AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ

ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ
ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣ
TV9 Web
| Edited By: |

Updated on: Aug 14, 2022 | 5:36 PM

Share

ದಕ್ಷಿಣ ಕನ್ನಡ: ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೌದು ಮಂಗಳೂರು ಏರ್ ಪೋರ್ಟ್​​ನಲ್ಲಿ ಯುವಕ-ಯುವತಿ ಭದ್ರತೆ ಬಗ್ಗೆ ಆತಂಕ ಹುಟ್ಟಿಸುವ ರೀತಿಯಲ್ಲಿ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಯುವತಿ ಮಂಗಳೂರು ಏರ್ ಪೋರ್ಟ್ ಮೂಲಕ ಬೆಂಗಳೂರಿಗೆ ತೆರಳಲು ಬಂದಿದ್ದಳು. ಯುವಕ ಮಂಗಳೂರು ಏರ್ ಪೋರ್ಟ್ ಮೂಲಕ ಮುಂಬೈಗೆ ತೆರಳಲು ಬಂದಿದ್ದನು. ಇಬ್ಬರೂ ಪರಿಚಯಸ್ಥರೇ ಆಗಿದ್ದು, ಬೇರೆ ಬೇರೆ ವಿಮಾನದಲ್ಲಿ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿದ್ದರು.

ಯುವಕ ಕೂತಿದ್ದ ಮುಂಬೈ ವಿಮಾನ ರನ್ ವೇಯಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದವಾಗಿತ್ತು. ಈ ವೇಳೆ ಬೆಂಗಳೂರಿಗೆ ತೆರಳಲು ಏರ್ ಪೋರ್ಟ್ ನಲ್ಲಿ ಕೂತಿದ್ದ ಯುವತಿ ಜೊತೆ ಚಾಟಿಂಗ್ ಮಾಡುತ್ತಿದ್ದನು.

ಚಾಟಿಂಗ್​ನಲ್ಲಿ ಭದ್ರತೆಗೆ ಅಪಾಯವೊಡ್ಡುವ ವಿಚಾರಗಳ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಯುವತಿಯ ಚಾಟಿಂಗ್ ಗಮನಿಸಿ ಪ್ರಯಾಣಿಕರೊಬ್ಬರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಭದ್ರತಾ ಸಿಬ್ಬಂದಿ ಮುಂಬೈ ವಿಮಾನ ತಡೆದು ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಿದ್ದಾರೆ.

ಭದ್ರತಾ ಸಿಬ್ಬಂದಿ ಸದ್ಯ ಯುವಕ ಮತ್ತು ಯುವತಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ತಮಾಷೆಗಾಗಿ ಮಾಡಿದ್ದಾಗಿ ಜೋಡಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ