ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್, ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧವೂ ಕ್ರಮ: ಪರಮೇಶ್ವರ್

ಸುಹಾಸ್ ಶೆಟ್ಟಿ ಕೊಲೆಯ ನಂತರ ಮಂಗಳೂರಿನಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯನ್ನು ಗಮನಿಸಿ, ಗೃಹ ಸಚಿವರು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರತ್ಯೇಕವಾದ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸುವ ಘೋಷಣೆ ಮಾಡಿದರು. ಜತೆಗೆ, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್, ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧವೂ ಕ್ರಮ: ಪರಮೇಶ್ವರ್
ಗೃಹ ಸಚಿವ ಡಾ. ಜಿ ಪರಮೇಶ್ವರ್
Edited By:

Updated on: May 03, 2025 | 1:07 PM

ಮಂಗಳೂರು, ಮೇ 3: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ (Suhas Shettyಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ (G Parameshwara) ಶನಿವಾರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು ಎಂದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಪಟ್ಟ 8 ಮಂದಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರೇ ನೀಡಲಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಮಂದಿರ ಎರಡು ವಾರಗಳಲ್ಲಿ ಆರಂಭವಾಗಲಿದೆ. ಈ ಟಾಸ್ಕ್ ಫೋರ್ಸ್ ಪೊಲೀಸರ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದು ಪರಮೇಶ್ವರ ತಿಳಿಸಿದರು.

ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 8 ಮಂದಿಯ ಪೈಕಿ ಚಿಕ್ಕಮಗಳೂರಿನ ಇಬ್ಬರು ಹಿಂದೂಗಳು ಇದ್ದಾರೆ ಎಂಬ ವದಂತಿ ಇದ್ದು, ಈ ಬಗ್ಗೆ ಪರಮೇಶ್ವರ ಯಾವುದೇ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್​ ಶೆಟ್ಟಿ ಕೊಲೆ: ಮಂಗಳೂರು ಸುತ್ತಮುತ್ತ 3 ಮಂದಿಗೆ ಚಾಕು ಇರಿತ
ಸುಹಾಸ್ ಹತ್ಯೆ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ
ಮಂಗಳೂರು: ಸುಹಾಸ್ ಹತ್ಯೆ ಬೆನ್ನಲ್ಲೇ 'ಫಿನೀಶ್' ಎಂಬ ಪೋಸ್ಟ್ ಬಹಿರಂಗ!

ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ

ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ಭರವಸೆ ನೀಡಿದರು. ಕೇರಳ ಮೂಲದ ಅಶ್ರಫ್ ಹತ್ಯೆ ಪ್ರಕರಣದಲ್ಲಿ ಈಗಾಗಲೇ 21 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿದೆ. ಯಾವುದೇ ಸಮುದಾಯದವರು ಆಗಲೀ, ಕಾನೂನು ಉಲ್ಲಂಘನೆ ಮಾಡಲು ಬಿಡುವುದಿಲ್ಲ. ಇನ್ನು ಮುಂದೆ ಇಂತಹ ಘಟನೆಗಳು ಜಿಲ್ಲೆಯಲ್ಲಿ ನಡೆಯಬಾರದು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಬಿಡುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ

ಪರಮೇಶ್ವರ್ ನೇತೃತ್ವದ ಸಭೆಯಲ್ಲಿ ಗದ್ದಲ

ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ನಡೆದ ಸಭೆಯ ವೇಳೆ ಮುಸ್ಲಿಂ ಮುಖಂಡರು ಗದ್ದಲ ಸೃಷ್ಟಿಸಿದರು. ಗೃಹ ಸಚಿವರ ಜೊತೆ ಚರ್ಚಿಸಲು ತೆರಳಿದ್ದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ಟೇಬಲ್ ಬಡೆದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಶ್ರಫ್ ಕೊಲೆ ಬಗ್ಗೆ ಸ್ಥಳೀಯರಿಂದ ಪರಮೇಶ್ವರ ಮಾಹಿತಿ ಪಡೆದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us