AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಇನ್ನೆರಡು ತಿಂಗಳಲ್ಲಿ ಸಂಚಾರಕ್ಕೆ ಮುಕ್ತ-NHAI

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಡುವಿನ ಬಿ.ಸಿ. ರಸ್ತೆ -ಅಡ್ಡಹೊಳೆ ಬಳಿಯ 63 ಕಿ.ಮೀ ಉದ್ದದ ಚತುಷ್ಪಥದ ಯೋಜನೆಯಲ್ಲಿ ಸುಮಾರು 20 ಕಿ.ಮೀ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಇನ್ನೆರಡು ತಿಂಗಳಲ್ಲಿ ಸಂಚಾರಕ್ಕೆ ಮುಕ್ತ-NHAI
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75
ಆಯೇಷಾ ಬಾನು
|

Updated on:Mar 24, 2023 | 2:24 PM

Share

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನಡುವಿನ ಬಿ.ಸಿ. ರಸ್ತೆ -ಅಡ್ಡಹೊಳೆ ಬಳಿಯ 63 ಕಿ.ಮೀ ಉದ್ದದ ಚತುಷ್ಪಥದ ಯೋಜನೆಯಲ್ಲಿ ಸುಮಾರು 20 ಕಿ.ಮೀ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿ ತಿಳಿಸಿದ್ದಾರೆ. ಈಗಾಗಲೇ 14 ಕಿ.ಮೀ ಚತುಷ್ಪಥ ಕಾಮಗಾರಿ ಪೂರ್ಣಗೊಂಡಿದ್ದು, ಮಳೆಗಾಲದ ವೇಳೆಗೆ ಇನ್ನೂ 6 ಕಿ.ಮೀ ಸಿದ್ಧಗೊಳ್ಳಲಿದೆ ಎಂದು ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಂಗಳೂರು ಯೋಜನಾ ಕಚೇರಿಯ ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಲಿಂಗೇಗೌಡ ಮಾತನಾಡಿ, 14 ಕಿಮೀ ಚತುಷ್ಪಥ ಕಾಮಗಾರಿ ಮುಗಿದಿದೆ. ಮಳೆಗಾಲದ ವೇಳೆಗೆ ಇನ್ನೂ 6 ಕಿ.ಮೀ ಸಿದ್ಧಗೊಳ್ಳುವ ನಿರೀಕ್ಷೆ ಇದೆ. ಮಳೆಗಾಲದಲ್ಲೂ ಕಾಮಗಾರಿ ಮುಂದುವರಿಯುತ್ತಿತ್ತು. ಕಲ್ಲಡ್ಕ ಮೇಲ್ಸೇತುವೆಯ ಶೇ.30ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, 2024ರ ಜನವರಿ ವೇಳೆಗೆ ಮೇಲ್ಸೇತುವೆ ಸಿದ್ಧಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಇದನ್ನೂ ಓದಿ: ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

ಬಿಕರ್ನಕಟ್ಟೆ (ಮಂಗಳೂರು)-ಸಾಣೂರು (ಕಾರ್ಕಳ) ಚತುಷ್ಪಥ ಯೋಜನೆ ಕುರಿತು ಉಲ್ಲೇಖಿಸಿದ ಅವರು, ಯೋಜನೆಗೆ ಅಗತ್ಯವಿರುವ ಸುಮಾರು 62.5 ಎಕರೆ ಭೂಮಿ ವ್ಯಾಜ್ಯದಲ್ಲಿದೆ ಎಂದರು. 14 ಗ್ರಾಮಗಳಿಗೆ ಸಂಬಂಧಿಸಿದಂತೆ 15 ರಿಟ್ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಹೀಗಾಗಿ ಈ ಯೋಜನೆಯ ಪ್ರಗತಿಯಲ್ಲಿ ವಿಳಂಬವಾಗಿದೆ. 6.5 ಕಿ.ಮೀ ರಸ್ತೆ ಸಿದ್ಧವಾಗಿದೆ. 45 ಕಿಮೀ ಯೋಜನೆಯ ಪ್ರಗತಿಯು ಕಳೆದ ಐದು ತಿಂಗಳಲ್ಲಿ 12% ರಷ್ಟಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:24 pm, Fri, 24 March 23

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು