AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ

ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ
ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣ
TV9 Web
| Edited By: ವಿವೇಕ ಬಿರಾದಾರ|

Updated on: Aug 14, 2022 | 5:36 PM

Share

ದಕ್ಷಿಣ ಕನ್ನಡ: ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೌದು ಮಂಗಳೂರು ಏರ್ ಪೋರ್ಟ್​​ನಲ್ಲಿ ಯುವಕ-ಯುವತಿ ಭದ್ರತೆ ಬಗ್ಗೆ ಆತಂಕ ಹುಟ್ಟಿಸುವ ರೀತಿಯಲ್ಲಿ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಯುವತಿ ಮಂಗಳೂರು ಏರ್ ಪೋರ್ಟ್ ಮೂಲಕ ಬೆಂಗಳೂರಿಗೆ ತೆರಳಲು ಬಂದಿದ್ದಳು. ಯುವಕ ಮಂಗಳೂರು ಏರ್ ಪೋರ್ಟ್ ಮೂಲಕ ಮುಂಬೈಗೆ ತೆರಳಲು ಬಂದಿದ್ದನು. ಇಬ್ಬರೂ ಪರಿಚಯಸ್ಥರೇ ಆಗಿದ್ದು, ಬೇರೆ ಬೇರೆ ವಿಮಾನದಲ್ಲಿ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿದ್ದರು.

ಯುವಕ ಕೂತಿದ್ದ ಮುಂಬೈ ವಿಮಾನ ರನ್ ವೇಯಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದವಾಗಿತ್ತು. ಈ ವೇಳೆ ಬೆಂಗಳೂರಿಗೆ ತೆರಳಲು ಏರ್ ಪೋರ್ಟ್ ನಲ್ಲಿ ಕೂತಿದ್ದ ಯುವತಿ ಜೊತೆ ಚಾಟಿಂಗ್ ಮಾಡುತ್ತಿದ್ದನು.

ಚಾಟಿಂಗ್​ನಲ್ಲಿ ಭದ್ರತೆಗೆ ಅಪಾಯವೊಡ್ಡುವ ವಿಚಾರಗಳ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಯುವತಿಯ ಚಾಟಿಂಗ್ ಗಮನಿಸಿ ಪ್ರಯಾಣಿಕರೊಬ್ಬರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಭದ್ರತಾ ಸಿಬ್ಬಂದಿ ಮುಂಬೈ ವಿಮಾನ ತಡೆದು ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಿದ್ದಾರೆ.

ಭದ್ರತಾ ಸಿಬ್ಬಂದಿ ಸದ್ಯ ಯುವಕ ಮತ್ತು ಯುವತಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ತಮಾಷೆಗಾಗಿ ಮಾಡಿದ್ದಾಗಿ ಜೋಡಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!