳೂರಿಗೆ ತೆರಳಲು ಬಂದಿದ್ದಳು. ಯುವಕ ಮಂಗಳೂರು ಏರ್ ಪೋರ್ಟ್ ಮೂಲಕ ಮುಂಬೈಗೆ ತೆರಳಲು ಬಂದಿದ್ದನು. ಇಬ್ಬರೂ ಪರಿಚಯಸ್ಥರೇ ಆಗಿದ್ದು, ಬೇರೆ ಬೇರೆ ವಿಮಾನದಲ್ಲಿ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿದ್ದರು.

ಯುವಕ ಕೂತಿದ್ದ ಮುಂಬೈ ವಿಮಾನ ರನ್ ವೇಯಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದವಾಗಿತ್ತು. ಈ ವೇಳೆ ಬೆಂಗಳೂರಿಗೆ ತೆರಳಲು ಏರ್ ಪೋರ್ಟ್ ನಲ್ಲಿ ಕೂತಿದ್ದ ಯುವತಿ ಜೊತೆ ಚಾಟಿಂಗ್ ಮಾಡುತ್ತಿದ್ದನು.

ಚಾಟಿಂಗ್​ನಲ್ಲಿ ಭದ್ರತೆಗೆ ಅಪಾಯವೊಡ್ಡುವ ವಿಚಾರಗಳ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಯುವತಿಯ ಚಾಟಿಂಗ್ ಗಮನಿಸಿ ಪ್ರಯಾಣಿಕರೊಬ್ಬರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಭದ್ರತಾ ಸಿಬ್ಬಂದಿ ಮುಂಬೈ ವಿಮಾನ ತಡೆದು ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಿದ್ದಾರೆ.

ಭದ್ರತಾ ಸಿಬ್ಬಂದಿ ಸದ್ಯ ಯುವಕ ಮತ್ತು ಯುವತಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ತಮಾಷೆಗಾಗಿ ಮಾಡಿದ್ದಾಗಿ ಜೋಡಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು