AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ

ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ
ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣ
TV9 Web
| Edited By: ವಿವೇಕ ಬಿರಾದಾರ|

Updated on: Aug 14, 2022 | 5:36 PM

Share

ದಕ್ಷಿಣ ಕನ್ನಡ: ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೌದು ಮಂಗಳೂರು ಏರ್ ಪೋರ್ಟ್​​ನಲ್ಲಿ ಯುವಕ-ಯುವತಿ ಭದ್ರತೆ ಬಗ್ಗೆ ಆತಂಕ ಹುಟ್ಟಿಸುವ ರೀತಿಯಲ್ಲಿ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಯುವತಿ ಮಂಗಳೂರು ಏರ್ ಪೋರ್ಟ್ ಮೂಲಕ ಬೆಂಗಳೂರಿಗೆ ತೆರಳಲು ಬಂದಿದ್ದಳು. ಯುವಕ ಮಂಗಳೂರು ಏರ್ ಪೋರ್ಟ್ ಮೂಲಕ ಮುಂಬೈಗೆ ತೆರಳಲು ಬಂದಿದ್ದನು. ಇಬ್ಬರೂ ಪರಿಚಯಸ್ಥರೇ ಆಗಿದ್ದು, ಬೇರೆ ಬೇರೆ ವಿಮಾನದಲ್ಲಿ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿದ್ದರು.

ಯುವಕ ಕೂತಿದ್ದ ಮುಂಬೈ ವಿಮಾನ ರನ್ ವೇಯಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದವಾಗಿತ್ತು. ಈ ವೇಳೆ ಬೆಂಗಳೂರಿಗೆ ತೆರಳಲು ಏರ್ ಪೋರ್ಟ್ ನಲ್ಲಿ ಕೂತಿದ್ದ ಯುವತಿ ಜೊತೆ ಚಾಟಿಂಗ್ ಮಾಡುತ್ತಿದ್ದನು.

ಚಾಟಿಂಗ್​ನಲ್ಲಿ ಭದ್ರತೆಗೆ ಅಪಾಯವೊಡ್ಡುವ ವಿಚಾರಗಳ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಯುವತಿಯ ಚಾಟಿಂಗ್ ಗಮನಿಸಿ ಪ್ರಯಾಣಿಕರೊಬ್ಬರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಭದ್ರತಾ ಸಿಬ್ಬಂದಿ ಮುಂಬೈ ವಿಮಾನ ತಡೆದು ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಿದ್ದಾರೆ.

ಭದ್ರತಾ ಸಿಬ್ಬಂದಿ ಸದ್ಯ ಯುವಕ ಮತ್ತು ಯುವತಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ತಮಾಷೆಗಾಗಿ ಮಾಡಿದ್ದಾಗಿ ಜೋಡಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ