AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜಿನ್ ಹಾಳಾಗಿ ದುಬೈಗೆ ಹೊರಡಬೇಕಾದ ವಿಮಾನ ವಿಳಂಬ; ಮಂಗಳೂರಿನಲ್ಲಿ ಅಧಿಕಾರಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ

ವಿಮಾನದ ಇಂಜಿನ್ ಹಾಳಾಗಿದೆ ಎಂದು ಪ್ರಯಾಣಿಕರಿಗೆ ಮಾಹಿತಿ ಕೊಟ್ಟು ಅಧಿಕಾರಿಗಳು ಸುಮ್ಮನಾಗಿದ್ದಾರೆ. ಆದ್ರೆ ಪ್ರಯಾಣಿಕರಿಗೆ ಯಾವುದೇ ಬದಲಿ ಅನುಕೂಲ ಮಾಡಿಕೊಟ್ಟಿಲ್ಲ. ಹೀಗಾಗಿ ರಾತ್ರಿ ಪೂರ್ತಿ ವಿಮಾನ ನಿಲ್ದಾಣದಲ್ಲೇ ಕಾದ ಪ್ರಯಾಣಿಕರು ರೋಸಿ ಹೋಗಿದ್ದಾರೆ.

ಇಂಜಿನ್ ಹಾಳಾಗಿ ದುಬೈಗೆ ಹೊರಡಬೇಕಾದ ವಿಮಾನ ವಿಳಂಬ; ಮಂಗಳೂರಿನಲ್ಲಿ ಅಧಿಕಾರಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು

Updated on:Jul 11, 2023 | 2:50 PM

ಮಂಗಳೂರು: ಮಂಗಳೂರಿನಿಂದ ದುಬೈಗೆ ಹೊರಡಬೇಕಾದ ವಿಮಾನ ವಿಳಂಬ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ(Mangalore Airport) ಪ್ರಯಾಣಿಕರು ಪರದಾಡುತ್ತಿರುವಂತಹ ಘಟನೆ ನಡೆದಿದೆ. ನಿನ್ನೆ(ಜು.10) ರಾತ್ರಿ 11‌ಕ್ಕೆ ದುಬೈಗೆ ಹೊರಡಬೇಕಿದ್ದ ಏರ್ ಇಂಡಿಯಾ ಫ್ಲೈಟ್(Air India Flight) ವಿಳಂಬವಾಗಿದೆ. ಆದ್ರೆ ಅಧಿಕಾರಿಗಳು ಪ್ರಯಾಣಿಕರಿಗೆ ಬದಲಿ ಫ್ಲೈಟ್ ವ್ಯವಸ್ಥೆ ಮಾಡದೆ ಸುಮ್ಮನಿದ್ದಾರೆ. ಇದರಿಂದ ನಿನ್ನೆ ರಾತ್ರಿಯಿಂದ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಪರದಾಡುವಂತಾಗಿದೆ.

ವಿಮಾನದ ಇಂಜಿನ್ ಹಾಳಾಗಿದೆ ಎಂದು ಪ್ರಯಾಣಿಕರಿಗೆ ಮಾಹಿತಿ ಕೊಟ್ಟು ಅಧಿಕಾರಿಗಳು ಸುಮ್ಮನಾಗಿದ್ದಾರೆ. ಆದ್ರೆ ಪ್ರಯಾಣಿಕರಿಗೆ ಯಾವುದೇ ಬದಲಿ ಅನುಕೂಲ ಮಾಡಿಕೊಟ್ಟಿಲ್ಲ. ಹೀಗಾಗಿ ರಾತ್ರಿ ಪೂರ್ತಿ ವಿಮಾನ ನಿಲ್ದಾಣದಲ್ಲೇ ಕಾದ ಪ್ರಯಾಣಿಕರು ರೋಸಿ ಹೋಗಿದ್ದಾರೆ. ಏರ್​ಪೋರ್ಟ್​ ಅಧಿಕಾರಿಗಳು ಮತ್ತು ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆದಿದ್ದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Bomb Scare: ವಿಮಾನದಲ್ಲಿ ಬಾಂಬ್ ಇದೆ ಎಂದು ಕೂಗಿದ ಪ್ರಯಾಣಿಕ, ಕೋಲ್ಕತ್ತಾದಿಂದ ದೋಹಾಗೆ ಹೊರಡಬೇಕಿದ್ದ ವಿಮಾನ ವಿಳಂಬ

ಸದ್ಯ ಪ್ರಯಾಣಿಕರು ತೀರ್ವ ತರಾಟೆ, ಗಲಾಟೆ ಮಾಡಿದ ಬಳಿಕ ಅಧಿಕಾರಿಗಳು ಬೇರೆ ವಿಮಾನದ ವ್ಯವಸ್ಥೆ ಮಾಡಿದ್ದಾರೆ. ಈಗ 130 ಪ್ರಯಾಣಿಕರು ವಿಮಾನ ಏರಿ ಕುಳಿತ್ರು. ತಡವಾದ್ರೆ ದುಬೈನಲ್ಲಿ ಕೆಲಸ ಕಳೆದುಕೊಳ್ಳೋ ಭೀತಿಯನ್ನು ಕೆಲವು ಉದ್ಯೋಗಿಗಳು ವ್ಯಕ್ತಪಡಿಸಿದ್ದು ಅಂತವರಿಂದ ವಿವರಣೆ ಪತ್ರ ಬರೆದುಕೊಡುವಂತೆ ಡಿಮ್ಯಾಂಡ್ ಮಾಡಲಾಗಿದೆ. ಹಾಗೂ ಏರ್ ಇಂಡಿಯಾ ಕಂಪನಿ ಕೂಡ ವಿವರಣೆ ಪತ್ರ ಬರೆದುಕೊಟ್ಟಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:50 am, Tue, 11 July 23

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್