AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ

ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ
ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣ
TV9 Web
| Edited By: ವಿವೇಕ ಬಿರಾದಾರ|

Updated on: Aug 14, 2022 | 5:36 PM

Share

ದಕ್ಷಿಣ ಕನ್ನಡ: ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೌದು ಮಂಗಳೂರು ಏರ್ ಪೋರ್ಟ್​​ನಲ್ಲಿ ಯುವಕ-ಯುವತಿ ಭದ್ರತೆ ಬಗ್ಗೆ ಆತಂಕ ಹುಟ್ಟಿಸುವ ರೀತಿಯಲ್ಲಿ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಯುವತಿ ಮಂಗಳೂರು ಏರ್ ಪೋರ್ಟ್ ಮೂಲಕ ಬೆಂಗಳೂರಿಗೆ ತೆರಳಲು ಬಂದಿದ್ದಳು. ಯುವಕ ಮಂಗಳೂರು ಏರ್ ಪೋರ್ಟ್ ಮೂಲಕ ಮುಂಬೈಗೆ ತೆರಳಲು ಬಂದಿದ್ದನು. ಇಬ್ಬರೂ ಪರಿಚಯಸ್ಥರೇ ಆಗಿದ್ದು, ಬೇರೆ ಬೇರೆ ವಿಮಾನದಲ್ಲಿ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿದ್ದರು.

ಯುವಕ ಕೂತಿದ್ದ ಮುಂಬೈ ವಿಮಾನ ರನ್ ವೇಯಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದವಾಗಿತ್ತು. ಈ ವೇಳೆ ಬೆಂಗಳೂರಿಗೆ ತೆರಳಲು ಏರ್ ಪೋರ್ಟ್ ನಲ್ಲಿ ಕೂತಿದ್ದ ಯುವತಿ ಜೊತೆ ಚಾಟಿಂಗ್ ಮಾಡುತ್ತಿದ್ದನು.

ಚಾಟಿಂಗ್​ನಲ್ಲಿ ಭದ್ರತೆಗೆ ಅಪಾಯವೊಡ್ಡುವ ವಿಚಾರಗಳ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಯುವತಿಯ ಚಾಟಿಂಗ್ ಗಮನಿಸಿ ಪ್ರಯಾಣಿಕರೊಬ್ಬರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಭದ್ರತಾ ಸಿಬ್ಬಂದಿ ಮುಂಬೈ ವಿಮಾನ ತಡೆದು ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಿದ್ದಾರೆ.

ಭದ್ರತಾ ಸಿಬ್ಬಂದಿ ಸದ್ಯ ಯುವಕ ಮತ್ತು ಯುವತಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ತಮಾಷೆಗಾಗಿ ಮಾಡಿದ್ದಾಗಿ ಜೋಡಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ