AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮಗನ ಮೇಲೆ ಅಪ್ಪನಿಂದ ಫೈರಿಂಗ್ ಪ್ರಕರಣ; ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆ

ಸುಧೀಂದ್ರ ಪ್ರಭು ಮತ್ತು ಇಬ್ಬರು ಸಿಬ್ಬಂದಿ ಮಧ್ಯೆ ಕಚೇರಿ ಹೊರಗೆ ಹೊಡೆದಾಟ ನಡೆಯುತ್ತದೆ. ಆಗ ಕಚೇರಿ ಒಳಗಿಂದ ತನ್ನ ಲೈಸೆನ್ಸ್ ರಿವಾಲ್ವರ್ ಹಿಡಿದು ರಾಜೇಶ್ ಹೊರಬರುತ್ತಾರೆ. ರಿವಾಲ್ವರ್ ಹಿಡಿದು ಸಿಬ್ಬಂದಿ ಮೇಲೆ ಕೈ ಹಾಕಿ ಪರಸ್ಪರ ಹೊಡೆದಾಟ ನಡೆಸುತ್ತಾರೆ.

ಮಂಗಳೂರಿನಲ್ಲಿ ಮಗನ ಮೇಲೆ ಅಪ್ಪನಿಂದ ಫೈರಿಂಗ್ ಪ್ರಕರಣ; ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆ
ಸಿಸಿಟಿವಿಯಲ್ಲಿ ಚಲನವಲನಗಳು ಸೆರೆಯಾಗಿದೆ.
TV9 Web
| Edited By: sandhya thejappa|

Updated on: Oct 06, 2021 | 8:53 AM

Share

ಮಂಗಳೂರು: ಅಪ್ಪನೇ ತನ್ನ ಮಗನ ಮೇಲೆ ಫೈರಿಂಗ್ ಮಾಡಿದ್ದ ಘಟನೆ ನಿನ್ನೆ (ಅ.5) ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಕಾರ್ಗೋ ಸಂಸ್ಥೆಯಲ್ಲಿ ನಡೆದಿತ್ತು. ವೇತನದ ವಿಚಾರಕ್ಕೆ ಮಾಲೀಕ ರಾಜೇಶ್ ಪ್ರಭು ಬಳಿ ಇಬ್ಬರು ಸಿಬ್ಬಂದಿ ಜಗಳ ಮಾಡಿದ್ದರು. ಚಂದ್ರು ಮತ್ತು ಅಶ್ರಫ್ ಎಂಬ ಸಿಬ್ಬಂದಿ ರಾಜೇಶ್ ಜೊತೆ ಗಲಾಟೆ ಮಾಡಿದ್ದರು. ಈ ವೇಳೆ ರಾಜೇಶ್ ಪುತ್ರ ಸುಧೀಂದ್ರ ಪ್ರಭು ಸಿಬ್ಬಂದಿ ಜೊತೆ ಜಗಳಕ್ಕೆ ಇಳಿಯುತ್ತಾನೆ. ಆಗ ರಾಜೇಶ್ ಕೈಯಲ್ಲಿದ್ದ ಲೈಸೆನ್ಸ್ ರಿವಾಲ್ವರ್ನಿಂದ ಅಚಾನಕ್ ಆಗಿ ಗುಂಡು ಹಾರಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಸಾವು ಬದುಕಿನ ಮಧ್ಯೆ ಪುತ್ರ ಸುಧೀಂದ್ರ ಹೋರಾಡುತ್ತಿದ್ದಾನೆ.

ಸುಧೀಂದ್ರ ಪ್ರಭು ಮತ್ತು ಇಬ್ಬರು ಸಿಬ್ಬಂದಿ ಮಧ್ಯೆ ಕಚೇರಿ ಹೊರಗೆ ಹೊಡೆದಾಟ ನಡೆಯುತ್ತದೆ. ಆಗ ಕಚೇರಿ ಒಳಗಿಂದ ತನ್ನ ಲೈಸೆನ್ಸ್ ರಿವಾಲ್ವರ್ ಹಿಡಿದು ರಾಜೇಶ್ ಹೊರಬರುತ್ತಾರೆ. ರಿವಾಲ್ವರ್ ಹಿಡಿದು ಸಿಬ್ಬಂದಿ ಮೇಲೆ ಕೈ ಹಾಕಿ ಪರಸ್ಪರ ಹೊಡೆದಾಟ ನಡೆಸುತ್ತಾರೆ. ಈ ವೇಳೆ ಅಚಾನಕ್ ಆಗಿ ಕೈಯ್ಯಲ್ಲಿದ್ದ ರಿವಾಲ್ವರ್ನಿಂದ ಗುಂಡು ಹಾರುತ್ತದೆ. ಈ ಪರಿಣಾಮ ಮಗ ಸುಧೀಂದ್ರ ತಲೆ ಭಾಗಕ್ಕೆ ಗಂಭೀರ ಗಾಯವಾಗುತ್ತದೆ. ಕಚೇರಿ ಹೊರಭಾಗದ ಸಿಸಿಟಿವಿಯಲ್ಲಿ ಚಲನವಲನಗಳು ಸೆರೆಯಾಗಿದ್ದು, ಘಟನೆ ಬಗ್ಗೆ ಪೊಲೀಸ್ ವಿಚಾರಣೆ ವೇಳೆ ರಾಜೇಶ್ ಪ್ರಭು ಮಾಹಿತಿ ನೀಡಿದ್ದಾರೆ.

ವೇತನ ಕೇಳಿದ ವಿಚಾರದಲ್ಲಿ ನೌಕರರ ಜತೆ ವಾಗ್ವಾದ ನಡೆದಿತ್ತು. ಈ ವೇಳೆ ಅಪ್ಪ ಮಗನ ಮೇಲೆ ಅಚಾನಕ್ ಆಗಿ ಗುಂಡು ಹಾರಿಸಿದ್ದಾರೆ. ಗಂಭೀರ ಗಾಯಗೊಂಡಿರುವ ಸುಧೀಂದ್ರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ

ಮಂಗಳೂರು: ಮಗನ ಮೇಲೆ ಅಪ್ಪನಿಂದಲೇ ಫೈರಿಂಗ್

ಬಂದರು ವಿಸ್ತರಣೆಗೆ ಮಿನುಗಾರರಿಂದ ವಿರೋಧ; ಸ್ಥಳೀಯವಾಗಿ ಮತ್ತೊಮ್ಮೆ ಪರಿಶೀಲನೆಗೆ ಮುಂದಾದ ಪರಿಸರ ಇಲಾಖೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ