Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿದು ಹತ್ಯೆಗೈದ ಸ್ನೇಹಿತರು! ಹುಬ್ಬಳ್ಳಿಯಲ್ಲಿ ಗ್ರಾ.ಪಂ. ಸದಸ್ಯನ ಭೀಕರ ಕೊಲೆ

ಗಾಂಜಾ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಕೊಲೆ ನಡೆದಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿದು ಹತ್ಯೆಗೈದ ಸ್ನೇಹಿತರು! ಹುಬ್ಬಳ್ಳಿಯಲ್ಲಿ ಗ್ರಾ.ಪಂ. ಸದಸ್ಯನ ಭೀಕರ ಕೊಲೆ
ಮೊಹ್ಮದ್ ಆಸಿಫ್
Follow us
TV9 Web
| Updated By: sandhya thejappa

Updated on:Jul 05, 2022 | 12:00 PM

ಮಂಗಳೂರು: ಸ್ನೇಹಿತರೇ (Friends) ಯುವಕನಿಗೆ ಚಾಕುವಿನಿಂದ ಇರಿದು ಕೊಲೆ (Murder) ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬದ ತಲಪಾಡಿ ಬಳಿ ನಡೆದಿದೆ. ಮೊಹ್ಮದ್ ಆಸಿಫ್(29) ಹತ್ಯೆಯಾದ ಯುವಕ. ಸ್ನೇಹಿತ ನೌಫಾಲ್, ಮೊಹ್ಮದ್ ನೌಸೀರ್ ಕೊಲೆ ಮಾಡಿರುವ ಆರೋಪಿಗಳು. ಗಾಂಜಾ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಕೊಲೆ ನಡೆದಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡನನ್ನೇ ಕೊಲೆ ಮಾಡಿದ ಹೆಂಡತಿ: ಕ್ಷುಲ್ಲಕ ಕಾರಣಕ್ಕೆ ಹೆಂಡತಿ ಗಂಡನನ್ನೇ ಕೊಲೆ ಮಾಡಿದ್ದಾಳೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬಂನ್ ಕರೆ ಮನೆಯಲ್ಲಿ ಈ ಘಟನೆ ನಡೆದಿದೆ. ಬೇಬಿ ಅಲಿಯಾಸ್​ ಬೇಬಿ(55) ಕೊಲೆಯಾದ ವ್ಯಕ್ತಿ. ಕತ್ತಿಯಿಂದ ಇರಿದು ಪತ್ನಿ ನಲ್ಲಮ್ಮ ಹತ್ಯೆಗೈದಿದ್ದಾಳೆ. ಕೊಲೆ‌ ಮಾಡಿದ ಬಳಿಕ ಆರೋಪಿ ಮಹಿಳೆ ಕತ್ತಿ ಹಿಡಿದು ಕುಳಿತಿದ್ದಾಳೆ.

ಇದನ್ನೂ ಓದಿ: ಕರ್ನಾಟಕದ ಹಲವೆಡೆ ಭಾರಿ ಮಳೆ, ಇಲ್ಲಿದೆ ಕೆಲವು ಅವಾಂತರಗಳ ಫೋಟೋಗಳು

ಇದನ್ನೂ ಓದಿ
Image
Jasprit Bumrah: ಕಪಿಲ್ ದೇವ್ ಹೆಸರಲ್ಲಿದ್ದ ಮತ್ತೊಂದು ದಾಖಲೆ ಪುಡಿ ಪುಡಿ ಮಾಡಿದ ಜಸ್​ಪ್ರೀತ್ ಬುಮ್ರಾ
Image
Petrol Price Today: ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆಗೆ ಏಕನಾಥ ಶಿಂದೆ ಕ್ರಮ; ಬೆಂಗಳೂರು ಸೇರಿದಂತೆ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ
Image
Sai Pallavi: ಯಾರು ಎಷ್ಟೇ ಟೀಕೆ ಮಾಡಿದ್ರೂ ಸಾಯಿ ಪಲ್ಲವಿ ನಂ.1; ಧೂಳೆಬ್ಬಿಸುತ್ತಿದೆ ‘ವಿರಾಟ ಪರ್ವಂ’ ಸಿನಿಮಾ
Image
ಐಎಂಎ ಪ್ರಕರಣ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್​ ಮನೆ ದಾಳಿ ನಡೆಸಿದ ಎಸಿಬಿ

ಗ್ರಾ.ಪಂ. ಸದಸ್ಯನ ಭೀಕರ ಕೊಲೆ: ಹುಬ್ಬಳ್ಳಿ: ಗಂಗಿವಾಳ ಗ್ರಾ.ಪಂ. ಸದಸ್ಯನನ್ನು ರಾಯನಾಳ ಗ್ರಾಮದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೀಪಕ್ ಪಠದಾರಿ ಕೊಲೆಯಾದ ಗ್ರಾ.ಪಂ. ಸದಸ್ಯ. ಪ್ರೇಮ ವಿವಾಹ, ರಾಜಕೀಯ ದ್ವೇಷದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ದೀಪಕ್ ಪಠದಾರಿ ಹಳೇ ಹುಬ್ಬಳ್ಳಿ ಠಾಣೆ ರೌಡಿಶೀಟರ್ ಆಗಿದ್ದ. ಕೊಲೆ ಆರೋಪಿಗಳ ಪತ್ತೆಗೆ ಡಿಸಿಪಿ ವಿಶೇಷ ತಂಡ ರಚಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಣ್ಣೀರು ಹಾಕುತ್ತಿರುವ ದೀಪಕ್ ಪತ್ನಿ ಪುಷ್ಮಾ, ನನ್ನ ಹೆತ್ತವರೇ ಗಂಡನನ್ನ ಕೊಂದಿದ್ದಾರೆ. ರಾಜಕೀಯವಾಗಿ ಆತ ಬೆಳೆಯುತ್ತಿದ್ದ. ಅದನ್ನ ಸಹಿಸೋಕೆ ಆಗಿಲ್ಲ. ನಾವು ಲವ್ ಮ್ಯಾರೆಜ್ ಆಗಿ ನಾಲ್ಕು ವರ್ಷ ಆಯಿತು. ಎಲ್ಲಾ ಚೆನ್ನಾಗೇ ಇದ್ದೆವು. ಅದೇ ಅವರಿಗೆ ಸಹಿಸೋಕೆ ಆಗಿಲ್ಲ. ನಮ್ಮ ಮನೆ ಆಧಾರ ಸ್ತಂಭವೇ ಹೋಯಿತು‌. ನನ್ನ ಸಹೋದರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.

Published On - 11:44 am, Tue, 5 July 22

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ