AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮಗನನ್ನು ಕೊಲೆ ಮಾಡಿಸಿದ್ದು ರಮಾನಾಥ ರೈ – ಬಂಟ್ವಾಳದ ಆರ್​ಎಸ್​ಎಸ್ ​​ಕಾರ್ಯಕರ್ತ ಶರತ್ ಮಡಿವಾಳ ತಂದೆ ಆರೋಪ

ರಮಾನಾಥ ರೈ, ಪ್ರಕಾಶ್ ಶೆಟ್ಟಿ, ಎಮ್ಮೆಕೆರೆ ಸಲಾಂ ಇವರೆಲ್ಲಾ ಸೇರಿ ಉದ್ದೇಶಪೂರ್ವಕವಾಗಿ ಶರತ್ ಹತ್ಯೆ (sharath madiwala) ಮಾಡಿದರು ಎಂದು ಬಂಟ್ವಾಳದ ಆರ್​ಎಸ್​ಎಸ್ ​​ಕಾರ್ಯಕರ್ತ ಶರತ್ ಮಡಿವಾಳ ತಂದೆ ತನಿಯಪ್ಪ ಮಡಿವಾಳ ಆರೋಪ ಮಾಡಿದ್ದಾರೆ.

ನನ್ನ ಮಗನನ್ನು ಕೊಲೆ ಮಾಡಿಸಿದ್ದು ರಮಾನಾಥ ರೈ - ಬಂಟ್ವಾಳದ ಆರ್​ಎಸ್​ಎಸ್ ​​ಕಾರ್ಯಕರ್ತ ಶರತ್ ಮಡಿವಾಳ ತಂದೆ ಆರೋಪ
ನನ್ನ ಮಗನನ್ನು ಕೊಲೆ ಮಾಡಿಸಿದ್ದು ರಮಾನಾಥ ರೈ - ಬಂಟ್ವಾಳದ ಆರ್​ಎಸ್​ಎಸ್ ​​ಕಾರ್ಯಕರ್ತ ಶರತ್ ಮಡಿವಾಳ ತಂದೆ ಆರೋಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 23, 2022 | 12:41 PM

ಮಂಗಳೂರು: ನನ್ನ ಮಗ ಶರತ್ ಮಡಿವಾಳನನ್ನು ಕೊಲೆ ಮಾಡಿಸಿದ್ದು ಮಾಜಿ ಸಚಿವ ರಮಾನಾಥ ರೈ (Former minister ramanatha rai). ರಮಾನಾಥ ರೈ, ಪ್ರಕಾಶ್ ಶೆಟ್ಟಿ, ಎಮ್ಮೆಕೆರೆ ಸಲಾಂ ಇವರೆಲ್ಲಾ ಸೇರಿ ಉದ್ದೇಶಪೂರ್ವಕವಾಗಿ ಶರತ್ ಹತ್ಯೆ (sharath madiwala) ಮಾಡಿದರು ಎಂದು ಬಂಟ್ವಾಳದ ಆರ್​ಎಸ್​ಎಸ್ ​​ಕಾರ್ಯಕರ್ತ ಶರತ್ ಮಡಿವಾಳ ತಂದೆ ತನಿಯಪ್ಪ ಮಡಿವಾಳ ಆರೋಪ ಮಾಡಿದ್ದಾರೆ. ಆಗಿನ ಪೊಲೀಸ್ ಆಧಿಕಾರಿ ವಿಚಾರಣೆ ಕೂಡ ಮಾಡಿಲ್ಲ. ಆಗಿನ ಅಧಿಕಾರಿ ಆರ್​ಕೆ ದತ್ತಾ ಬಿ.ಸಿ. ರೋಡ್ ನಲ್ಲಿ ತಿರುಗಾಟ ನಡೆಸಿದ್ದರಷ್ಟೇ, ಯಾವುದೇ ರೀತಿಯ ವಿಚಾರಣೆ ನಡೆಸಿಲ್ಲವೆಂದು ಅವರು ಆರೋಪ ಮಾಡಿದ್ದಾರೆ.

ಯಾವ ಪೊಲೀಸ್ ಇಲಾಖೆಯೂ ಈವರೆಗೆ ನನ್ನನ್ನ ವಿಚಾರಿಸಿಲ್ಲ -ತನಿಯಪ್ಪ ಮಡಿವಾಳ ಆರೋಪ: ನನ್ನ ಮಗ ಶರತ್ ಮಡಿವಾಳನನ್ನು ರಮಾನಾಥ್ ರೈ, ಪ್ರಕಾಶ್ ಶೆಟ್ಟಿ ಮತ್ತು ಎಮ್ಮೆಕೆರೆ ಸಲಾಂ ಉದ್ದೇಶಪೂರ್ವಕವಾಗಿ ಕೊಲೆ ಮಾಡಿಸಿದರು. ಇವರು ಕೆಎಫ್ ಡಿ ಸಂಘಟನೆ ಮೂಲಕ ಮಾಡಿಸಿದ ಕೊಲೆ ಅಂತ ನನಗೆ ಸ್ಪಷ್ಟವಾಗಿ ಗೊತ್ತಾಗಿದೆ. ಆಗಿನ ಪೊಲೀಸ್ ಅಧಿಕಾರಿ ಆರ್‌.ಕೆ.ದತ್ತಾ ಬಿ.ಸಿ.ರೋಡ್ ನಲ್ಲಿ ತಿರುಗಿದ್ದು ಬಿಟ್ಟರೆ ನನ್ನ ವಿಚಾರಣೆ ಮಾಡಿಲ್ಲ. ಯಾವ ಪೊಲೀಸ್ ಇಲಾಖೆಯೂ ಈವರೆಗೆ ನನ್ನನ್ನ ವಿಚಾರಿಸಿಲ್ಲ. ನನಗೆ ಸರ್ಕಾರ ಯಾವ ಸೌಲಭ್ಯವನ್ನೂ ಕೊಟ್ಟಿಲ್ಲ, ನನ್ನದು ಈಗ ಕಷ್ಟದ ಜೀವನ. ಸಿದ್ದರಾಮಯ್ಯ ಶಾದಿ ಭಾಗ್ಯ ಎಲ್ಲಾ ಕೊಟ್ಟು ಮುಸಲ್ಮಾನರನ್ನೇ ನೋಡಿದ್ದು, ಹಿಂದೂಗಳನ್ನ ನೋಡಿಲ್ಲ ಎಂದು ತನಿಯಪ್ಪ ಮಡಿವಾಳ ಆರೋಪ ಮಾಡಿದ್ದಾರೆ.

’ಮುಸಲ್ಮಾನರನ್ನ ಓಲೈಸಿ ನನ್ನ ಮಗನನ್ನ ಕೊಲ್ಲಿಸೋಕೆ ಮೂಲ ಕಾರಣವೇ ರಮಾನಾಥ್ ರೈ’ ಮುಸಲ್ಮಾನರನ್ನ ಓಲೈಸಿ ನನ್ನ ಮಗನನ್ನ ಕೊಲ್ಲಿಸೋಕೆ ಮೂಲ ಕಾರಣವೇ ರಮಾನಾಥ್ ರೈ. ನನಗೆ ಬಂದ ಸ್ಥಿತಿ ಶಿವಮೊಗ್ಗದ ಹರ್ಷನ ತಂದೆಗೆ ಬರಬಾರದು. ಸರ್ಕಾರ ಅವರಿಗೆ ವ್ಯವಸ್ಥೆ ಮಾಡಬೇಕು. ನನಗೆ ಆಗಿನ ಕಾಂಗ್ರೆಸ್ ಸರ್ಕಾರ ಏನೂ ಸಹಾಯ ಮಾಡಿಲ್ಲ, ಬಿಜೆಪಿಯವರು ಅಳಿಲು ಸೇವೆ ಮಾಡಿದ್ದಾರೆ. ತಕ್ಷಣ ಪಿಎಫ್ ಐ ಮತ್ತು ಎಸ್ ಡಿಪಿಐ ಬ್ಯಾನ್ ಮಾಡಿ ನ್ಯಾಯ ಕೊಡಿಸಿ. ಹರ್ಷ ಸತ್ತದ್ದನ್ನ ಟಿವಿಯಲ್ಲಿ ‌ನೋಡಿ ನನಗೆ ಸಹಿಸಲು ಆಗಿಲ್ಲ. ನನ್ನ ಮಗನನ್ನ ಅಂಗಡಿಯೊಳಗೆ ಹೊಕ್ಕಿ ಕೊಂದದ್ದು, ಹರ್ಷನನ್ನ ಅಟ್ಟಾಡಿಸಿ ಕೊಂದದ್ದು. ನನ್ನ ಲೆಕ್ಕದಲ್ಲಿ ಈ ಎರಡೂ ಹತ್ಯೆಗಳು ಒಂದೇ ರೀತಿಯಲ್ಲಿ ಆಗಿವೆ. ಎಸ್ ಡಿಪಿಐನವರು ಕಾದು ಕೂತು ಮಾಡ್ತಾರೆ, ಹಿಂದೂಗಳನ್ನ ಟಾರ್ಗೆಟ್ ಮಾಡಿ ಕೊಲ್ತಾರೆ. ಎಸ್ ಡಿಪಿಐ ಮತ್ತು ಪಿಎಫ್ ಐಗೆ ದುಡ್ಡು ಕೊಟ್ಟು ಕೊಲೆ ಮಾಡಿಸ್ತಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ತಕ್ಷಣ ಪಿಎಫ್ ಐ ಮತ್ತು ಎಸ್ ಡಿಪಿಐ ಬ್ಯಾನ್ ಮಾಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ ಒಂಟಿ ಬೇಟೆ ಹರ್ಷನನ್ನು ಕ್ಲರ್ಕ್ ಪೇಟೆ ಯುವಕರು ಹತ್ಯೆ ಮಾಡಿದ ಇಂಚಿಂಚು ಮಾಹಿತಿ ಇಲ್ಲಿದೆ -TV9 Exclusive

ಇದನ್ನೂ ಓದಿ ಬೆಂಗಳೂರಲ್ಲಿ ನೇಪಾಳಿ ಗ್ಯಾಂಗ್ ರಾಬರಿ: ಮನೆಗೆಲಸದಾಕೆಯ ನಂಬಿ 1 ಕೋಟಿ ರೂ ಕಳೆದುಕೊಂಡ ಕುಟುಂಬ!

Published On - 12:26 pm, Wed, 23 February 22

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!