AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ

ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ
ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣ
TV9 Web
| Edited By: ವಿವೇಕ ಬಿರಾದಾರ|

Updated on: Aug 14, 2022 | 5:36 PM

Share

ದಕ್ಷಿಣ ಕನ್ನಡ: ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೌದು ಮಂಗಳೂರು ಏರ್ ಪೋರ್ಟ್​​ನಲ್ಲಿ ಯುವಕ-ಯುವತಿ ಭದ್ರತೆ ಬಗ್ಗೆ ಆತಂಕ ಹುಟ್ಟಿಸುವ ರೀತಿಯಲ್ಲಿ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಯುವತಿ ಮಂಗಳೂರು ಏರ್ ಪೋರ್ಟ್ ಮೂಲಕ ಬೆಂಗಳೂರಿಗೆ ತೆರಳಲು ಬಂದಿದ್ದಳು. ಯುವಕ ಮಂಗಳೂರು ಏರ್ ಪೋರ್ಟ್ ಮೂಲಕ ಮುಂಬೈಗೆ ತೆರಳಲು ಬಂದಿದ್ದನು. ಇಬ್ಬರೂ ಪರಿಚಯಸ್ಥರೇ ಆಗಿದ್ದು, ಬೇರೆ ಬೇರೆ ವಿಮಾನದಲ್ಲಿ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿದ್ದರು.

ಯುವಕ ಕೂತಿದ್ದ ಮುಂಬೈ ವಿಮಾನ ರನ್ ವೇಯಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದವಾಗಿತ್ತು. ಈ ವೇಳೆ ಬೆಂಗಳೂರಿಗೆ ತೆರಳಲು ಏರ್ ಪೋರ್ಟ್ ನಲ್ಲಿ ಕೂತಿದ್ದ ಯುವತಿ ಜೊತೆ ಚಾಟಿಂಗ್ ಮಾಡುತ್ತಿದ್ದನು.

ಚಾಟಿಂಗ್​ನಲ್ಲಿ ಭದ್ರತೆಗೆ ಅಪಾಯವೊಡ್ಡುವ ವಿಚಾರಗಳ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಯುವತಿಯ ಚಾಟಿಂಗ್ ಗಮನಿಸಿ ಪ್ರಯಾಣಿಕರೊಬ್ಬರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಭದ್ರತಾ ಸಿಬ್ಬಂದಿ ಮುಂಬೈ ವಿಮಾನ ತಡೆದು ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಿದ್ದಾರೆ.

ಭದ್ರತಾ ಸಿಬ್ಬಂದಿ ಸದ್ಯ ಯುವಕ ಮತ್ತು ಯುವತಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ತಮಾಷೆಗಾಗಿ ಮಾಡಿದ್ದಾಗಿ ಜೋಡಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ